ಪ್ರವಾಸಿಗರಿಗೆ ಸಿಹಿಸುದ್ದಿ; ಶೀಘ್ರವೇ ದೆಹಲಿ ಟು ಲಂಡನ್ ಬಸ್ ಸೌಲಭ್ಯ; 18 ದೇಶಗಳ ಸುತ್ತಾಟ!

ಬಸ್ ತೆರಳುವ ಮಾರ್ಗ ಅಂತಿಮವಾದ ಕೂಡಲೇ ಪ್ರಯಾಣಿಕರು ಸಾಹಸದ ಲಂಡನ್ ಪ್ರಯಾಣವನ್ನು ಕೈಗೊಳ್ಳಬಹುದಾಗಿದೆ.

ನಾಗೇಂದ್ರ ತ್ರಾಸಿ, Feb 17, 2022, 12:09 PM IST

ಪ್ರವಾಸಿಗರಿಗೆ ಸಿಹಿಸುದ್ದಿ; ಶೀಘ್ರವೇ ದೆಹಲಿ ಟು ಲಂಡನ್ ಬಸ್ ಸೌಲಭ್ಯ; 18 ದೇಶಗಳ ಸುತ್ತಾಟ!

ನವದೆಹಲಿ: ಒಂದು ವೇಳೆ ನಾವು ವಿದೇಶ ಪ್ರಯಾಣ ಕೈಗೊಳ್ಳುವುದಿದ್ದರೆ, ನಮಗೆ ಇರುವ ಏಕೈಕ ಮಾರ್ಗ ಅದು ವಿಮಾನ ಪ್ರಯಾಣ. ಆದರೆ ಇನ್ಮುಂದೆ ನಮ್ಮ ಆಲೋಚನೆಯನ್ನು ಸ್ವಲ್ಪ ಬದಲಾಯಿಸಿಕೊಳ್ಳಬಹುದು. ಹೌದು ಶೀಘ್ರದಲ್ಲಿಯೇ ಭಾರತದಿಂದ ಲಂಡನ್ ವರೆಗೆ ಬಸ್ ನಲ್ಲೇ ಪ್ರಯಾಣಿಸಬಹುದಾಗಿದೆ! ಈ ನೂತನ ಐಶಾರಾಮಿ ಸೌಲಭ್ಯದಿಂದ ಭಾರತ ಮತ್ತು ಮ್ಯಾನ್ಮಾರ್ ಗಡಿ ಉದ್ವಿಗ್ನತೆ ಶಮನವಾಗಲಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:1.20 ಕೋಟಿ ಮಕ್ಕಳಲ್ಲಿ 600 ಮಕ್ಕಳಿಂದ ಹಿಜಾಬ್‍ಗಾಗಿ ಹಠ: ಬಿ.ಸಿ ನಾಗೇಶ್

70 ದಿನಗಳು, 18 ದೇಶಗಳ ಸುತ್ತಾಟ:

ಮೂಲಗಳ ಪ್ರಕಾರ, ನವದೆಹಲಿ ಟು ಲಂಡನ್ ಬಸ್ ಸೌಲಭ್ಯ ಸೆಪ್ಟೆಂಬರ್ ನಿಂದ ಐಶಾರಾಮಿ, ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸುವ ಮೂಲಕ ಆರಂಭವಾಗಲಿದೆ. ಬಸ್ ತೆರಳುವ ಮಾರ್ಗ ಅಂತಿಮವಾದ ಕೂಡಲೇ ಪ್ರಯಾಣಿಕರು ಸಾಹಸದ ಲಂಡನ್ ಪ್ರಯಾಣವನ್ನು ಕೈಗೊಳ್ಳಬಹುದಾಗಿದೆ. ಈ ಅತ್ಯಾಧುನಿಕ ಸೌಲಭ್ಯದ ಬಸ್ 70 ದಿನಗಳ ಕಾಲ 20,000 ಸಾವಿರ ಕಿಲೋ ಮೀಟರ್ ಕ್ರಮಿಸುವ ಮೂಲಕ 18 ದೇಶಗಳಲ್ಲಿ ಸುತ್ತಾಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:150 ಗಡಿ, 15 ದೇಶ ದಾಟಿ ಲಂಡನ್ ನಿಂದ ಭಾರತಕ್ಕೆ ಸಂಚರಿಸುತ್ತಿದ್ದ ಬಸ್ ಯಾನದ ಬಗ್ಗೆ ಗೊತ್ತಾ!

ನವದೆಹಲಿಯಿಂದ ಲಂಡನ್ ಗೆ ಬಸ್ ನಲ್ಲಿ ಪ್ರಯಾಣಿಸಲು ಒಬ್ಬ ಪ್ರಯಾಣಿಕನಿಗೆ 15 ಲಕ್ಷ ರೂಪಾಯಿ ವೆಚ್ಚ ತಗುಲಲಿದೆ. ಇದರಲ್ಲಿ ಬಸ್ ಟಿಕೆಟ್, ವೀಸಾ, ವಿವಿಧ ದೇಶಗಳಲ್ಲಿ ವಾಸ್ತವ್ಯ ಹೂಡುವ ಲಾಡ್ಜಿಂಗ್ ವೆಚ್ಚ ಕೂಡಾ ಸೇರಲಿದೆ. ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣಕ್ಕಾಗಿ ಊಟೋಪಚಾರ, ಮದ್ಯಪಾನ ಹಾಗೂ ಮಲಗುವ ವ್ಯವಸ್ಥೆ ಮಾಡಲಾಗಿದೆ. ಈ ಬಸ್ 20 ಆಸನಗಳನ್ನು ಹೊಂದಿದ್ದು, ಪ್ರತಿ ಪ್ರಯಾಣಿಕರಿಗೆ ಅವರ ಕ್ಯಾಬಿನ್ ನಿಗದಿಪಡಿಸಲಾಗುತ್ತದೆ.

ಮೂಲಗಳ ಪ್ರಕಾರ, ಈ ಬಸ್ ಸೇವೆಯು ಮ್ಯಾನ್ಮಾರ್, ಥಾಯ್ ಲ್ಯಾಂಡ್, ಚೀನಾ ಮತ್ತು ಕರ್ಜೈಸ್ತಾನ್ ಮೂಲಕ ಫ್ರಾನ್ಸ್ ಗೆ ಪ್ರಯಾಣಿಸಲಿದೆ. ಇದಲ್ಲದೇ ಇಂಗ್ಲೆಂಡ್ ಗೆ ಭೇಟಿ ನೀಡಲು ಕ್ರೂಸ್ ಹಡಗನ್ನು ಸಹ ಬಳಸಲಾಗುತ್ತದೆ. ನಂತರ ಫ್ರಾನ್ಸ್ ನಿಂದ ಯುನೈಟೆಡ್ ಡೋವರ್ ಗೆ ತೆರಳಲು ಬೋಟ್ ಅನ್ನು ಬಳಸಲಾಗುತ್ತದೆ ಎಂದು ತಿಳಿಸಿದೆ.

ನವದೆಹಲಿಯಿಂದ ಲಂಡನ್ ಗೆ ಬಸ್ ಪ್ರಯಾಣ ಹೊಸ ಪ್ರಯೋಗವೇನು ಅಲ್ಲ, ಇದೇ ರೀತಿಯ ಬಸ್ ಸೇವೆ ಸುಮಾರು 65 ವರ್ಷಗಳ ಹಿಂದೆ ಬ್ರಿಟಿಷ್ ಬಸ್ ಕಂಪನಿಯ ಆಲ್ಬರ್ಟ್ ಟೂರ್ಸ್ ಆರಂಭಿಸಿತ್ತು. 1957ರಲ್ಲಿ ಕೋಲ್ಕತಾ ಟು ಲಂಡನ್ ಗೆ ಬಸ್ ಸೇವೆ ಆರಂಭಗೊಂಡಿತ್ತು. ಇದು “ಹಿಪ್ಪಿ ರೂಟ್” ಎಂದೇ ಜನಪ್ರಿಯಗೊಂಡಿತ್ತು. 1976ರವರೆಗೂ ಈ ಡಬಲ್ ಡೆಕರ್ ಬಸ್ ಸೇವೆ ಮುಂದುವರಿದಿದ್ದು, ಕೆಲವು ಅಪಘಾತ ಪ್ರಕರಣ ಹಾಗೂ ದೇಶಗಳ ನಡುವಿನ ಗಡಿ ಸಮಸ್ಯೆ ಹೆಚ್ಚಳವಾದ ನಂತರ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.