ದಕ್ಷಿಣ ಭಾರತೀಯರಿಗೆ ಧೈರ್ಯ ಕಡಿಮೆ!
Team Udayavani, Sep 16, 2019, 5:00 AM IST
ಬೆಂಗಳೂರು: ‘ದಕ್ಷಿಣ ಭಾರತದವರು ಬುದ್ಧಿವಂತರು, ಕೌಶಲ ಹೊಂದಿರುವವರು. ಆದರೆ ತಮಗಾದ ಅನ್ಯಾಯ, ಹಕ್ಕನ್ನು ಕೇಳಲು ಧೈರ್ಯವಿಲ್ಲದವರು…’
ಇದು ರಾಜ್ಯಪಾಲ ವಿ.ಆರ್.ವಾಲಾ ಅವರ ಹೇಳಿಕೆ. ಭಾರತರತ್ನ ಸರ್ಎಂ. ವಿಶ್ವೇಶ್ವರಯ್ಯ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಿದ್ದರೂ ಅದನ್ನು ಪ್ರಶ್ನಿಸುವುದಿಲ್ಲ. ಹೀಗಾಗಿಯೇ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿಕೊಳ್ಳುತ್ತಾರೆ. ಹಣದ ಬದಲಿಗೆ ಚಿನ್ನಾಭರಣದ ರೂಪದಲ್ಲಿ ಲಂಚ ಪಡೆಯುತ್ತಿದ್ದಾರೆ. ಲಂಚ ಕೇಳುವವರ ವಿರುದ್ಧ ಸರಕಾರದ ಮಟ್ಟದಲ್ಲಿ ದೂರು ನೀಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದರು.
ಜಿಎಸ್ಟಿ ಜಾರಿಯಾದ ಅನಂತರ ಅಧಿಕಾರಿಗಳು ಇಲ್ಲಸಲ್ಲದ ಕಾರಣಗಳಿಗೆ ಲಂಚ ಪಡೆಯುತ್ತಿದ್ದಾರೆ. ಲಂಚ ಕೇಳುವ ಅಧಿಕಾರಿಗಳ ಬಗ್ಗೆ ಎಚ್ಚರ ವಹಿಸಿ ಎಂದರು. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರೂ ಕಾನೂನು ಪರಿಪಾಲನೆ ಮಾಡಬೇಕು. ಅದು ಮುಖ್ಯಮಂತ್ರಿಗಳ ಮಗನಾದರೂ ಪ್ರಭಾವಿ ರಾಜಕಾರಣಿಯಾದರೂ ಸರಿ. ತಪ್ಪು ಯಾರೇ ಮಾಡಿದರೂ ತಪ್ಪೇ. ಅಂತಹವರಿಗೆ ಶಿಕ್ಷೆ ಆಗೇ ಆಗುತ್ತದೆ ಎಂದು ರಾಜ್ಯದ ಮಾಜಿ ಸಚಿವರೊಬ್ಬರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ