ಹನಿಟ್ರ್ಯಾಪ್‌ ಆರೋಪಿಗಳಲ್ಲಿ ಕೆಲವರು ಕಿರುತೆರೆ ಕಲಾವಿದರು


Team Udayavani, Nov 29, 2019, 6:15 AM IST

dd-58

ಸಾಂದರ್ಭಿಕ ಚಿತ್ರ

ಬೆಂಗಳೂರು: ಮಾಜಿ ಸಚಿವರು, ಶಾಸಕರ ಹನಿಟ್ರ್ಯಾಪ್‌ ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೊಳಗಾಗಿರುವ ಇಬ್ಬರು ಯುವತಿಯರು ಸೇರಿ ಕೆಲವು ಆರೋಪಿಗಳು ಕಿರುತೆರೆಯ ಕಲಾವಿದರು ಎಂಬುದು ಸಿಸಿಬಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಅಲ್ಲದೆ, ಆರೋಪಿಗಳ ಹನಿಟ್ರ್ಯಾಪ್‌ಗೆ
ಒಳಗಾದ ಮಾಜಿ ಸಚಿವರೊಬ್ಬರು ಆರೋಪಿಗಳ ಬ್ಲಾಕ್‌ಮೇಲ್‌ಗೆ ಬೇಸತ್ತು ಅವರ ಹತ್ಯೆಗೆ ಸುಪಾರಿ ಕೊಟ್ಟಿದ್ದರು ಎಂಬ ಸಂಗತಿ ಬಯಲಾಗಿದೆ.

ಪ್ರಮುಖ ಆರೋಪಿ ರಾಘವೇಂದ್ರ ಅಲಿಯಾಸ್‌ ರಘು ಮನೆಯಲ್ಲಿ ಜಪ್ತಿ ಮಾಡಲಾದ ಸಿಡಿ ಹಾಗೂ ಆತನ ಬಳಿ ಪತ್ತೆಯಾದ ಆರು ಮೊಬೈಲ್‌ಗಳಲ್ಲಿ ಹನಿಟ್ರ್ಯಾಪ್‌ಗೆ ಒಳಗಾದವರ ವಿವರಗಳು ದಾಖಲಾಗಿದ್ದು,
ಆರೋಪಿಗಳು ಸುಮಾರು 10ಕ್ಕೂ ಅಧಿಕ ಮಂದಿ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳನ್ನು ಖೆಡ್ಡಕ್ಕೆ ಕೆಡವಿದ್ದಾರೆ. ರಾಘವೇಂದ್ರನ ಸ್ನೇಹಿತೆ ಕಿರುತೆರೆಯಲ್ಲಿ ಮೇಕಪ್‌ ಕೆಲಸ ಮಾಡುತ್ತಿದ್ದು, ಈತ ಕೂಡ ಅದನ್ನೇ ಮಾಡುತ್ತಿದ್ದ. ಮತ್ತೂಬ್ಬ ಯುವತಿ ನಟಿಯಾಗಿದ್ದಳು.ಈ ಕಾರಣಕ್ಕೆ ಬಹಳಷ್ಟು ಜನಪ್ರತಿನಿ  ಧಿಗಳು ಆರೋಪಿಗಳ ಸಾಂಗತ್ಯ ಬೆಳೆಸಿದ್ದರು. ಈ ವಿಡಿಯೋಗಳಿಂದ ತಮ್ಮ ಜೀವನ ಹಾಳಾಗುತ್ತದೆ ಎಂಬ ಭಯದಿಂದಲೇ ಕೆಲವರು ದೂರು ನೀಡುವುದಿಲ್ಲ ಎಂಬ ಭರವಸೆ ಯಿಂದಲೇ ಆರೋಪಿಗಳು ದಂಧೆ ಮುಂದುವರಿಸಿದ್ದರು. ದಂಧೆಯಿಂದ ಕೋಟಿಗಟ್ಟಲೇ ಹಣ ಸಂಪಾದನೆ ಮಾಡುತ್ತಿದ್ದ ಆರೋಪಿಗಳು
ನಟನೆಯಿಂದ ದೂರ ಉಳಿದಿದ್ದರು. ಬಳಿಕ, ರಾಘವೇಂದ್ರನ ಜತೆ ನಿರಂತರ ಸಂಪರ್ಕ ಹೊಂದಿ, ಆತ ಸೂಚಿಸಿದ ವ್ಯಕ್ತಿಗಳ ಜತೆ ಹೋಗುತ್ತಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಸುಪಾರಿ ಕೊಟ್ಟಿದ್ದರಾ ಮಾಜಿ ಸಚಿವರು?: ಆರೋಪಿ ರಾಘವೇಂದ್ರ ಮತ್ತು ಆತನ ಸ್ನೇಹಿತರೆ ಮಾಜಿ
ಸಚಿವರಿಗೆ 10 ಕೋಟಿಗೆ ಬೇಡಿಕೆ ಇಟ್ಟಿದ್ದು, ನಿರಂತರ ವಾಗಿ ಕರೆ ಮಾಡಿ ತೊಂದರೆ ಕೊಡುತ್ತಿದ್ದರು. ಅದರಿಂದ ಬೇಸತ್ತ ಮಾಜಿ ಸಚಿವರು, ಆರೋಪಿಗಳ ಹತ್ಯೆಗೆ ಸುಪಾರಿ ಕೊಟ್ಟಿದ್ದರು. ಈ ಸಂಬಂಧ ಕೆಲ ಯವಕರು ರಾಘವೇಂದ್ರ ಮತ್ತು ಆತನ ಸ್ನೇಹಿತೆ ಹತ್ಯೆಗೆ ಹುಡುಕಾಟ ನಡೆಸುತ್ತಿದ್ದರು. ಈ ಆರೋಪಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದ ಗದಗ ಮತ್ತು ಹುಬ್ಬಳ್ಳಿ ಯುವಕರನ್ನು ಹುಡುಕಾಡುವಾಗ ಹುಬ್ಬಳ್ಳಿ ಪೊಲೀಸರು ಸುಪಾರಿ ಹಂತಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯಾಂಶ ಬಯಲಾಗಿದೆ.
ಕೂಡಲೇ ಎಚ್ಚೆತ್ತ ಪೊಲೀಸರು ಆ ಮಾಜಿ ಸಚಿವರು ಹಾಗೂ ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ರಾಜ್ಯದ ಪ್ರಭಾವಿ ಸಚಿವರ ಸೂಚನೆ ಮೇರೆಗೆ ಬೆಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇಬ್ಬರು ಶಾಸಕರನ್ನು ಸೇರಿ ಹತ್ತು ಮಂದಿಯನ್ನು ಖೆಡ್ಡಾಗೆ ಕೆಡವಲು ರಾಘವೇಂದ್ರ ತನ್ನ ಗೆಳತಿಯನ್ನು ಬಳಸಿಕೊಳ್ಳಲು ಮುಂದಾಗಿದ್ದ. ಆರಂಭ ದಲ್ಲಿ ಆಕೆ ಹಿಂದೇಟು ಹಾಕಿದ್ದಳು. ಆದರೆ, ಹಣದಾಸೆಗೆ ಸ್ನೇಹಿತನಿಗೆ ಸಹಕಾರ ನೀಡಿದ್ದಳು. ಈಕೆ ಹಾಗೂ ಆಕೆಯ ಸ್ನೇಹಿತೆ ಕಿರುತೆರೆಗಾಗಿ ತೆಗೆಸಿದ್ದ
ಫೋಟೋಗಳನ್ನು ಬಳಸಿ ಪ್ರಭಾವಿ ವ್ಯಕ್ತಿಗಳನ್ನು ಬಲೆಗೆ ಬೀಳಿಸಲು ರಾಘವೇಂದ್ರ ಸಂಚು ರೂಪಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಲೇಜು ಯುವತಿಯರ ಹೆಸರಿನಲ್ಲಿ ದಂಧೆ
ಕಾಲೇಜು ಯುವತಿಯರ ಹೆಸರಿನಲ್ಲಿ ಹುಡುಗಿಯರನ್ನು ರಘು ತಯಾರು ಮಾಡುತ್ತಿದ್ದ. ಅದೇ ಯುವತಿಯರು ಶಾಸಕರ ಬಳಿ ತೆರಳಿ ಅಧ್ಯಯನ ಮಾಡುತ್ತಿದ್ದೇವೆ. ವಾಸ್ತವ್ಯಕ್ಕೆ ಸ್ಥಳ ಬೇಕೆಂದು ಮನವಿ ಮಾಡಿ ಕೊಳ್ಳುತ್ತಿದ್ದರು. ಶಾಸಕರಿಗೆ ಹುಡುಗಿಯರ ನಂಬರ್‌ ಕೊಡಿಸಿ ಪರಿಚಯ ಮಾಡಿಸುತ್ತಿದ್ದ. ಅದನ್ನು ನಂಬಿದ ಶಾಸಕರ ನಂಬರ್‌ ಪಡೆದ ಯುವತಿ ಯರು ಪದೇ ಪದೇ ಕಾಲ್‌ ಮಾಡಿ ಶಾಸಕರು, ಮಾಜಿ ಸಚಿವರರನ್ನು ಖೆಡ್ಡಾಗೆ ಬೀಳಿಸಿಕೊಳ್ಳುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.