ಹೊರ ರಾಜ್ಯದಲ್ಲಿ ಸಿಲುಕಿರುವ ರಾಜ್ಯದ ಕಾರ್ಮಿಕರ ರಕ್ಷಣೆಗೆ ಸಿದ್ದರಾಮಯ್ಯ ಆಗ್ರಹ
Team Udayavani, May 10, 2020, 9:10 PM IST
ಬೆಂಗಳೂರು: ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿರುವ ರಾಜ್ಯದ ಕಾರ್ಮಿಕರು ಸ್ವಂತ ಊರುಗಳನ್ನು ತಲುಪಲು ಸರಕಾರ ಕೂಡಲೇ ವ್ಯವಸ್ಥೆ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿರುವ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಿಕೊಡಲು ಮತ್ತು ಹೊರ ರಾಜ್ಯಗಳಲ್ಲಿರುವವರನ್ನು ಇಲ್ಲಿಗೆ ಕರೆತರಲು ಸರಕಾರ ರೈಲು ವ್ಯವಸ್ಥೆ ಮಾಡಬೇಕು. ಕಾರ್ಮಿಕರ ಪ್ರಯಾಣ ವೆಚ್ಚದಲ್ಲಿ ಶೇ.85ರಷ್ಟನ್ನು ಭರಿಸುವುದಾಗಿ ಕೇಂದ್ರ ಸರಕಾರ ಈಗಾಗಲೇ ಹೇಳಿದೆ. ಉಳಿದ ವೆಚ್ಚವನ್ನು ರಾಜ್ಯ ಸರಕಾರ ಭರಿಸುವ ಮೂಲಕ ಕಾರ್ಮಿಕರ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಬೇಕು. ಇದಕ್ಕಾಗಿ ಮಾಡುವ ವೆಚ್ಚ ಸರಕಾರಕ್ಕೆ ದೊಡ್ಡ ಹೊರೆಯಾಗುವುದಿಲ್ಲ.
ಬೆಂಗಳೂರಿನಿಂದ ಹೋಗುವ ಕಾರ್ಮಿಕರಿಗೆ ಅಕ್ಕಪಕ್ಕದ ಜಿಲ್ಲೆಗಳ ರೈಲ್ವೇ ನಿಲ್ದಾಣಕ್ಕೆ ಹೋಗುವಂತೆ ಹೇಳಿದೆಯಾದರೂ ಅಲ್ಲಿಗೆ ಹೋಗಲು ಯಾವುದೇ ಸೌಕರ್ಯ ಇಲ್ಲದ ಕಾರಣ ಅವರಿಗೆ ಬಸ್ ವ್ಯವಸ್ಥೆ ಮಾಡಬೇಕು. ಕಾರ್ಮಿಕರು ಸುರಕ್ಷಿತವಾಗಿ ಊರು ತಲುಪುವವರೆಗೆ ಊಟದ ಸೌಲಭ್ಯವನ್ನೂ ಒದಗಿಸಬೇಕು ಎಂದವರು ಸರಕಾರವನ್ನು ಆಗ್ರಹಿಸಿದ್ದಾರೆ.
ಕಾರ್ಮಿಕರ ವಿಚಾರದಲ್ಲಿ ಸರಕಾರ ತನ್ನ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯ ಧೋರಣೆ ಬಿಡಬೇಕು. ಪರಿಸ್ಥಿತಿಯನ್ನು ಎಚ್ಚರಿಕೆ ಮತ್ತು ಮಾನವೀಯತೆಯಿಂದ ನಿಭಾಯಿಸಬೇಕೆಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ