ಅನಿವಾಸಿ ಕನ್ನಡಿಗರಿಗೆ ವಿಮಾನ ಸೇವೆ ಕಲ್ಪಿಸಲು ಸಿದ್ದರಾಮಯ್ಯ ಪತ್ರ
Team Udayavani, May 31, 2020, 9:05 PM IST
ಬೆಂಗಳೂರು: ವಿದೇಶಗಳಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ರಾಜ್ಯಕ್ಕೆ ವಾಪಸ್ ಕರೆತರಲು ಅಗತ್ಯ ವಿಮಾನ ಸೇವೆ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಅವರು, ಯುರೋಪ್, ಅಮೇರಿಕಾ, ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರು ವಿಜ್ಞಾನಿಗಳು, ವೈದ್ಯರು, ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವವರು, ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ. ಅವರು ರಾಜ್ಯಕ್ಕೆ ವಾಪಸ್ ಬರಲು ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತಿವೆ.
ನೆರ್ದಲ್ಯಾಂಡ್ ನ ಅಮಸ್ಟರ್ ಡ್ಯಾಮ್ ನಿಂದ ಬೆಂಗಳೂರಿಗೆ ಆಗಮಿಸಲು ವಿಮಾನ ವ್ಯವಸ್ಥೆ ಇಲ್ಲದಿರುವುದರಿಂದ, ಅಲ್ಲಿಂದ ಬರುವ ಕನ್ನಡಿಗರು ದೆಹಲಿಗೆ ಆಗಮಿಸಿ ಅಲ್ಲಿ ಕ್ವಾರಂಟೈನ್ ಗೆ ಒಳಗಾಗಿ ಅಲ್ಲಿಂದ ಬೆಂಗಳೂರಿಗೆ ಬಂದು ಕ್ವಾರಂಟೈನ್ ಗೆ ಒಳಗಾಗಬೇಕಾದ ಪರಿಸ್ಥಿತಿ ಇದೆ.
ಹೀಗಾಗಿ ನೇರವಾಗಿ ಬೆಂಗಳೂರಿಗೆ ವಿಮಾನ ಬರಲು ವ್ಯವಸ್ಥೆ ಕಲ್ಪಿಸಬೇಕು ಅದರಂತೆ ಅಮೆರಿಕಾ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ಸಾಕಷ್ಟು ಸಂಖ್ಯೆಯ ಕನ್ನಡಿಗರು ರಾಜ್ಯಕ್ಕೆ ವಾಪಸ್ ಬರಲು ಕಾಯುತ್ತಿರುವುದರಿಂದ ಅವರನ್ನು ವಾಪಸ್ ಕರೆಸಲು ಹೆಚ್ಚಿನ ವಿಮಾನಯಾನ ಸೇವೆ ಒದಗಿಸಲು ಕ್ರಮ ಕೈಗೊಳ್ಳುವಂತೆ ಪತ್ರದ ಮೂಲಕ ಆಗ್ರಹಿಸಿದ್ದಾರೆ. ಅಲ್ಲದೇ ವಿದೇಶದಿಂದ ಬರುವ ಪ್ರಜೆಗಳನ್ನು ತಪಾಸಣೆ ಮಾಡಿ ಅಗತ್ಯ ಕ್ವಾರಂಟೈನ್ ಮಾಡುವಂತೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!