ರಾಜಕೀಯದಲ್ಲಿ ವಯಸ್ಸು ಮುಖ್ಯವಲ್ಲ, ಆರೋಗ್ಯ, ಕೆಲಸ ಮಾಡುವ ಉತ್ಸಾಹ ಮಾತ್ರ ಮುಖ್ಯ : ಸಿದ್ದು
Team Udayavani, Aug 11, 2021, 12:34 PM IST
ಮೈಸೂರು : ರಾಜಕೀಯದಲ್ಲಿ ಮುಂದುವರೆಯಲು ವಯಸ್ಸು ಎಂದಿಗೂ ಅಡ್ಡಿಯಾಗುವುದಿಲ್ಲ, ನಿಮ್ಮಲ್ಲಿ ಉತ್ತಮ ಆರೋಗ್ಯ, ಕೆಲಸ ಮಾಡುವ ಉತ್ಸಾಹ ಮಾತ್ರ ಮುಖ್ಯವಾಗಿರುತ್ತೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ರಾಜಕೀಯ ನಿವೃತ್ತಿಗೆ ವಯಸ್ಸು ಅಡ್ಡಿ ಬರುವುದಿಲ್ಲ, ನಿಮ್ಮಲ್ಲಿ ಉತ್ತಮ ಅರೋಗ್ಯ, ಜೊತೆಗೆ ಕೆಲಸ ಮಾಡುವ ಉತ್ಸಾಹ ಇದ್ದರೆ ಸಾಕು ಎಂದು ಹೇಳಿದರು, ನನಗೀಗ 75 ವರ್ಷವಾದರೂ ಚೆನ್ನಾಗಿದ್ದೇನೆ. ರಾಜಕೀಯದಲ್ಲಿ ಮುಂದುವರೆಯುವ ಆಸೆಯಿದೆ, ಹಾಗಾಗಿ ಮುಂದುವರೆದಿದ್ದೇನೆ. ನನಗೆ ಕೆಲಸ ಮಾಡುವ ಉತ್ಸಾಹವಿದೆ ಎಂದು ಹೇಳಿದ್ದಾರೆ.
ನಾವು ಅಧಿಕಾರಕ್ಕೆ ಬಂದ ಕೂಡಲೇ ಜಾತಿಗಣತಿ
ಜಾತಿಗಣತಿ ಕುರಿತು ಮಾತನಾಡಿದ ಸಿದ್ದರಾಮಯ್ಯ ನಾವು ಅಧಿಕಾರಕ್ಕೆ ಬಂದ ಕೂಡಲೇ ನಮ್ಮ ಮೊದಲ ಕೆಲಸವೇ ಜಾತಿಗಣತಿ ರಿಪೋರ್ಟ್ ಪಡೆಯೋದು, ವರದಿ ತೆಗೆದುಕೊಂಡು ಅದನ್ನ ಚರ್ಚೆಗೆ ಇಡುತ್ತೇನೆ. ರಿಪೋರ್ಟ್ ಪಡೆಯದಿದ್ದರೆ ಅದರಲ್ಲಿ ಎನಿದೆ ಅಂತ ತಿಳಿಯೋದಾದ್ರು ಹೇಗೆ ಎಂದರು.
ಇದನ್ನೂ ಓದಿ :ಮೂಡಿಗೆರೆ : ಗ್ರಾಮಕ್ಕೆ ನುಗ್ಗಿದ ಕಾಡಾನೆ ; ಅರಣ್ಯ ಇಲಾಖೆಯ ವಿರುದ್ಧ ಗ್ರಾಮಸ್ಥರ ಆಕ್ರೋಶ
ಸಚಿವ ಆನಂದ್ ಸಿಂಗ್ ರಾಜೀನಾಮೆ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿಯಲ್ಲಿ ಸಂಪುಟ ರಚನೆಯಲ್ಲಿ ಮನಸ್ತಾಪ ಇದೆ ಅನ್ನೋದನ್ನು ತೋರಿಸುತ್ತಿದೆ ಎಂದು ಹೇಳಿದ ಅವರು ಸಂಪುಟ ರಚನೆ ವೇಳೆಯೇ ಅಸಮಾಧಾನ ಹೊಗೆಯಾಡುತಿತ್ತು, ಇದೆ ಹೋಗೆ ಮುಂದೊಂದು ದಿನ ಜ್ವಾಲೆಯಾಗಿ ಸ್ಪೋಟಗೊಳ್ಳುವ ಲಕ್ಷಣ ಇದೆ ಎಂದು ಹೇಳಿದರು. ಯಾರಿಗೆ ಸಾಮಾಜಿಕ ನ್ಯಾಯದ ಮೇಲೆ ಗೌರವ ಇಲ್ಲವೋ ಅಂತವರ ಕೈಯಲ್ಲಿ ಉತ್ತಮ ಆಡಳಿತ ಕೊಡಲು ಹೇಗೆ ಸಾಧ್ಯ ಎಂದು ಬೊಮ್ಮಾಯಿ ಸರಕಾರವನ್ನು ಕುಟುಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ದಿ| ಜಾರ್ಜ್ ಫೆರ್ನಾಂಡಿಸ್ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್ ಚೌಟ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ