Desi Swara; ಅಮೆರಿಕದಲ್ಲಿ ಸೀತಾ ಕಲ್ಯಾಣ; ಹೊರದೇಶದಲ್ಲಿ ಅರಳುತ್ತಿದೆ ಸನಾತನ ಸಂಸ್ಕೃತಿ

ಮಕ್ಕಳೆಲ್ಲ ಸಾಂಪ್ರದಾಯಿಕ ಉಡುಗೆ ತೊಡುಗೆಗಳನ್ನು ಧರಿಸಿ ಸಂಭ್ರಮಿಸುತ್ತಿದ್ದದ್ದು ಕಣ್ಣಿಗೆ ಹಬ್ಬದಂತಾಗಿತ್ತು

Team Udayavani, Apr 29, 2023, 12:27 PM IST

Desi Swara; ಅಮೆರಿಕದಲ್ಲಿ ಸೀತಾ ಕಲ್ಯಾಣ; ಹೊರದೇಶದಲ್ಲಿ ಅರಳುತ್ತಿದೆ ಸನಾತನ ಸಂಸ್ಕೃತಿ

ಸುಮಾರು ಆರು ವರ್ಷಗಳ ಅವಧಿಯಲ್ಲಿ ಸಾಕಷ್ಟು ಬಾರಿ ನಾನು ಅಮೆರಿಕ ಮತ್ತು ಕೆನಡಾ ದೇಶಗಳಿಗೆ ಪ್ರವಾಸ ಮಾಡಿದ್ದೇನೆ. ಈ ಸಂದರ್ಭದಲ್ಲಿ ಹಲವಾರು ಹಿಂದೂ ದೇವಾಲಯಗಳನ್ನು ಸಂದರ್ಶಿಸಿದ್ದೇನೆ. ಆದರೆ ಅಲ್ಲಿ ಯಾವತ್ತೂ ಭಾರತೀಯ ದೇವಸ್ಥಾನಗಳಲ್ಲಿ ಸಿಗುವಂತಹ ಅನುಭವ ಸಿಕ್ಕಿಲ್ಲ. ಆದರೆ ನ್ಯೂಜೆರ್ಸಿ ರಾಜ್ಯದ ಎಡಿಸನ್‌ ಎಂಬಲ್ಲಿರುವ ಉಡುಪಿಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರಿಂದ ಸ್ಥಾಪಿತವಾದ ಶ್ರೀ ಕೃಷ್ಣ ವೃಂದಾವನ ದೇವಸ್ಥಾನಕ್ಕೆ ಇತ್ತೀಚೆಗೆ ಭೇಟಿ ನೀಡುವ, ಅಲ್ಲಿ ನಡೆದಂತಹ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿತು. ಇದು ಒಂದು ವಿಶಿಷ್ಟ ಮತ್ತು ವಿಭಿನ್ನ ಅನುಭೂತಿಯನ್ನೇ ನೀಡಿತು.

ದೇವಸ್ಥಾನದೊಳಗೆ ಕಾಲಿಡುತ್ತಿದ್ದಂತೆ ಮಲ್ಲಿಗೆ ಪರಿಮಳವೂ ಸೇರಿದಂತೆ ಹತ್ತಾರು ಹೂವುಗಳಿಂದ ಅಲಂಕೃತ ದೇವರ ಮೂರ್ತಿಗಳು ಹಿತಕರ ವಾತಾವರಣ ನಮ್ಮೂರ ದೇವಸ್ಥಾನಕ್ಕೆ ಪ್ರವೇಶಿಸಿದಾಗ ನೀಡುವ ಅನುಭವವನ್ನೇ ತಂದಿಕ್ಕಿತು. ಸ್ವಂತ ಊರಿನಿಂದ ದೂರವಿ¨ªಾಗ ಹುಟ್ಟೂರು ಬಹಳಷ್ಟು ಸೆಳೆಯುತ್ತದೆ. ಆಗ ನೆನಪುಗಳನ್ನು ಮೆಲುಕು ಹಾಕುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಾಗ ಆಗುವ ಪುಳಕ ವಿಭಿನ್ನ, ವಿಶಿಷ್ಟ ಮತ್ತು ಅನಿರ್ವಚನೀಯ! ಅಂತಹ ನೆನಪುಗಳನ್ನು ಮರುಕಳಿಸುವಂತೆ ಮಾಡಿದ್ದು, ಇಲ್ಲಿ ಇತ್ತೀಚೆಗೆ ನಡೆದ ಸೀತಾ ಕಲ್ಯಾಣೋತ್ಸವ. ಹೆಚ್ಚು ಕಡಿಮೆ ದಿನವಿಡೀ ನಡೆದ ಕಾರ್ಯಕ್ರಮಕ್ಕೆ ಸುಮಾರು ನಾಲೂ°ರಕ್ಕೂ ಹೆಚ್ಚಿನ ಜನರು ಸಾಕ್ಷಿಯಾದರು.

ಕಾರ್ಯಕರ್ತರೂ ಸೇರಿದಂತೆ ಭಾಗವಹಿಸಿದ ಎಲ್ಲರೂ ಅಚ್ಚುಕಟ್ಟಾಗಿ ವಸ್ತ್ರ ಸಂಹಿತೆಯನ್ನು ಪಾಲಿಸಿದ್ದರು. ಮಹಿಳೆಯರು ಸೀರೆಯಲ್ಲಿ ಕಂಗೊಳಿಸಿದರೆ, ಪುರುಷರು ಧೋತಿ, ಮೇಲ್ವಸ್ತ್ರ.. ಧರಿಸಿ ಕಾರ್ಯಕ್ರಮದ ಶೋಭೆ ಹೆಚ್ಚಿಸಿದ್ದರು. ಮಕ್ಕಳೆಲ್ಲ ಸಾಂಪ್ರದಾಯಿಕ ಉಡುಗೆ ತೊಡುಗೆಗಳನ್ನು ಧರಿಸಿ ಸಂಭ್ರಮಿಸುತ್ತಿದ್ದದ್ದು ಕಣ್ಣಿಗೆ ಹಬ್ಬದಂತಾಗಿತ್ತು. ಕೆಲವು ಮಕ್ಕಳ ಹಣೆಯಲ್ಲಿ ಸಂಧ್ಯಾವಂದನೆ ಮಾಡಿದ ಶ್ರೀಮುದ್ರೆಯ ಗುರುತೂ ಎದ್ದು ಕಾಣುತ್ತಿತ್ತು. ಇಂತಹ ಉತ್ಸವದ ವಾತಾವರಣ ಕಾರ್ಯಕ್ರಮಕ್ಕೆ ಮೆರುಗು ನೀಡಿತ್ತು ಮಾತ್ರವಲ್ಲದೇ ಭಾರತದಲ್ಲಿರುವಂತ ಅನುಭೂತಿಯನ್ನು ನನಗೆ ಕೊಟ್ಟಿತು.

ವಿಧಿವತ್ತಾಗಿ ಸಾಂಪ್ರದಾಯಿಕವಾಗಿ ಪ್ರಾರಂಭವಾದ ಸೀತಾ ಕಲ್ಯಾಣೋತ್ಸವದಲ್ಲಿ ಪುಟಾಣಿಗಳಿಂದ ಆರಂಭಿಸಿ ಹತ್ತು ಹನ್ನೆರಡು ವರ್ಷದವರೆಗಿನ ಮಕ್ಕಳು ವಿವಿಧ ತಂಡಗಳಲ್ಲಿ ಹನುಮಾನ್‌ ಚಾಲೀಸ ಮತ್ತು ಹನುಮ ಸ್ತುತಿಯ ಸುಶ್ರಾವ್ಯ ಹಾಡು, ನೃತ್ಯ ರೂಪಕದೊಂದಿಗೆ ಪ್ರಸ್ತುತಪಡಿಸುತ್ತಿದ್ದರೆ ಎಲ್ಲರೂ ಮಂತ್ರಮುಗ್ಧರಾಗಿದ್ದರು.

ಕಾರ್ಯಕ್ರಮಕ್ಕೆ ಬಂದವರಿಗೆಲ್ಲರಿಗೂ ಅಚ್ಚುಕಟ್ಟಾದ ಭೋಜನದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ತೀರಾ ಅಸಮರ್ಥರನ್ನು ಹೊರತುಪಡಿಸಿ ಹೆಚ್ಚಿನವರು ನೆಲದಲ್ಲೇ ಕುಳಿತು ಊಟ ಮಾಡಿದರು. ಸಾಮಾನ್ಯವಾಗಿ ಬಾಳೆ ಎಲೆಯಲ್ಲಿ ಊಟದ ವ್ಯವಸ್ಥೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡವರ ಸಂಖ್ಯೆ ಹೆಚ್ಚಾಗಿದ್ದ ಕಾರಣಕ್ಕೆ ಬಳಸಿ ಎಸೆಯುವ ತಟ್ಟೆಯನ್ನು ಉಪಯೋಗಿಸಲಾಗಿತ್ತು. ಆದರೆ ಊಟದ ಸಭಾಂಗಣಕ್ಕೆ ಪ್ರವೇಶಿಸುವ ಹಂತದಿಂದ ಮೊದಲ್ಗೊಂಡು ಊಟ ಆರಂಭಿಸುವ, ಊಟ ಮುಗಿಸಿ ಕೈತೊಳೆಯಲು ಹೋಗುವ ತನಕ ಎಲ್ಲದರಲ್ಲೂ ಸಂಪ್ರದಾಯ ಮತ್ತು ಅಚ್ಚುಕಟ್ಟಾದ ಶಿಸ್ತು ಎದ್ದು ಕಾಣುತ್ತಿತ್ತು. ಇನ್ನು ಊಟಕ್ಕೆ ಬಡಿಸಿದ ಖಾದ್ಯಗಳು ಒಂದಕ್ಕಿಂತ ಒಂದು ರುಚಿಕರ. ಅಪ್ಪಟ ಉಡುಪಿ ಶೈಲಿಯ ಸಾಂಬಾರ್‌, ಪಲ್ಯ, ಅನ್ನ, ಹಯಗ್ರೀವ ಮಡ್ಡಿ, ಪಾಯಸ, ಘಮಘಮಿಸುವ ತಿಳಿಸಾರು, ಮಜ್ಜಿಗೆ ಹೀಗೆ ಭರ್ಜರಿ ಭೋಜನವಿತ್ತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ತೆಲುಗು ಭಾಷಿಕರು, ಉಡುಪಿ ಅಡುಗೆಯ ಬಗ್ಗೆ ಕೇಳಿದ್ದರಂತೆ. ಈಗ ಅದನ್ನು ಸವಿಯುವ ಭಾಗ್ಯ ಸಿಕ್ಕಿತು, ಉಡುಪಿಗೆ ಬಂದು ಊಟ ಮಾಡಿದಷ್ಟು ಸಂತೋಷವಾಯಿತು ಎಂದು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಒಟ್ಟಿನಲ್ಲಿ, ಉದ್ಯೋಗ ನಿಮಿತ್ತ ಹುಟ್ಟೂರಿನಿಂದ ಸಾವಿರಾರು ಕಿಲೋ ಮೀಟರ್‌ ದೂರದಲ್ಲಿದ್ದರೂ ಮಕ್ಕಳಲ್ಲಿ ಎಳವೆಯÇÉೇ ಸನಾತನ ಸಂಸ್ಕೃತಿಯನ್ನು ಬಿತ್ತಿ ಬೆಳೆಸುವ ಪ್ರಯತ್ನಕ್ಕೆ ಪೂರಕವಾಗಿ ಸ್ಪಂದಿಸುವ ಹೆತ್ತವರ ಪ್ರಯತ್ನಕ್ಕೆ ಇಂತಹ ಕಾರ್ಯಕ್ರಮಗಳು ಬಹಳಷ್ಟು ಉಪಯುಕ್ತ.

*ಮೋಹನದಾಸ ಕಿಣಿ ಕಾಪು, ಫ್ಲೋರಿಡಾ

ಟಾಪ್ ನ್ಯೂಸ್

MOSSAD 4

ಪುಟ್ಟ ದೇಶದ ಈ ಇಂಟೆಲಿಜೆನ್ಸ್‌ ಏಜೆನ್ಸಿ ಭಾರತದ ʻರಾʼ ಗಿಂತಲೂ ಪವರ್‌ಫುಲ್‌..!

ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ಸಿಎಂ ಸಿದ್ದರಾಮಯ್ಯ

ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ಸಿಎಂ ಸಿದ್ದರಾಮಯ್ಯ

tdy-18

AsianGames: ಒಂದು ಮೊಬೈಲ್‌ಗಾಗಿ ಸಾವಿರಾರು ಕಸದಬ್ಯಾಗ್‌ ಹುಡುಕಾಡಿದ ಸಿಬ್ಬಂದಿ: ಆಗಿದ್ದೇನು?

Haryana ಬೈಕ್‌ನಲ್ಲೇ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿದ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್

Haryana ಬೈಕ್‌ನಲ್ಲೇ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿದ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್

Kalaburagi; ಡಿವೈಡರ್ ಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ಸಾವು

Kalaburagi; ಡಿವೈಡರ್ ಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ಸಾವು

delta

Goa: ಕ್ಯಾಸಿನೊ ಆಪರೇಟರ್ ಡೆಲ್ಟಾ ಕಾರ್ಪ್‍ಗೆ GST ಬಾಕಿ ಕುರಿತು ನೋಟಿಸ್

Politics: 32 ಎಎಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ಪ್ರತಾಪ್ ಸಿಂಗ್ ಬಾಜ್ವಾ

Politics: 32 ಆಪ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ಕೇಜ್ರಿವಾಲ್ ಗೆ ಬಾಜ್ವಾ ಸಂದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdsad

Kannada in UK ; ಲಂಡನ್ ನಲ್ಲಿ ಮೊಳಗಲಿರುವ ಕನ್ನಡ ಬಳಗದ ಡಿಂಡಿಮ

1—adsad

Goa; ಮಾಪ್ಸಾದಲ್ಲಿ ಕನ್ನಡ ಸಂಘದ ಕನ್ನಡ ಗಣಪನ ಪ್ರತಿಷ್ಠಾಪನೆ

ಆನ್‌ಲೈನ್‌ ಗಣೇಶನ ಆರಾಧನೆ….!

ಆನ್‌ಲೈನ್‌ ಗಣೇಶನ ಆರಾಧನೆ….!

Desi Swara: ಕರಿಮಾಯಿ ಎಂಬ ಅದ್ಭುತ ರಸಾನುಭವ! ಭಾವಕೋಶದಲ್ಲಿ ಅಳಿಯದ ನೆನಪನ್ನಿತ್ತ ಕ್ಷಣ

Desi Swara: ಕರಿಮಾಯಿ ಎಂಬ ಅದ್ಭುತ ರಸಾನುಭವ! ಭಾವಕೋಶದಲ್ಲಿ ಅಳಿಯದ ನೆನಪನ್ನಿತ್ತ ಕ್ಷಣ

Head phone; ಬಿಡುವಿಲ್ಲದ ಕಿವಿಗಳಿಗೆ ಗುಟ್ಟೊಂದ ಹೇಳಬೇಕು…!

Head phone; ಬಿಡುವಿಲ್ಲದ ಕಿವಿಗಳಿಗೆ ಗುಟ್ಟೊಂದ ಹೇಳಬೇಕು…!

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

MOSSAD 4

ಪುಟ್ಟ ದೇಶದ ಈ ಇಂಟೆಲಿಜೆನ್ಸ್‌ ಏಜೆನ್ಸಿ ಭಾರತದ ʻರಾʼ ಗಿಂತಲೂ ಪವರ್‌ಫುಲ್‌..!

ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ಸಿಎಂ ಸಿದ್ದರಾಮಯ್ಯ

ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ಸಿಎಂ ಸಿದ್ದರಾಮಯ್ಯ

puttakkana makkalu team outing

ಪುಟ್ಟಕ್ಕನ ಮಕ್ಕಳ ಔಟಿಂಗ್

tdy-18

AsianGames: ಒಂದು ಮೊಬೈಲ್‌ಗಾಗಿ ಸಾವಿರಾರು ಕಸದಬ್ಯಾಗ್‌ ಹುಡುಕಾಡಿದ ಸಿಬ್ಬಂದಿ: ಆಗಿದ್ದೇನು?

Haryana ಬೈಕ್‌ನಲ್ಲೇ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿದ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್

Haryana ಬೈಕ್‌ನಲ್ಲೇ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿದ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.