ಸದನದಲ್ಲಿ ಬೊಮ್ಮಾಯಿ ಮಾಡಿದ್ದು ಕಳಪೆ ಭಾಷಣ : ಸಿದ್ದರಾಮಯ್ಯ ಟೀಕೆ


Team Udayavani, Feb 23, 2022, 10:00 PM IST

ಸದನದಲ್ಲಿ ಬೊಮ್ಮಾಯಿ ಮಾಡಿದ್ದು ಕಳಪೆ ಭಾಷಣ : ಸಿದ್ದರಾಮಯ್ಯ ಟೀಕೆ

ಬೆಂಗಳೂರು: ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಸಾಧನೆ ಬಿಟ್ಟು ನರೇಂದ್ರ ಮೋದಿ ಹಾಗೂ ಕೇಂದ್ರದ ಯೋಜನೆ ಶ್ಲಾಘಿಸುವುದಕ್ಕೆ ಸೀಮಿತಗೊಂಡರು. ನನ್ನ ರಾಜಕೀಯ ಜೀವನದಲ್ಲೇ ಇಂಷ್ಟೊಂದು ಕಳಪೆ ಭಾಷಣ ಹಿಂದೆಂದೂ ಕೇಳಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯದಿಂದ ನರೇಂದ್ರ ಮೋದಿ ಸರ್ಕಾರವು 3 ಲಕ್ಷ ಕೋಟಿ ರೂಗಳಷ್ಟು ವಿವಿಧ ರೂಪದ ತೆರಿಗೆಗಳನ್ನು ಸಂಗ್ರಹಿಸಿ ರಾಜ್ಯಕ್ಕೆ ವಾಪಸ್ಸು ನೀಡುತ್ತಿರುವುದು ಕೇವಲ 43 ಸಾವಿರ ಕೋಟಿ ರೂ. ಇದರಿಂದ ರಾಜ್ಯದ ಆರ್ಥಿಕತೆಯೂ ದಿಕ್ಕುತಪ್ಪಿದೆ. 2018ರವರೆಗೆ 2.42 ಲಕ್ಷ ಕೋಟಿಗಳಷ್ಟಿದ್ದ ರಾಜ್ಯದ ಸಾಲ ಈಗ 4.57 ಲಕ್ಷ ಕೋಟಿಗಳಷ್ಟಾಗಿದೆ.ಇದಕ್ಕೆ ಮೋದಿಗೆ ಶ್ಲಾಘನೆ ಮಾಡಬೇಕಾ ಎಂದು ಪ್ರಶ್ನಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಅಲ್ಪ ಸಂಖ್ಯಾತರ ಕಲ್ಯಾಣ, ಯುವಜನರ ಕಲ್ಯಾಣ ಮತ್ತು ನೇಕಾರರು ಮೀನುಗಾರರು ಕುಂಬಾರರು ಅಕ್ಕಸಾಲಿಗರು, ಕೌÒರಿಕರು, ಉಪ್ಪಾರರು ವಿವಿಧ ವಾಹನ ಚಾಲಕರು, ಮಡಿವಾಳರು ಮುಂತಾದ ಕುಶಲ ಕರ್ಮಿಗಳ ಕುರಿತು ಭಾಷಣದಲ್ಲಿ ಒಂದಕ್ಷರದ ಪ್ರಸ್ತಾಪವಿಲ್ಲ. ಲೋಕೋಪಯೋಗಿ, ಸಣ್ಣ ಕೈಗಾರಿಕೆ, ನಗರ, ಪಟ್ಟಣಗಳ ಅಭಿವೃದ್ಧಿ ಕುರಿತು ಪ್ರಸ್ತಾಪವಿಲ್ಲ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ : ರಷ್ಯಾ- ಉಕ್ರೇನ್ ಸಂಘರ್ಷ: ಗೋವಾದಲ್ಲಿ ಪ್ರತಿಕೂಲ ಪರಿಣಾಮ

ರಾಜ್ಯಪಾಲರ ಭಾಷಣದಲ್ಲಿ ಜನರ ಕಲ್ಯಾಣದ ಕುರಿತು ಪ್ರಸ್ತಾಪವೂ ಇಲ್ಲ. ಅಭಿವೃದ್ಧಿ ಕುರಿತಾದ ಪ್ರಸ್ತಾಪವೂ ಇಲ್ಲ. ಈ ಕುರಿತು ತಾನು ಏನೂ ಮಾಡಿಲ್ಲ ಎಂದು ಸರ್ಕಾರವೆ ಪ್ರಾಮಾಣಿಕವಾಗಿ ಒಪ್ಪಿಕೊಂಡಿದೆ. ತನ್ನ ಅದಕ್ಷತೆಯನ್ನು ಒಪ್ಪಿಕೊಂಡದ್ದಕ್ಕಾಗಿ ಸರ್ಕಾರಕ್ಕೆ ಅಭಿನಂದಿಸುತ್ತೇನೆ ಎಂದು ಲೇವಡಿ ಮಾಡಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಇದ್ದಾಗ ಬಂಡವಾಳ ಆಕರ್ಷಣೆಯಲ್ಲಿ ದೇಶದಲ್ಲಿ 1 ಅಥವಾ 2 ನೇ ಸ್ಥಾನದಲ್ಲಿ ಕರ್ನಾಟಕ ಇತ್ತು. ಈಗ ಓಲಾ ಬೈಕ್‌, ಏಥರ್‌, ಟಾಟಾ ಎಲೆಕ್ಟ್ರಾನಿಕ್ಸ್‌ ಮುಂತಾದ ಬೃಹತ್‌ ಬಂಡವಾಳದ ಕಂಪೆನಿಗಳು 10000 ಕೋಟಿ ಬಂಡವಾಳ ಹೂಡಲು ತಯಾರಿದ್ದವು. ಆದರೆ ಈ ಸರ್ಕಾರ ಆಸಕ್ತಿ ವಹಿಸದ ಕಾರಣ ತಮಿಳುನಾಡಿನ ಪಾಲಾದವು. ರಾಜ್ಯವು ಕೈಗಾರಿಕಾಭಿವೃದ್ಧಿಯಲ್ಲೂ ಹಿಂದೆ ಬಿದ್ದಿದೆ ಎಂದು ದೂರಿದ್ದಾರೆ.

ಎನ್‌ಇಪಿಯಂತ ಮನೆಹಾಳು ನೀತಿಗಳನ್ನು ಸರ್ಕಾರ ಸಾಧನೆ ಎಂದು ಹೇಳಲಾಗಿದೆ. ಕಾಲೇಜು- ವಿಶ್ವವಿದ್ಯಾಲಯಗಳಲ್ಲಿ ಉಪನ್ಯಾಸಕರುಳಿಲ್ಲ, ಶಾಲೆಗಳಲ್ಲಿ ಮಕ್ಕಳಿಗೆ ಪಠ್ಯ ಪುಸ್ತಕಗಳಿಲ್ಲ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.