ಇಂದಿರಾ ಕ್ಯಾಂಟೀನ್ ವಿಚಾರ: ಸಿಎಂ ಬಿಎಸ್ ವೈ ಗೆ ಕರೆ ಮಾಡಿದ ಸಿದ್ದರಾಮಯ್ಯ
Team Udayavani, Apr 6, 2020, 11:48 AM IST
ಬೆಂಗಳೂರು: ಇಂದಿರಾ ಕ್ಯಾಂಟೀನ್ ನಲ್ಲಿ ನೀಡುತ್ತಿದ್ದ ತಿಂಡಿ, ಊಟ ನಿಲ್ಲಿಸಿರುವ ವಿಷಯದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.
ಊಟ, ತಿಂಡಿ ನಿಲ್ಲಿಸಿರುವ ಕುರಿತು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ದೂರವಾಣಿ ಕರೆ ಮಾಡಿ, ಊಟ, ತಿಂಡಿ ಉಚಿತವಾಗಿ ನೀಡಲಾಗುತ್ತಿತ್ತು. ಆದರೆ ದುರುಪಯೋಗವಾದ ಕಾರಣ ದರ ನಿಗದಿ ಮಾಡಿರುವುದಾಗಿ ತಿಳಿಸಿದರು.
ದುರುಪಯೋಗವಾಗದಂತೆ ಊಟ, ತಿಂಡಿಯನ್ನು ಇಂದಿರಾ ಕ್ಯಾಂಟೀನ್ ಮೂಲಕ ಬಡವರಿಗೆ ಉಚಿತವಾಗಿ ನೀಡಿ. ದುರುಪಯೋಗಕ್ಕೆ ಅವಕಾಶ ಮಾಡಿಕೊಡುವ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ ಎಂದು ಸಿದ್ದರಾಮಯ್ಯ ಅವರು ಹೇಳಿದರು.
ಈ ಕುರಿತು ಪರಿಶೀಲನೆ ನಡೆಸುವುದಾಗಿ ಯಡಿಯೂರಪ್ಪ ಅವರು ಮಾತುಕತೆ ವೇಳೆ ಸಿದ್ದರಾಮಯ್ಯ ಅವರಿಗೆ ತಿಳಿಸಿದರು.
ಲಾಕ್ ಡೌನ್ ನಿಂದ ರೈತರು, ಕೃಷಿ ಕೂಲಿ ಕಾರ್ಮಿಕರು, ಜತೆಗೆ ಹಲವಾರು ಕ್ಷೇತ್ರಗಳ ದುಡಿಯುವ ವರ್ಗದವರಿಗೆ ತೊಂದರೆಯಾಗಿದೆ. ಅವರ ನೆರವಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಇದೇ ವೇಳೆ ಸಿದ್ದರಾಮಯ್ಯ ಅವರು ಒತ್ತಾಯಿಸಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಬಿ ಎಸ್ ವೈ, ಪ್ರತಿಪಕ್ಷಗಳ ಸಲಹೆ, ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮ ರೂಪಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊರಟದ್ದು ಕೊಲ್ಲೂರಿಗೆ; ತಲುಪಿದ್ದು ಗೋವಾಕ್ಕೆ! ಬಸ್ ಚಾಲಕನ ಯಡವಟ್ಟಿಗೆ ಯಾತ್ರಾರ್ಥಿಗಳು ಗರಂ
ಭಗತ್ ಸಿಂಗ್ ಕೈಬಿಟ್ಟಿಲ್ಲ , ಹೆಡ್ಗೆವಾರ್ ಸೇರ್ಪಡೆ ತಪ್ಪಿಲ್ಲ;
4ರ ಅದೃಷ್ಟ ಯಾರಿಗೆ? ರಾಜ್ಯಸಭೆ ಚುನಾವಣೆಯಲ್ಲಿ ಮತ್ತೆ ಕುದುರೆ ವ್ಯಾಪಾರದ ಭೀತಿ
ಕೆಎಸ್ಆರ್ಟಿಸಿ ಸಿಬಂದಿ ಕೊರತೆ; ನಿವೃತ್ತ ಚಾಲಕರ ಮೊರೆ
“ಇಸ್ಲಾಮಿಕ್ ಆಕ್ರಮಿತ ದೇಗುಲಗಳನ್ನು ತೆರವುಗೊಳಿಸುವುದೇ ನಮ್ಮ ಗುರಿ’