ರಾಷ್ಟ್ರೀಯ ಹಬ್ಬಗಳಲ್ಲಿ ಸ್ವಯಃ ಪ್ರೇರಣೆಯಿಂದ ಭಾಗವಹಿಸಿ : ಶಾಸಕ ಸಿದ್ದು ಸವದಿ


Team Udayavani, Jan 18, 2022, 6:36 PM IST

ರಾಷ್ಟ್ರೀಯ ಹಬ್ಬಗಳಲ್ಲಿ ಸ್ವಯಃ ಪ್ರೇರಣೆಯಿಂದ ಭಾಗವಹಿಸಿ : ಶಾಸಕ ಸಿದ್ದು ಸವದಿ

ರಬಕವಿ-ಬನಹಟ್ಟಿ: ದೇಶದ ಜನರಲ್ಲಿ ರಾಷ್ಟ್ರಾಭಿಮಾನವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ರಾಷ್ಟ್ರೀಯ ಹಬ್ಬಗಳಲ್ಲಿ ಕಡ್ಡಾಯವಾಗಿ, ಸ್ವಯಃ ಪ್ರೇರಣೆಯಿಂದ ಭಾಗವಹಿಸಬೇಕು ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಅವರು ಸೋಮವಾರ ರಬಕವಿ-ಬನಹಟ್ಟಿ ತಹಶೀಲ್ದಾರ್ ಕಾರ್ಯಾಲಯದಲ್ಲಿ ಗಣರಾಜ್ಯೋತ್ಸವ ನಿಮಿತ್ತವಾಗಿ ಹಮ್ಮಿಕೊಳ್ಳಲಾಗುವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಕೋವಿಡ್ ಹಿಇನ್ನಲೆಯಲ್ಲಿ ಗಣರಾಜ್ಯೋತ್ಸವವನ್ನು ಸರಕಾರದ ನಿಯಮಾನುಸಾರ ಸರಳವಾಗಿ ಆಚರಿಸಲಾಗುವುದು ಎಂದರು.

ರಾಷ್ಟ್ರದ ಅಖಂಡತೆಗೆ ನಾವೆಲ್ಲರೂ ಶ್ರಮಿಸಬೇಕು. ರಾಷ್ಟ್ರೀಯ ಹಬ್ಬಗಳು ಯಾವುದೆ ಜಾತಿ, ಮತ, ಪಂಥ ಮತ್ತು ಧರ್ಮಗಳಿಗೆ ಸಿಮೀತವಾಗಿರುವುದಿಲ್ಲ. ಈ ಸಂದರ್ಭದಲ್ಲಿ ನಗರದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು ಎಂದು ಶಾಸಕ ಸವದಿ ನಗರಸಭೆ ಅಧಿಕಾರಿಗಳಿಗೆ ತಿಳಿಸಿದರು.

ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಸಂಜಯ ಇಂಗಳೆ ಮಾತನಾಡಿ, ಈ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅದಕ್ಕಾಗಿ ಸಮಿತಿಯನ್ನು ನಿರ್ಮಾಣ ಮಾಡಲಾಗಿದೆ. ಶಿಸ್ತು ಬದ್ಧವಾದ ಕಾರ್ಯಕ್ರಮಕ್ಕೆ ಪ್ರತಿಯೊಬ್ಬರ ಸಹಾಯ ಸಹಕಾರ ಅಗತ್ಯವಾಗಿದೆ. ತಾಲೂಕಿನ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಯಾವುದೇ ನೆಪ ಹೇಳದೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.

ರಬಕವಿ-ಬನಹಟ್ಟಿ ತಾಲ್ಲೂಕಿನಾದ್ಯಂತ ಪ್ಲಾಸ್ಟಿಕ್ ಧ್ವಜ ಮಾರಾಟ, ಬಳಕೆ ಮಾಡುವುದನ್ನು ಕಟ್ಟು ನಿಟಾಗಿ ನಿಷೇಧಿಸಲಾಗಿದೆ. ಪ್ಲಾಸ್ಟಿಕ್ ಧ್ವಜ ಮಾರಾಟಗಾರರಿಗೆ ತಿಳುವಳಿಕೆ ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಮೊದಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತ್ತಿದೆ. ಆದಾಗ್ಯ ಪ್ಲಾಸ್ಟಿಕ್ ಧ್ವಜ ಮಾರಾಟ ಹಾಗೂ ಬಳಕೆ ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಇಂಗಳೆ ಹೇಳಿದರು.

ಸಭೆಯ ವೇದಿಕೆಯ ಮೇಲೆ ಗ್ರೇಡ್-2 ತಹಶೀಲ್ದಾರ್ ಎಸ್.ಬಿ.ಕಾಂಬಳೆ, ಸಿಪಿಐ ಜಿ.ಕರುಣೇಶಗೌಡ ಇದ್ದರು.

ಸಭೆಯಲ್ಲಿ ಉಪ ತಹಶೀಲ್ದಾರ್ ಎಸ್.ಎಲ್. ಕಾಗಿಯವರ, ಧರೆಪ್ಪ ಉಳ್ಳಾಗಡ್ಡಿ, ಪಿಎಸ್‌ಐ ಸುರೇಶ ಮಂಟೂರ, ಜಿ.ಎಸ್.ವಡಗಾವಿ, ರಾಮಣ್ಣ ಹುಲಕುಂದ, ಶಿವಾನಂದ ಬಾಗಲಕೋಟಮಠ, ಶ್ರೀಶೈಲ ಬುರ್ಲಿ, ಡಾ. ಎಂ. ಎನ್.ನದಾಫ್, ಡಿ. ಬಿ. ಜಾಯಗೊಂಡ, ರಾಜು ಬಾಣಕಾರ, ನಗರಸಭೆಯ ಅಧಿಕಾರಿಗಳಾದ ಸುಭಾಸ ಖುದಾನಪೂರ, ಬಿ. ಎಂ. ಡಾಂಗೆ, ಅರಣ್ಯ ಇಲಾಖೆಯ ಮಲ್ಲು ನಾವಿ, ಬಸವರಾಜ ತೆಗ್ಗಿ, ಪ್ರಾಚಾರ್ಯ ಎಸ್. ಎಂ. ಶೇಖ, ಚಂದ್ರಪ್ರಭಾ ಬಾಗಲಕೋಟ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಮುಖಂಡರು ಇದ್ದರು.

ಟಾಪ್ ನ್ಯೂಸ್

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.