ಗುಣವಂತ ಪದವೀಧರರೇ ಸಮಾಜದ ಸಂಪತ್ತು: ಸೋದೆ ಶ್ರೀ


Team Udayavani, Mar 27, 2023, 6:25 AM IST

ಗುಣವಂತ ಪದವೀಧರರೇ ಸಮಾಜದ ಸಂಪತ್ತು: ಸೋದೆ ಶ್ರೀ

ಶಿರ್ವ: ವಿದ್ಯೆ ಮಾತ್ರ ವಿದ್ಯಾರ್ಥಿಗಳ ಆವಶ್ಯಕತೆಯಲ್ಲ. ಅದರೊಂದಿಗೆ ಕೆಲವು ಗುಣಗಳನ್ನು ಅಳವಡಿಸಿಕೊಂಡಲ್ಲಿ ಉತ್ತಮ ವ್ಯಕ್ತಿಗಳಾಗಿ ಸಮಾಜಕ್ಕೆ ಆಸ್ತಿಯಾಗಲು ಸಾಧ್ಯ. ಗುಣವಂತ ಪದವೀಧರರು ದೇಶದ ಸಂಪತ್ತಾಗಿ ಸಮಾಜವನ್ನು ಮುನ್ನಡೆಸಬೇಕು ಎಂದು ಸಂಸ್ಥೆಯ ಅಧ್ಯಕ್ಷ ಶ್ರೀ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಹೇಳಿದರು.
ಅವರು ಮಾ. 26ರಂದು ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ 9ನೇ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದರು.

ಮುಖ್ಯ ಅತಿಥಿ ನಿಟ್ಟೆ ವಿ.ವಿ.ಯ ಸಹ ಉಪಕುಲಪತಿ ಡಾ| ಎಂ.ಎಸ್‌. ಮೂಡಿತ್ತಾಯ ಉಪನ್ಯಾಸ ನೀಡಿ, ಜೀವನವು ಶಾಲೆಗಿಂತ ಹೆಚ್ಚಿನ ಪಾಠ ಕಲಿಸುತ್ತದೆ. ಪದವೀಧರರು ಹೆತ್ತವರ ತ್ಯಾಗಕ್ಕೆ ವಂದನೆ ಸಲ್ಲಿಸುವುದರೊಂದಿಗೆ ಕಲಿತ ವಿದ್ಯಾಸಂಸ್ಥೆ ಮತ್ತು ಗುರುಗಳನ್ನು ಮರೆಯಬಾರದು ಎಂದು ಸಲಹೆ ನೀಡಿದರು.

ಮಂಗಳೂರಿನ ಇನ್ಫೋಟೆಕ್‌ ಸೊಲ್ಯೂಶನ್‌ನ (ಯುನಿಕೋರ್ಟ್‌ ಇಂಡಿಯಾ) ಸಹ ಸಂಸ್ಥಾಪಕ ಪ್ರಶಾಂತ್‌ ಶೆಣೈ ಮಾತನಾಡಿ, ಪದವೀಧರರು ತಮ್ಮ ವೃತ್ತಿ ಜೀವನದಲ್ಲಿ ಬರಬಹುದಾದ ಸವಾಲುಗಳನ್ನು ಎದುರಿಸಲು ಸದೃಢರಾಗಿ, ಸ್ಪರ್ಧಾ ತ್ಮಕ ಜಗತ್ತಿನಲ್ಲಿ ನಿರಂತರವಾಗಿ ಕಲಿಯಬೇಕು ಎಂದರು.

ಸಿವಿಲ್‌ ಎಂಜಿನಿಯರಿಂಗ್‌ನಲ್ಲಿ 9ನೇ ರ್‍ಯಾಂಕ್‌ ಪಡೆದ ಜಾನ್ವಿ ವಿ. ನಿಲೇಕಣಿ ಅವರನ್ನು ಗೌರವಿಸಲಾ ಯಿತು. ಗಣಕಯಂತ್ರ ವಿಭಾಗದ ಭಾರ್ಗವ ರಾಮ್‌ ಉಡುಪ, ಸಿವಿಲ್‌ ವಿಭಾಗದ ಜಾನ್ವಿ ವಿ. ನಿಲೇಕಣಿ, ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಭೂಮಿಕಾ ಜೆ.ಎಸ್‌. ಹಾಗೂ ಯಂತ್ರಶಿಲ್ಪ ವಿಭಾ ಗದ ರಜತ್‌ ಅವರಿಗೆ ಮಂಗಳೂರಿನ ಮೆ| ಎಸ್‌.ಎಲ್‌. ಶೇಟ್‌ ಜುವೆಲರ್ನ ಪ್ರಶಾಂತ್‌ ಶೇಟ್‌ ಮತ್ತು ಹೇಮಂತ್‌ ಶೇಟ್‌ ಪ್ರಾಯೋಜಿತ ಚಿನ್ನದ ಪದಕ ಪ್ರದಾನ ಮಾಡಲಾಯಿತು. ಸಂಸ್ಥೆಯ ಡೀನ್‌ ಡಾ| ಸುದರ್ಶನ್‌ ರಾವ್‌ ಚಿನ್ನದ ಪದಕ ವಿಜೇತರ ಪಟ್ಟಿ ವಾಚಿಸಿದರು.
ಸಂಸ್ಥೆಯ ಕಾರ್ಯದರ್ಶಿ ರತ್ನ ಕುಮಾರ್‌ ಮಾತನಾಡಿದರು. ಉಪ ಪ್ರಾಂಶು ಪಾಲ ಡಾ| ಗಣೇಶ್‌ ಐತಾಳ್‌ ಪ್ರಮಾಣ ವಚನ ಬೋಧಿಸಿದರು. ಕಾಲೇಜಿನ ವಿವಿಧ ಶೈಕ್ಷಣಿಕ ವಿಭಾಗಗಳ ಮುಖ್ಯಸ್ಥರು ವೇದಿಕೆಯಲ್ಲಿದ್ದರು.

ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ| ಲೊಲಿಟಾ ಪ್ರಿಯಾ ಕ್ಯಾಸ್ತಲಿನೊ ಮತ್ತು ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ| ಸುಬ್ಬುಲಕ್ಷ್ಮೀ ಎನ್‌. ಕಾರಂತ ಅತಿಥಿಗಳನ್ನು ಪರಿಚಯಿಸಿದರು.
ಪ್ರಾಂಶುಪಾಲ ಡಾ| ತಿರುಮಲೇಶ್ವರ ಭಟ್‌ ಸ್ವಾಗತಿಸಿದರು. ಪ್ರಾಧ್ಯಾಪಕರಾದ ಕಾರ್ತಿಕ್‌ ವಿ. ಮತ್ತು ಅಕ್ಷತಾ ರಾವ್‌ ನಿರೂಪಿಸಿ, ಡಾ| ರವೀಂದ್ರ ಎಚ್‌.ಜೆ. ವಂದಿಸಿದರು.

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.