ಮಹಿಳೆಯರ ಬಗ್ಗೆ ಗೌರವವಿದೆ, ಅಸಭ್ಯ ವರ್ತನೆ ನಡೆಸಿಲ್ಲ: ಸಿದ್ದು ಸವದಿ
ಕಿಡ್ನಾಪ್ ಸಂಸ್ಕೃತಿ ನಮ್ಮದಲ್ಲ
Team Udayavani, Nov 11, 2020, 1:58 PM IST
ಬನಹಟ್ಟಿ: ಮಹಿಳೆಯರ ಬಗ್ಗೆ ಗೌರವವಿದೆ. ಮಹಿಳಾ ಸದಸ್ಯರನ್ನು ಎಳೆದಾಡಿ, ಅಸಭ್ಯ ವರ್ತನೆ ನಡೆಸಿಲ್ಲ. ಬಹುಮತವಿರುವ ಬಿಜೆಪಿ ಸದಸ್ಯರು ನಮ್ಮವರು ವಿನಾಕಾರಣ ಅವರಿಗೆ ಆಮಿಷವೊಡ್ಡಿ ಕಿಡ್ನಾಪ್ ಮಾಡುವ ನೀಚ ರಾಜಕಾರಣವನ್ನು ಕಾಂಗ್ರೆಸ್
ನಡೆಸುತ್ತಿದೆ. ಹಕ್ಕು ಮಂಡನೆಗೆ ಅವಕಾಶ ನೀಡಿಲ್ಲವೆಂದು ಮಾಜಿ ಸಚಿವೆ ಉಮಾಶ್ರೀಯವರ ಹೇಳಿಕೆ ಶುದ್ಧ ಸುಳ್ಳು. ಅಂತಹ
ಕೆಳಮಟ್ಟದ ರಾಜಕೀಯ ನಡೆಸುವ ಸಂಸ್ಕೃತಿ ಬಿಜೆಪಿಯಲ್ಲಿ ಇಲ್ಲವೆಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು.
ರಬಕವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಲಿಂಗಪುರ ಪುರಸಭೆಯಲ್ಲಿ ಬಹುಮತವಿದ್ದರೂ ಕಾಂಗ್ರೆಸ್ ವಾಮಮಾರ್ಗದಿಂದ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಪಡೆಯಬೇಕೆಂಬ ಹುನ್ನಾರ ನಡೆಸಿರುವುದು ಜನತೆಗೆ ಅರಿವಾಗಿದೆ. ರಾತ್ರೋ ರಾತ್ರೀ ಸದಸ್ಯರನ್ನು ಕಿಡ್ನಾಪ್ ಮಾಡಿದ್ದಲ್ಲದೆ, ಉಮಾಶ್ರೀಯವರೇ ಮಹಿಳೆಯರ ಮೇಲೆ ಅಗೌರವ ತರುವ ರೀತಿಯಲ್ಲಿ ವರ್ತನೆ ನಡೆಸಿದ್ದಾರೆಂದು ಸವದಿ ಹೇಳಿದರು.
ಇದನ್ನೂ ಓದಿ:ನನಗೆ ಅನ್ಯಾಯವಾಗಿದೆ, ನ್ಯಾಯ ಕೊಡಿಸಿ: ಡಿಕೆಶಿ ವಿರುದ್ಧ ಅಸಮಧಾನ ತೋರಿದ ಅಖಂಡ ಶ್ರೀನಿವಾಸ್
ನಿರೀಕ್ಷಿತ ಗೆಲುವು: ರಾಜ್ಯದ ಶಿರಾ ಹಾಗೂ ರಾಜ ರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ನಿರೀಕ್ಷಿತ ಗೆಲುವು ಪಡೆದುಕೊಂಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕಾರ್ಯ ಹಾಗೂ ಪ್ರಾಮಾಣಿಕ ಅಧಿಕಾರಕ್ಕೆ ಜನತೆ
ಗೆಲುವಿನೊಂದಿಗೆ ಸಂದೇಶ ನೀಡಿದ್ದಾರೆಂದು ತಿಳಿಸಿದರು.
ಬಿಹಾರ ರಾಜ್ಯದಲ್ಲಿ ಎನ್ಡಿಎಗೆ ಮತದಾರರು ಅಧಿಕಾರಕ್ಕೆ ಅವಕಾಶ ಕಲ್ಪಿಸಿ ಕೊಡುವ ಮೂಲಕ ಬಿಜೆಪಿಯ ಜನಪ್ರಿಯ ಯೋಜನೆ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಕ್ಕೆ ಜನತೆ ಆಶೀರ್ವಾದ ಮಾಡಿದ್ದಾರೆಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ