ಕನಸು ಹುಟ್ಟಿಸಿದ ಸಿದ್ದರಾಮಯ್ಯ ನಡೆ: ಬಾದಾಮಿಯಲ್ಲಿ ಕೈ ಕಾರ್ಯಕರ್ತರ ಒಗ್ಗಟ್ಟಿನ ಮಂತ್ರ


Team Udayavani, Mar 19, 2023, 9:09 PM IST

1-sdadsadasd

ಕುಳಗೇರಿ ಕ್ರಾಸ್: ಸಿದ್ದರಾಮಯ್ಯನವರು ಮಾ. 24ರಂದು ಕ್ಷೇತ್ರಕ್ಕೆ ಆಗಮಿಸಲಿದ್ದು ಬಾದಾಮಿ ಎಪಿಎಂಸಿ ಆವರಣದಲ್ಲಿ ಸುಮಾರು 500 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕ್ಷೇತ್ರದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಯಕ್ಕಪ್ಪನವರ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ಕುಳಗೇರಿ ಗ್ರಾಮದ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ ಸಿದ್ಧರಾಮಯ್ಯವರನ್ನ ಮತ್ತೆ ಕ್ಷೇತ್ರಕ್ಕೆ ಬರುವಂತೆ ಮನವಿ ಮಾಡೋಣ ಎಂದರು.

ಮುಖಂಡ ಹೊಳಬಸು ಶೆಟ್ಟರ ಮಾತನಾಡಿ ಈ ಹಿಂದೆ ಆಕಸ್ಮಿಕ ನಮ್ಮ ಕ್ಷೇತ್ರಕ್ಕೆ ಬಂದು ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ ಸಿದ್ಧರಾಮಯ್ಯನವರು ಪ್ರಚಾರಕ್ಕೆ ಬಾರದೇ ಇದ್ದರೂ ತಾವೆಲ್ಲ ಅವರನ್ನ ಶಾಸಕರನ್ನಾಗಿ ಆಯ್ಕೆ ಮಾಡಿದ್ದಿರಿ. ಅದರಂತೆ ರಾಜ್ಯದಲ್ಲಿಯೇ ಹೆಚ್ಚು ಅನುದಾನ ತಂದು ಕ್ಷೇತ್ರ ಅಭಿವೃದ್ಧಿ ಮಾಡಿ ಜನರ ಋಣ ತಿರಿಸುವ ಕೆಲಸ ಮಾಡಿದ್ದಾರೆ. ಈ ಬಾರಿಯೂ ಬಾದಾಮಿಯಿಂದಲೇ ಸ್ಪರ್ಧೆ ಮಾಡಿ ರಾಜ್ಯದ ಮುಖ್ಯಮಂತ್ರಿಯಾದರೆ ಕ್ಷೇತ್ರ ಇನ್ನು ಹೆಚ್ಚು ಅಭಿವೃದ್ಧಿ ಹೊಂದುತ್ತದೆ ಎಂಬ ಕನಸನ್ನ ಇಟ್ಟುಕೊಂಡಿರುವ ಕ್ಷೇತ್ರದ ಜನತೆ ಈ ಬಾರಿ
ಪಕ್ಷಾತೀತವಾಗಿ ಅವರನ್ನ ಆಯ್ಕೆ ಮಾಡಲಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ರಾಜ್ಯದ ನಾಯಕರಲ್ಲ ರಾಷ್ಟ್ರನಾಯಕರು ಸಿದ್ಧಯಾಮಯ್ಯ. ಕಾಂಗ್ರೆಸ್ ಅನ್ನುವ ಮಟ್ಟಿಗೆ ಹೈ ಕಮಾಂಡ್ ಅವರನ್ನ ಗುರುತಿಸಿದೆ. ಕಾರಣ ಮಾರ್ಚ 24ರಂದು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಎಲ್ಲರೂ ಒಗ್ಗಟ್ಟಿನಿಂದ ಸಿದ್ದರಾಮಯ್ಯನವರನ್ನ
ಮನವೊಲಿಸುವ ಕೆಲಸ ಮಾಡಿ ಈ ಬಾರಿ ಆಯ್ಕೆ ಮಾಡೋಣ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಎಂ ಬಿ ಹಂಗರಗಿ ಮಾತನಾಡಿ ಮಾಜಿ ಸಿಎಂ ಸಿದ್ಧರಾಮಯ್ಯನವರು ಒಂದು ಕಪ್ಪುಚುಕ್ಕಿ ಇಲ್ಲದೇ ರಾಜ್ಯ ಆಳಿದವರು. ಇಂಥ ವ್ಯಕ್ತಿ ನಮ್ಮ ಕ್ಷೇತ್ರಕ್ಕೆ ಬಂದಿದ್ದು ನಮ್ಮ ಪುಣ್ಯ. ನಾವು ಸಾಕಷ್ಟು ಬಾರಿ ಕೇಳಿದರೂ ಬಾದಾಮಿಗೆ ಬರೋದಿಲ್ಲ ಎಂದು ಹೇಳಿದ್ದಾರೆ. ಆದರೆ ನಿನ್ನೆಯ ಬೆಳವಣಿಗೆ
ನೋಡಿದರೆ ಮತ್ತೆ ನಮ್ಮ ಬಾದಾಮಿ ಕ್ಷೇತ್ರಕ್ಕೆ ಬರಬಹುದು ಎಂಬ ನಂಬಿಕೆ-ಆಶೆ ಕ್ಷೇತ್ರದ ಕಾರ್ಯಕರ್ತರಲ್ಲಿ ಹುಟ್ಟಿಕೊಂಡಿದೆ. ನಾವು ಅವರನ್ನ ಮನವಲಿಸಿ ಕ್ಷೇತ್ರಕ್ಕೆ ಬರುವಂತೆ ಮೇಲಿಂದ ಮೇಲೆ ಕೇಳಿಕೊಳ್ಳೋಣ ಎಂದರು.

ಮುಖಂಡ ಈರನಗೌಡ ಕರಿಗೌಡ್ರ ಮಾತನಾಡಿ ಪಕ್ಷದ ಮುಖಂಡರು ಒಗ್ಗಟ್ಟಾಗಿ ಮಾಜಿ ಸಚಿವರಾದ ಬಿ.ಬಿ. ಚಿಮ್ಮನಕಟ್ಟಿಯವರನ್ನ ಗಮನದಲ್ಲಿಟ್ಟುಕೊಂಡು ಮತ್ತೆ ಸಿದ್ದರಾಮಯ್ಯನವರನ್ನ ಕ್ಷೇತ್ರಕ್ಕೆ ಬರಮಾಡಿಕೊಂಡಿದ್ದೇ ಆದರೆ ಅವರು ಮತ್ತೆ ಶಾಸಕರಾಗಿ ರಾಜ್ಯದ
ಮುಖ್ಯಮಂತ್ರಿಯಾಗಿ ಆಯ್ಕೆ ಆಗುವುದರಲ್ಲಿ ಸಂದೆಹವೇ ಇಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಮುಖಂಡ ಪಿ ಆರ್ ಗೌಡರ, ನಾಗಪ್ಪ ಅಡಪಟ್ಟಿ, ಮಹಾಂತೇಶ ಹಟ್ಟಿ, ರಾಮಣ್ಣ ಡೊಳ್ಳಿನ, ಶಶಿ ಉದಗಟ್ಟಿ, ಬಸವರಾಜ ಬ್ಯಾಹಟ್ಟಿ, ಹನಮಂತ ದೇವರಮನಿ, ರೇವಣಸಿದ್ದಪ್ಪ ನೋಟಗಾರ, ಗಿರೀಶ ಅಂಕಲಗಿ, ಮುತ್ತಪ್ಪ ಗಾಜಿ ಮಾತನಾಡಿದರು.

ಸಣ್ಣಬೀರಪ್ಪ ಪೂಜಾರ, ವೆಂಕಣ್ಣ ಹೊರಕೇರಿ, ಬಸು ಕಟ್ಟಿಕಾರ, ಶೇಖಪ್ಪ ಪವಾಡಿನಾಯ್ಕರ್, ಲಕ್ಷ್ಮಣ ದಾದನಟ್ಟಿ, ಸಣ್ಣಬೀರಪ್ಪ ದ್ಯಾವನಗೌಡ್ರ, ಡಿ ಎನ್ ಪಾಟೀಲ, ಮುದಕಣ್ಣ ಹೆರಕಲ್, ಆನಂದ ಕರಲಿಂಗನ್ನವರ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.