ಸಿಂದಗಿ ಐಸಿಐಸಿಐ ಬ್ಯಾಂಕ್ ಸೆಕ್ಯುರಿಟಿ ಗಾರ್ಡ್ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು
Team Udayavani, Oct 22, 2020, 7:26 PM IST
ವಿಜಯಪುರ : ಎರಡು ತಿಂಗಳ ಹಿಂದೆ ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿದ್ದ ಸಿಂದಗಿ ಐಸಿಐಸಿಐ ಬ್ಯಾಂಕ್ ಸೆಕ್ಯುರಿಟಿ ಹತ್ಯೆ ಪ್ರಕರಣದಲ್ಲಿ ಜಿಲ್ಲೆಯ ಪೊಲೀಸರು ಕಾನೂನು ಸಂಘರ್ಷಕ್ಕೊಳಗಾಗ ಓರ್ವ ಸೇರಿದಂತೆ ಮೂವರನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಕಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಕಳೆದ ಆಗಸ್ಟ್ 25 ರಂದು ಐಸಿಐಸಿಐ ಬ್ಯಾಂಕ್ ಸೆಕ್ಯುರಿಟಿ ಗಾರ್ಡ್ ರಾಹುಲ್ ಖೀರು ರಾಠೋಡ ಎಂಬವರನ್ನು ಸುತ್ತಿಗೆಯಿಂದ ಹೊಡೆದು, ಕೊಲೆ ಮಾಡಿ ಎಟಿಎಂ ದರೋಡೆಗೆ ಯತ್ನಿಸಲಾಗಿತ್ತು. ಈ ಕುರಿತು ಬ್ಯಾಂಕ್ ಮ್ಯಾನೇಜರ್ ಕಿಶೋರ್ ಪುರೋಹಿತ ನೀಡಿದ ದೂರಿನಂತೆ ಸಿಂದಗಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಇದೀಗ ಎಸ್ಪಿ ಅನುಪಮ್ ಅಗರವಾಲ್ ಅವರ ಮಾರ್ಗದರ್ಶನದಲ್ಲಿ ಸಿಂದಗಿ ಪೊಲೀಸರು ಹತ್ಯೆ ಪ್ರಕರಣ ಬೇಧಿಸಿದ್ದು, ಮೂವರನ್ನು ಕೊಂಡಗೂಳಿ ಗ್ರಾಮದಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಸಿಂದಗಿ ತಾಲೂಕ ಬಬಲೇಶ್ವರದ ಅನಿಲ್ ಜಟ್ಟೆಪ್ಪ ಬರಗಾಲ ಉರ್ಫ್ ಹೊಸಮನಿ ಉರ್ಫ್ ದೊಡಮನಿ, ದಯಾನಂದ ಸಿದ್ಧಪ್ಪ ಹೊಸಮನಿ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ