ಶಕ್ತಿ ಕೇಂದ್ರಕ್ಕೂ ತಟ್ಟಿದ ಗ್ರಹಣದ ಬಿಸಿ


Team Udayavani, Dec 26, 2019, 6:02 PM IST

Vidhana-Soudha-Dark

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಗೋಚರಿಸಿದ ಕಂಕಣ ಸೂರ್ಯಗ್ರಹಣದ ಪ್ರಭಾವ ಶಕ್ತಿ ಕೇಂದ್ರ ವಿಧಾನಸೌಧದ ಮೇಲೂ ದಟ್ಟವಾಗಿಯೇ ಬೀರಿತ್ತು. ಬಹುತೇಕ ಸಚಿವರ ಕೊಠಡಿಗೆ ಗ್ರಹಣದ ಅವಧಿಯಲ್ಲಿ ಬೀಗ ಹಾಕಿದ್ದು ಕಂಡುಬಂತು. ರಾಜಧಾನಿಯಲ್ಲಿ ಬೆಳಗ್ಗೆ 11.11ಕ್ಕೆ ಗ್ರಹಣ ಅವಧಿ ಮುಗಿದ ಕೆಲವು ಹೊತ್ತಿನ ಬಳಿಕವಷ್ಟೇ ವಿಧಾನಸೌಧದಲ್ಲಿ ಕಾರ್ಯ ಚಟುವಟಿಕೆಗಳು ಸಹಜ ಸ್ಥಿತಿಗೆ ಮರಳಿತು.

ವಿಧಾನಸೌಧದಲ್ಲಿ ಬೆಳಗ್ಗೆ 11.30ರವರೆಗೆ ಅಧಿಕಾರಿಗಳು, ನೌಕರರು ಮತ್ತು ಸಿಬಂದಿ ಸಂಖ್ಯೆ ವಿರಳವಾಗಿತ್ತು. ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರ ಕಚೇರಿ ಸಹಿತ ಬಹುತೇಕ ಸಚಿವರ ಕಚೇರಿಗೆ ಬೀಗ ಹಾಕಲಾಗಿತ್ತು. ಸಚಿವರ ಕಚೇರಿಗೆ ಹೊಂದಿಕೊಂಡ ಆಪ್ತ ಸಹಾಯಕರ ಕಚೇರಿಯಲ್ಲೂ ನೌಕರರ ಸಂಖ್ಯೆ ವಿರಳವಾಗಿತ್ತು. ವಿಧಾನಸೌಧದ ಆವರಣ, ಕಾರಿಡಾರ್‌ಗಳಲ್ಲೂ ಸಾರ್ವಜನಿಕರ ಓಡಾಟ ವಿರಳವಾಗಿತ್ತು. ನೌಕರರು ಮತ್ತು ಸಿಬಂದಿ ವಿರಳವಾಗಿದ್ದರಿಂದ ವಿಧಾನಸೌಧದ ಕಾರಿಡಾರ್‌ಗಳು ಭಣಗುಡುತ್ತಿದ್ದವು.

ಸ್ವಚ್ಛತೆ- ಪೂಜೆ- ಧೂಪ
ಬೆಳಗ್ಗೆ 11.30ರ ಬಳಿಕವಷ್ಟೇ ನೌಕರರು, ಸಿಬಂದಿ ಕಚೇರಿಗಳತ್ತ ಬರಲಾರಂಭಿಸಿದರು. ಬಳಿಕ ಸಿಬಂದಿ ಕಚೇರಿಗಳನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ತೊಡಗಿದ್ದರು. ಸಚಿವರ ಕೊಠಡಿಗಳಲ್ಲಿ ಕುರ್ಚಿ, ಮೇಜುಗಳನ್ನು ಸ್ವಚ್ಛಗೊಳಿಸುತ್ತಿರುವ ದೃಶ್ಯ ಕಂಡುಬಂತು. ಕೆಲವು ಕಚೇರಿಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕವಷ್ಟೇ ನೌಕರರು ಮತ್ತು ಅಧಿಕಾರಿಗಳು ಕೆಲಸ ಆರಂಭಿಸಿದರು.

ಕಂದಾಯ ಸಚಿವ ಆರ್‌. ಅಶೋಕ್‌ ಅವರ ಕೊಠಡಿಯನ್ನು ಸಿಬಂದಿ ಸಂಪೂರ್ಣವಾಗಿ ಸ್ವತ್ಛಗೊಳಿಸಿದರು. ಬಳಿಕ ಇಡೀ ಕೊಠಡಿಗೆ ಸಾಂಬ್ರಾಣಿ ಧೂಪ ಹಾಕಿ ಕಿಟಕಿ ಬಾಗಿಲುಗಳನ್ನು ಕೆಲವು ಹೊತ್ತು ಮುಚ್ಚಲಾಗಿತ್ತು. ಕ್ರಮೇಣ ಇತರ ಸಚಿವ ಕೊಠಡಿಗಳ ಬೀಗಗಳನ್ನು ತೆರೆಯಲಾಯಿತು. ಮಧ್ಯಾಹ್ನ 12.30ರ ಹೊತ್ತಿಗೆ ಬಹುತೇಕ ಕಚೇರಿಗಳಲ್ಲಿ ಕೆಲಸ ಕಾರ್ಯಗಳು ಆರಂಭವಾದವು.

ನಿರಂತರ ಸಭೆ

ಮುಖ್ಯಮಂತ್ರಿ ಟಿ.ಎಂ. ವಿಜಯ ಭಾಸ್ಕರ್‌ ಅವರು ಗುರುವಾರವೂ ಎಂದಿನಂತೆ ಕೆಲಸ ಕಾರ್ಯದಲ್ಲಿ ತೊಡಗಿದ್ದರು. ಬೆಳಗ್ಗೆ 10.30ಕ್ಕೆ ಆಯ್ದ ಅಧಿಕಾರಿಗಳೊಂದಿಗೆ ತಮ್ಮ ಕಚೇರಿಯಲ್ಲೇ ಸಭೆ ನಡೆಸಿದ ಅವರು ಬಳಿಕ ಮಧ್ಯಾಹ್ನ 12 ಹೊತ್ತಿಗೆ ಸಮಿತಿ ಕೊಠಡಿಯಲ್ಲಿ ಮತ್ತೂಂದು ಸಭೆಯಲ್ಲಿ ನಿರತರಾಗಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.