ವಿಜಯಪುರದ ಯೋಧ ಅಸ್ಸಾಂನಲ್ಲಿ ಹೃದಯಾಘಾತದಿಂದ ಸಾವು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
Team Udayavani, Dec 2, 2021, 7:05 PM IST
ವಿಜಯಪುರ: ಆಸ್ಸಾಂ ರಾಜ್ಯದಲ್ಲಿ ಸಿಆರ್ ಪಿಎಫ್ ಪಡೆಯ ಎಸೈ ಆಗಿದ್ದ ವಿಜಯಪುರ ಜಿಲ್ಲೆಯ ಯೋಧ ಭೀಮಪ್ಪ ಕೋಲಕಾರ ಹೃದಯಾಘಾತದಿಂದ ನವೆಂಬರ್ 30 ರಂದು ಮೃತಪಟ್ಟಿದ್ದು, ಮೃತರ ಶವ ಗುರುವಾರ ತವರಿಗೆ ಆಗಮಿಸಿದ್ದು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆರವೇರಿಸಲಾಯಿತು.
ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದವರಾಗಿದ್ದ ಭೀಮಪ್ಪ ಮ. ಕೋಲ್ಕಾರ ಅವರು ಸಿ.ಆರ್.ಪಿ.ಎಫ್ನಲ್ಲಿ ಸೇವೆಗೆ ಸೇರಿದ್ದು, ಸದ್ಯ ಆಸ್ಸಾಂನ ಜೈಸಾಗರ, ಶಿವಸಾಗರನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ನವೆಂಬರ್ 30 ರಂದು ಕರ್ತವ್ಯದಲ್ಲಿದ್ದಾಗಲೇ ಮಧ್ಯಾಹ್ನ 3-30 ಕ್ಕೆ ಹೃದಯಾಘಾತವಾಗಿ, ಯೋಧ ಭೀಮಪ್ಪ ಕೋಲಕಾರ ಮೃತಪಟ್ಟಿದ್ದಾರೆ.
ಮೃತ ಯೋಧ ಭೀಮಪ್ಪ ಅವರು ಪತ್ನಿ, ಒರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗ ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ವಿಜಯಪುರ ನಗರದಲ್ಲಿ ಗುರುವಾರ ಮದ್ಯಾಹ್ನ 12 ಗಂಟೆಗೆ ಜರುಗಿತು. ಜಿಲ್ಲಾಡಳಿತ, ಪೋಲಿಸ ಇಲಾಖೆ ಹಾಗೂ ಯಲಹಂಕ ಸಿ.ಆರ್.ಪಿ.ಎಫ್ ಗ್ರೂಪ್ ಸೆಂಟರ್ನಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಅಂತಿಮ ಗೌರವ ಸಲ್ಲಿಸಲಾಯಿತು.
ಯೋಧ ಭೀಮಪ್ಪ ಅವರ ಪಾರ್ಥೀವ ಶರೀರ ನಗರಕ್ಕೆ ಆಗಮಿಸುತ್ತಲೇ ಸ್ಥಳಕ್ಕೆ ತೆರಳಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕರ್ನಾಟಕ ರಾಜ್ಯ ಸಾವಯವ ಬೀಜ ಪ್ರಮಾಣ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ, ವಿಜಯಪುರ ತಹಶೀಲ್ದಾರ ಸಿದ್ದು ಭೋಸಗಿ, ಆರ್.ಎಸ್.ಐ ಎಸ್.ಜಿ ಸಂಬರಗಿ, ಮಹಿಳಾ ಪಿ.ಎಸ್.ಐ ಚೌರ, ಪಿ.ಎಸ್.ಐ ಮುಶಾಪುರಿ ಅಂತಿಮ ಗೌರವ ಸಲ್ಲಿಸಿ, ಮೃತರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ : ಕರ್ನಾಟಕಕ್ಕೂ ಎಂಟ್ರಿ ಕೊಟ್ಟ ಒಮಿಕ್ರಾನ್ ವೈರಸ್ : ಇಬ್ಬರಲ್ಲಿ ಪತ್ತೆಯಾದ ಸೋಂಕು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು
Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ
Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್
Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ
MUST WATCH
ಹೊಸ ಸೇರ್ಪಡೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು
Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ
ಸಿಆರ್ಝಡ್ ಮರಳು ಇನ್ನು ಸದ್ಯಕ್ಕೆ ಮರೀಚಿಕೆ