ಸಚಿವ ಡಿಕೆಶಿ ಕಾಲಿಗೆ ಬಿದ್ದ ಸಂಸದ ಪ್ರತಾಪ್ ಸಿಂಹ !
ಜೆಡಿಎಸ್ ಮಾತ್ರವಲ್ಲ ಕಾಂಗ್ರೆಸ್ ಮತಗಳೂ ನನಗೆ ಬಿದ್ದಿವೆ...!
Team Udayavani, May 1, 2019, 2:45 PM IST
ಬೆಂಗಳೂರು: ರಾಜಕೀಯದಲ್ಲಿ ಯಾರೂ ಶಾಶ್ವತ ಮಿತ್ರರಲ್ಲ, ಶತ್ರಗಳೂ ಅಲ್ಲ ಎನ್ನುವ ಮಾತಿನಂತೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಚಿವಡಿ.ಕೆ.ಶಿವಕುಮಾರ್ ಅವರ ಕಾಲಿಗೆ ಬಿದ್ದು ಹೊಸ ಚರ್ಚೆ ಆರಂಭವಾಗಲು ಕಾರಣವಾಗಿದ್ದಾರೆ.
ಇಂದು ಬುಧವಾರ ಮಾಜಿ ಮುಖ್ಯಮಂತ್ರಿ , ಬಿಜೆಪಿ ನಾಯಕರ ಎಸ್.ಎಂ.ಕೃಷ್ಣ ಅವರ 88 ನೇ ಜನ್ಮದಿನಾಚರಣೆಯ ನಿಮಿತ್ತ ಅವರ ನಿವಾಸಕ್ಕೆ ಉಭಯ ನಾಯಕರು ಶುಭ ಕೋರಲು ಆಗಮಿಸಿದ್ದರು.
ಶಿವಕುಮಾರ್ ಅವರನ್ನು ಮನೆ ಬಾಗಿಲಿನಲ್ಲಿ ಕಂಡೋಡನೆಯೇ ನಗುನಗುತ್ತಾ ತೆರಳಿದ ಪ್ರತಾಪ್ ಸಿಂಹ ಕಾಲಿಗೆ ಬಿದ್ದಿದ್ದಾರೆ. ಶಿವಕುಮಾರ್ ಅವರೂ ನಗುನಗುತ್ತಾ ಪ್ರತಾಪ್ ಸಿಂಹ ಬೆನ್ನು ತಟ್ಟಿ ಆಶೀರ್ವದಿಸಿದ್ದಾರೆ.
ಹೊಸ ಚರ್ಚೆ ಶರು
ಸಚಿವ ಜಿ.ಟಿ.ದೇವೇಗೌಡ ಅವರು ಮೈಸೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಪ್ರತಾಪ್ ಸಿಂಹ ಅವರು ಡಿ.ಕೆ.ಶಿವಕುಮಾರ್ ಅವರ ಕಾಲಿಗೆ ಬಿದ್ದಿರುವುದು ಹೊಸ ಚರ್ಚೆ ಹುಟ್ಟು ಹಾಕಿದೆ.
ಕಾಂಗ್ರೆಸ್ ಮತಗಳು ನಮಗೆ ಬಿದ್ದಿವೆ!
ಜಿ.ಟಿ.ದೇವೇಗೌಡ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ ಜೆಡಿಎಸ್ ಮಾತ್ರವಲ್ಲ ಕಾಂಗ್ರೆಸ್ ನವರ ಮತಗಳೂ ನನಗೆ ಬಿದ್ದಿವೆ. ಲೋಕಸಭಾ ಚುನಾವಣೆ ಮತದಾನ ಮಾಡುವ ವೇಳೆ ಮತದಾರರ ಮನಸ್ಥಿತಿ ಬೇರೆಯದ್ದೆ ಇರುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ