ಕಾರು ಹತ್ತುವ ವೇಳೆ ಆಯ ತಪ್ಪಿ ಕುಸಿದು ಬಿದ್ದ ಸಿದ್ದರಾಮಯ್ಯ; ಆತಂಕ ಬೇಡ-ಸಿದ್ದು ಟ್ವೀಟ್
ಡಾ. ಎನ್.ಟಿ.ಶ್ರೀನಿವಾಸ್ ಅವರ ಪರ ಪ್ರಚಾರ ನಡೆಸಲು ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ.
Team Udayavani, Apr 29, 2023, 1:09 PM IST
ಹೊಸಪೇಟೆ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ತೆರಳಿದ್ದ ವೇಳೆ ಹೆಲಿಪ್ಯಾಡ್ ನಲ್ಲಿ ನೆರೆದಿದ್ದ ಜನರತ್ತ ಕೈಬೀಸುತ್ತಿರುವಾಗಲೇ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಕುಸಿದು ಬೀಳುತ್ತಿರುವುದನ್ನು ಗಮನಿಸಿದ ಅಂಗರಕ್ಷಕ ಅವರ ನೆರವಿಗೆ ಧಾವಿಸಿರುವ ಘಟನೆ ವಿಜಯನಗರದ ಕೂಡ್ಲಿಗಿಯಲ್ಲಿ ಶುಕ್ರವಾರ (ಎ.29) ನಡೆದಿದೆ.
ಇದನ್ನೂ ಓದಿ:Desi Swara; ಅಮೆರಿಕದಲ್ಲಿ ಸೀತಾ ಕಲ್ಯಾಣ; ಹೊರದೇಶದಲ್ಲಿ ಅರಳುತ್ತಿದೆ ಸನಾತನ ಸಂಸ್ಕೃತಿ
ಸಿದ್ದರಾಮಯ್ಯನವರು ನಿಗದಿತ ಕಾರ್ಯಕ್ರಮದ ಅಂಗವಾಗಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪರಿಶಿಷ್ಟ ಪಂಗಡ ಮೀಸಲು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್.ಟಿ.ಶ್ರೀನಿವಾಸ್ ಅವರ ಪರ ಪ್ರಚಾರ ನಡೆಸಲು ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ.
ಹೆಲಿಪ್ಯಾಡ್ ಸುತ್ತ ನೆರದಿದ್ದ ಜನಸ್ತೋಮದತ್ತ ಸಿದ್ದರಾಮಯ್ಯನವರು ಕೈಬೀಸಿದ್ದ ನಂತರ ಕಾರಿನೊಳಗೆ ಕುಳಿತುಕೊಳ್ಳಲು ಸಂದರ್ಭದಲ್ಲಿ ಆಯ ತಪ್ಪಿ ಕುಸಿದು ಬೀಳುತ್ತಿದ್ದ ಸಿದ್ದರಾಮಯ್ಯನವರನ್ನು ಅಂಗರಕ್ಷಕ ತಡೆದು ಕಾರಿನೊಳಗೆ ಕುಳ್ಳಿರಿಸಿದ್ದರು.
ತಕ್ಷಣವೇ ಸಿದ್ದರಾಮಯ್ಯನವರ ಆಪ್ತರೊಬ್ಬರು ಮಜ್ಜಿಗೆ ನೀರನ್ನು ಕೊಟ್ಟು ಉಪಚರಿಸಿದ್ದರು. ನಂತರ ಕಾರಿನಲ್ಲಿ ಕಾರ್ಯಕ್ರಮದ ವೇದಿಕೆಯತ್ತ ತೆರಳಿರುವುದಾಗಿ ವರದಿ ತಿಳಿಸಿದೆ.
ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ.
ನಿತ್ಯ ಅಡ್ಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ.
ಈಗ ಆರಾಮಾಗಿದ್ದೇನೆ.
ಇದನ್ನು ಅತಿರಂಜಿತ ರೀತಿಯಲ್ಲಿ ವರದಿಮಾಡಿ ಜನ ಗಾಬರಿ ಪಡುವಂತೆ ಮಾಡಬೇಡಿ ಎಂದು ಮಾಧ್ಯಮ ಮಿತ್ರರಲ್ಲಿ ವಿನಂತಿ.— Siddaramaiah (@siddaramaiah) April 29, 2023
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು, ಗಾಬರಿಪಡುವಂತಹದ್ದೇನಿಲ್ಲ. ಗಟ್ಟಿಮುಟ್ಟಾಗಿದ್ದೇನೆ. ಕಾರಿನಲ್ಲಿ ಸೈಡ್ ಸ್ಟೆಪ್ ಇಲ್ಲದ ಕಾರಣ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೇನೆ. ಈಗ ಆರಾಮವಾಗಿದ್ದೇನೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು