ಬಾದಾಮಿಯಿಂದ ಸಿದ್ದು ದೂರ ದೂರ!

ಆದ್ರೂ ಪಟ್ಟು ಬಿಡದ ಅಭಿಮಾನಿಗಳು | ಹೈಕಮಾಂಡ್‌ ಸೂಚಿಸಿದ್ರೆ ಮಾತ್ರ ಸ್ಪರ್ಧೆ | ಚಿಮ್ಮನಕಟ್ಟಿ ಮಾತಿಗೆ ಬೇಸರಗೊಂಡ್ರಾ ಸಿದ್ದು? - ಎಲೆಕ್ಷನ್‌ ಇನ್‌ಸೈಡ್‌

Team Udayavani, Feb 16, 2023, 11:54 AM IST

siddu

ಬಾಗಲಕೋಟೆ: ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿಯಿಂದ ಸ್ಪರ್ಧೆ ಮಾಡಿ, ಕೆಲವೇ ಮತಗಳಿಂದ ಗೆದ್ದಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಈ ಬಾರಿ ಬಾದಾಮಿಯಿಂದ ಬಹುತೇಕ ದೂರ ಉಳಿಯಲಿದ್ದಾರೆ ಎಂಬುದು ಬಹುತೇಕ ಖಚಿತವಾಗುತ್ತಿದೆ!

ಹೌದು. ಬಾದಾಮಿಯಿಂದ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ಅವರ ಮಾತಿನ ಲಹರಿ ಗಮನಿಸಿದರೆ, ಅವರು ಈ ಬಾರಿ ಬಾದಾಮಿಯಿಂದ ಸ್ಪರ್ಧೆ ಮಾಡುವುದು ಅನುಮಾನವಾಗಿ ಉಳಿದಿಲ್ಲ. ಆದರೆ, ನಿರ್ಧಾರ ಮಾತ್ರ ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದಾರೆ. ಕೊನೆ ಗಳಿಗೆಯಲ್ಲಾದರೂ ಬಾದಾಮಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂಬ ಅವರ ಅಭಿಮಾನಿಗಳ ವಿಶ್ವಾಸ ಇನ್ನೂ ಕುಂದಿಲ್ಲ.

ಜಾತಿ ಪ್ರತಿಷ್ಠೆ ಮೇಲಾಯ್ತು: ಸಿದ್ದರಾಮಯ್ಯ ಅವರನ್ನು ಬಾದಾಮಿ ಕ್ಷೇತ್ರಕ್ಕೆ ಕರೆ ತರುವಲ್ಲಿ ಮಾಜಿ ಸಚಿವ ಎಸ್‌.ಆರ್‌. ಪಾಟೀಲ ಸಹಿತ ಹಲವರ ಪಾತ್ರವಿದೆ. ಆಗ ಬಾದಾಮಿಗೆ ಟಿಕೆಟ್‌ ಘೋಷಣೆಯಾಗಿದ್ದ ವೈದ್ಯ ಡಾ| ದೇವರಾಜ ಪಾಟೀಲ ಪ್ರಚಾರದಲ್ಲಿ ತೊಡಗಿದ್ದರೂ ತಮ್ಮದೇ ನಾಯಕರು ಬಾದಾಮಿಗೆ ಬಂದ ಖುಷಿಯಲ್ಲಿ ಎರಡು ಬಾರಿ ಟಿಕೆಟ್‌ ಘೋಷಣೆಯಾಗಿದರೂ, ಸ್ಪರ್ಧೆಯಿಂದ ಹಿಂದೆ ಸರಿಯಬೇಕಾದ ಅನಿವಾರ್ಯತೆ ಎದುರಾದರೂ ಅವರು ಸಿದ್ದು ಗೆಲುವಿಗೆ ಶ್ರಮಿಸಿದ್ದರು.

ಇವರೊಂದಿಗೆ ಹಾಲಿ ಶಾಸಕರಾಗಿದ್ದ ಬಿ.ಬಿ. ಚಿಮ್ಮನಕಟ್ಟಿ ಕೂಡ ಬೇಸರದ ಜತೆಗೇ ಸಿದ್ದು ಗೆಲುವಿಗೆ ಒಂದಷ್ಟು ಕೆಲಸ ಮಾಡಿದ್ದರು. ಸಿದ್ದು ಬಾದಾಮಿಗೆ ಬರುವಾಗ ಇಲ್ಲಿನ ಪ್ರಮುಖರು, ಅಭಿಮಾನಿಗಳು, ಜಿಲ್ಲೆಯ ಜನರಿಗೆ ಬೇರೆಯದ್ದೇ ನಿರೀಕ್ಷೆಗಳಿದ್ದವು. ಅವರು ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿದರೆ ಅವರ ಪ್ರಭಾವ ಪಕ್ಕದ ಬಾಗಲಕೋಟೆ, ಹುನಗುಂದ, ಬೀಳಗಿ ಸಹಿತ ಜಿಲ್ಲೆಯ ಇತರ ಕ್ಷೇತ್ರಗಳಲ್ಲೂ ಬೀರಲಿದೆ. ಆ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲ್ಲುತ್ತದೆ ಎಂಬ ನಿರೀಕ್ಷೆ ಇತ್ತು.

ಆದರೆ, ಸಿದ್ದರಾಮಯ್ಯ ಅವರ ವಿರುದ್ಧ ಶ್ರೀರಾಮುಲು ಸ್ಪರ್ಧೆ ಮಾಡಿದರೋ, ಅದು ಜಿಲ್ಲೆಯಲ್ಲಿ ಕುರುಬ/ವಾಲ್ಮೀಕಿ ಸಮುದಾಯಗಳ ಮಧ್ಯೆ ಬಹುದೊಡ್ಡ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿತ್ತು. ಜಿಲ್ಲೆಯಲ್ಲಿ ಬಹುತೇಕ ಕಾಂಗ್ರೆಸ್‌ ಪಕ್ಷದೊಂದಿಗೆ ಇದ್ದ ವಾಲ್ಮೀಕಿ ಸಮುದಾಯದ ಮತಗಳು ಬಿಜೆಪಿ ಪರವಾಗಿ ವಾಲಿದ್ದವು. ಇದು ಜಿಲ್ಲೆಯ ಬಹುತೇಕ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಪರಿಣಾಮ ಬೀರಿತ್ತು.

ಚಿಮ್ಮನಕಟ್ಟಿ ಮಾತಿಗೆ ಬೇಸರವೇ?: ಸಿದ್ದರಾಮಯ್ಯ ಈ ಬಾರಿ ಬಾದಾಮಿಯಿಂದ ದೂರ ಉಳಿಯಲು ಪ್ರಮುಖವಾಗಿ ಬೆಂಗಳೂರಿನಿಂದ ದೂರವಾಗುತ್ತದೆ ಎಂಬುದನ್ನು ಹೇಳಿಕೊಂಡಿದ್ದಾರೆ. ಆದರೆ, ಒಳ ಮರ್ಮವೇ ಬೇರೆ ಇದೆ ಎಂಬ ಮಾತು ಅವರ ಆಪ್ತ ವಲಯದಲ್ಲಿ ಕೇಳಿ ಬರುತ್ತಿದೆ. ಬಾದಾಮಿ ಕ್ಷೇತ್ರ ಪ್ರತಿನಿಧಿಸಿದ್ದ ಚಿಮ್ಮನಕಟ್ಟಿ ಅವರು ಒಮ್ಮೆ ಹುಬ್ಬಳ್ಳಿಯಲ್ಲಿ, ಮತ್ತೂಮ್ಮೆ ಬಾದಾಮಿಯಲ್ಲಿ ಬಹಿರಂಗವಾಗಿಯೇ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ವೇದಿಕೆಯಲ್ಲೇ ಕಣ್ಣೀರು ಹಾಕಿದ್ದರು. ಇದಕ್ಕೆ ಕಾರಣಗಳೂ ಹಲವಿದ್ದರೂ, ಇದು ಸಿದ್ದರಾಮಯ್ಯ ಅವರಿಗೆ ಬೇಸರ ತರಿಸಿತ್ತು. ಅದೇನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಹೇಳಿಕೊಳ್ಳುವ ಬದಲು ಬಹಿರಂಗವಾಗಿ ಹೇಳಿಕೊಂಡಿದ್ದು ಸಿದ್ದರಾಮಯ್ಯ ಮನಸ್ಸಿಗೆ ಘಾಸಿಯಾಗಿತ್ತು. ಹೀಗಾಗಿ ನಾನು ಒಲ್ಲೆ ಅಂದರೂ ಬಾದಾಮಿಗೆ ಕರೆದರು. ಇಲ್ಲಿನ ಜನರು ಗೆಲ್ಲಿಸಿದರು. ಕ್ಷೇತ್ರದ ಅಭಿವೃದ್ಧಿಯೊಂದೇ ಗಮನದಲ್ಲಿಟ್ಟುಕೊಂಡು ಸ್ಥಳೀಯ ಯಾವುದೇ ರಾಜಕೀಯ ಪ್ರತಿಷ್ಠೆಗೆ ಕಿವಿಗೊಡದಿದ್ದರೂ ನನ್ನ ಮೇಲೆ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದರಲ್ಲ ಎಂಬ ಬೇಸರವನ್ನು ತಮ್ಮದೇ ಕೆಲ ಆಪ್ತರ ಬಳಿ ತೋಡಿಕೊಂಡಿದ್ದರು ಎನ್ನಲಾಗಿದೆ.

ಹೈಕಮಾಂಡ್‌ ನಿರ್ಧಾರಕ್ಕೆ: ಸಿದ್ದರಾಮಯ್ಯ ಅವರು ಪುನಃ ಬಾದಾಮಿಯಿಂದ ಸ್ಪರ್ಧೆ ಮಾಡುವ ವಿಷಯದಲ್ಲಿ ಪಕ್ಷದ ಹೈಕಮಾಂಡ್‌ ನಿರ್ಧಾರಕ್ಕೆ ಬಿಟ್ಟಿದ್ದಾರೆ. ಅವರು ಕೋಲಾರಕ್ಕೆ ಹೋದರೆ ಅವರ ಉತ್ತರಾಧಿಕಾರಿಯಾಗಲು ಕಾಂಗ್ರೆಸ್‌ನಲ್ಲಿ ಹಲವರ ಪೈಪೋಟಿ ಒಂದೆಡೆ ನಡೆದಿದೆ. ಆದರೆ, ಅವರ ಆಪ್ತ ಅಭಿಮಾನಿಗಳು ಮಾತ್ರ ಮತ್ತೂಮ್ಮೆ ಸಿದ್ದರಾಮಯ್ಯ ಅವರೇ ಸ್ಪರ್ಧಿಸಬೇಕೆಂಬ ಪಟ್ಟು ಹಿಡಿದಿದ್ದಾರೆ. ಬಾದಾಮಿ ಕಾಂಗ್ರೆಸ್‌ನ ಗುಂಪುಗಾರಿಕೆ, ಇದರ ಪರ-ವಿರುದ್ಧವಾಗಿಯೂ ಇವೆ.

ಸಿದ್ದರಾಮಯ್ಯ ಬರಬೇಕೆಂಬ ಒತ್ತಡ ಒಂದೆಡೆ ಇದ್ದರೆ, ಅವರು ಬರುವುದು ಬೇಡ ಎಂಬುದು ಕೆಲವರ ನಿಲುವು. ಹೀಗಾಗಿ ಪಕ್ಷದಲ್ಲಿನ ಗುಂಪುಗಾರಿಕೆ, ತಮ್ಮ ಚುನಾವಣೆ ಫಲಿತಾಂಶದ ಮೇಲೆ ಬೀಳದಿರಲಿ ಎಂಬ ಎಚ್ಚರಿಕೆಯ ಹೆಜ್ಜೆ ಸಿದ್ದರಾಮಯ್ಯ ಇಡುತ್ತಿದ್ದಾರೆ ಎಂಬ ಮಾತು ಕೇಳಿ ಬಂದಿದೆ. ಒಟ್ಟಾರೆ ಕ್ಷೇತ್ರ ದೂರ ಆಗುತ್ತದೆ ಎಂಬ ಪ್ರಮುಖ ಅಂಶದೊಂದಿಗೆ ಸಿದ್ದರಾಮಯ್ಯ ಈ ಬಾರಿ ಬಾದಾಮಿ ಕ್ಷೇತ್ರದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಇದ್ಯಾಗ್ಯೂ ಕೊನೆ ಗಳಿಗೆಯಲ್ಲಿ ಪುನಃ ನಮ್ಮಲ್ಲೂ ಸ್ಪರ್ಧೆ ಮಾಡಲಿ ಎಂಬ ಒತ್ತಾಸೆ ಅವರ ಅಭಿಮಾನಿಗಳದ್ದು.

~ಶ್ರೀ ಶೈಲ. ಕೆ. ಬಿರಾದಾರ

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.