Uttar Pradeshದಲ್ಲಿ 13,000 ಅಕ್ರಮ ಮದರಸಾಗಳು ಪತ್ತೆ; ಎಸ್ ಐಟಿ ವರದಿ ಬಹಿರಂಗ
ಶ್ರಾವಸ್ತಿ ಮತ್ತು ಬಹ್ರೈಚ್ ಸೇರಿದಂತೆ ಏಳು ಜಿಲ್ಲೆಗಳಲ್ಲಿವೆ..
Team Udayavani, Mar 7, 2024, 10:37 AM IST
ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡ (ಎಸ್ ಐಟಿ) ರಾಜ್ಯದಲ್ಲಿ 13,000 ಕಾನೂನು ಬಾಹಿರ ಮದರಸಾಗಳು ಇದ್ದಿರುವುದನ್ನು ಪತ್ತೆಹಚ್ಚಿರುವುದಾಗಿ ತಿಳಿಸಿದೆ.
ಇದನ್ನೂ ಓದಿ:Bank Fraud Case… 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಮೆರಿಕದಲ್ಲಿ ಪತ್ತೆ
ಎಸ್ ಐಟಿ ಅಕ್ರಮ ಮದರಸಾಗಳನ್ನು ಪತ್ತೆ ಹಚ್ಚಿ ಕಲೆ ಹಾಕಿ ತಯಾರಿಸಿರುವ ವರದಿಯನ್ನು ಸರ್ಕಾರಕ್ಕೆ ನೀಡಲಿದ್ದು, ಈ ಕಾನೂನು ಬಾಹಿರ ಮದರಸಾವನ್ನು ಮುಚ್ಚುವಂತೆ ಶಿಫಾರಸು ಮಾಡಿರುವುದಾಗಿ ವರದಿ ವಿವರಿಸಿದೆ.
ಜೀ ನ್ಯೂಸ್ ಮೂಲಗಳ ಪ್ರಕಾರ, ಬಹುತೇಕ ಅಕ್ರಮ ಮದರಸಾಗಳು ನೇಪಾಳ ಗಡಿಭಾಗದಲ್ಲಿರುವುದಾಗಿ ತಿಳಿಸಿದೆ. ಈ ಮದರಸಾಗಳಿಗೆ ಕಳೆದ ಎರಡು ದಶಕಗಳಿಂದ ಗಲ್ಫ್ ದೇಶಗಳಿಂದ ಹಣಕಾಸು ನೆರವು ಒದಗಿಸುತ್ತಿರುವುದಾಗಿ ವರದಿ ಹೇಳಿದೆ.
ಎಸ್ ಐಟಿ ವರದಿಯು ಕೆಲವು ಆಘಾತಕಾರಿ ಅಂಶವನ್ನು ಬಹಿರಂಗಪಡಿಸಿದೆ. ಇದರಲ್ಲಿ ಹೆಚ್ಚಿನ ಮದರಸಾಗಳು ನೇಪಾಳದ ಗಡಿಯಲ್ಲಿರುವ ಮಹಾರಾಜ್ ಗಂಜ್, ಶ್ರಾವಸ್ತಿ ಮತ್ತು ಬಹ್ರೈಚ್ ಸೇರಿದಂತೆ ಏಳು ಜಿಲ್ಲೆಗಳಲ್ಲಿವೆ ಎಂದು ತಿಳಿಸಿದೆ.
ಪ್ರತಿ ಗಡಿ ಜಿಲ್ಲೆಯು 500ಕ್ಕೂ ಹೆಚ್ಚು ಮದರಸಾಗಳನ್ನು ಹೊಂದಿದ್ದು, ಇದು ಅಂತಾರಾಷ್ಟ್ರೀಯ ಗಡಿ ಸಮೀಪದ ಬಗ್ಗೆ ಕಳವಳ ಮೂಡಿಸುವಂತಿದೆ. ಈ ಮದರಸಾಗಳ ಆರ್ಥಿಕ ಲೆಕ್ಕಚಾರದ ಬಗ್ಗೆ ಎಸ್ ಐಟಿ ಮಾಹಿತಿ ಕೇಳಿದ್ದು, ಬಹುತೇಕ ಮದರಸಾಗಳು ಸ್ಪಷ್ಟವಾಗಿ ಆದಾಯ ಮತ್ತು ಖರ್ಚು, ವೆಚ್ಚದ ಮಾಹಿತಿ ನೀಡಲು ವಿಫಲವಾಗಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿರುವುದಾಗಿ ವಿವರಿಸಿದೆ.
ಮದರಸಾಗಳ ಮೂಲಕ ಭಯೋತ್ಪಾದನೆಗೆ ಹಣಕಾಸು ನೆರವು ನೀಡಿರುವ ಸಂಚು ಅಡಗಿರುವುದಾಗಿ ಎಸ್ ಐಟಿ ತಿಳಿಸಿದೆ. ದೇಣಿಗೆಯ ಮೂಲಕ ಮದರಸಾ ನಿರ್ಮಿಸಿರುವುದಾಗಿ ಹೇಳಿರುವ ಬಹುತೇಕ ಮದರಸಾಗಳು ದೇಣಿಗೆ ಕೊಟ್ಟವರ ಹೆಸರನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ