ಬಿಕ್ಕಟ್ಟಿನಲ್ಲಿ ವಿಶೇಷ ಹಾರಾಟ!


Team Udayavani, Jul 19, 2019, 5:23 AM IST

special-flight

ಬೆಂಗಳೂರು: ರಾಜ್ಯದಲ್ಲಿ ಉಂಟಾದ ರಾಜಕೀಯ ಬಿಕ್ಕಟ್ಟು ಮತ್ತು ಲೋಹದ ಹಕ್ಕಿಗಳಿಗೂ ಭರ್ಜರಿ ಸಂಬಂಧವುಂಟು…!

ಹೌದು, ಯಾಕೆಂದರೆ, ಕರ್ನಾಟಕದಲ್ಲಿ ರಾಜಕೀಯ ಬಿಕ್ಕಟ್ಟು ಶುರುವಾದ ಮೇಲೆ, ಅಂದರೆ 18 ದಿನಗಳಲ್ಲಿ ಒಟ್ಟಾರೆ 55ಕ್ಕೂ ಹೆಚ್ಚು ನಿಗದಿತವಲ್ಲದ ವಿಶೇಷ ವಿಮಾನಗಳು ಹಾರಾಟ ನಡೆಸಿವೆ. ಇವುಗಳಲ್ಲಿ ಬಹುತೇಕ ಹಾರಾಟ ನಡೆಸಿದವರು ಸರ್ಕಾರದಿಂದ ಸಿಟ್ಟಿಗೆದ್ದು ಹೋದ ಅತೃಪ್ತ ಶಾಸಕರು, ಮುನಿಸಿಕೊಂಡ ಅವರನ್ನು ಕರೆತರಲು ಹೋದ ನಾಯಕರು, ಸುದ್ದಿ
ತಿಳಿಯುತ್ತಿದ್ದಂತೆ ಸರ್ಕಾರದ ನೆರವಿಗೆ ಬಂದ ವರಿಷ್ಠರೇ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಲೋಹದ ಹಕ್ಕಿಗಳು ರಾಜಕೀಯ ನಾಯಕರಿಗೆ “ಸಂಪರ್ಕ ಸೇತುವೆ’ಗಳಾಗಿವೆ.

ಮುಂಬೈ, ದೆಹಲಿಗೇ ಹೆಚ್ಚು: ವಿಶೇಷ ವಿಮಾನಗಳನ್ನು ಹೆಚ್ಚಾಗಿ ಬಳಕೆ ಮಾಡುವವರು ಉದ್ಯಮಿಗಳು, ವಿಐಪಿಗಳು. ಆದರೆ, ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ಶುರುವಾದ ಮೇಲೆ ರಾಜಕಾರಣಿಗಳೇ ಹೆಚ್ಚಾಗಿ ಈ ಮಾದರಿಯ ವಿಮಾನಗಳನ್ನು ಬುಕಿಂಗ್‌ ಮಾಡಿದ್ದಾರೆ. ಅವುಗಳಲ್ಲಿ ಬೆಂಗಳೂರು - ಮುಂಬೈ ಮತ್ತು ಬೆಂಗಳೂರು-ದೆಹಲಿ ಮಾರ್ಗದಲ್ಲೇ ಹೆಚ್ಚು ವಿಮಾನಗಳು ಕಾರ್ಯಾಚರಣೆ ಮಾಡಿವೆ. ವಿಶೇಷ ವಿಮಾನಗಳು ನಗರದ ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ಕಾರ್ಯಾಚರಣೆ ಮಾಡಿದರೂ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಏರ್‌ ಟ್ರಾμಕ್‌ ಅನುಮತಿ ಪಡೆಯಬೇಕಾಗುತ್ತದೆ.

ಎರಡು ವಾರಗಳಲ್ಲಿ ಅಂದಾಜು 25ರಿಂದ 30 ವಿಶೇಷ ವಿಮಾನಗಳು ಆಗಮನವಾಗಿದ್ದರೆ, ಹೆಚ್ಚು ಕಡಿಮೆ ಇಷ್ಟೇ ವಿಮಾನಗಳ ನಿರ್ಗಮನವೂ ಆಗಿದೆ ಎಂದು ಮೂಲಗಳು ‘ಉದಯವಾಣಿ’ಗೆ ತಿಳಿಸಿವೆ.

ಯಾರ್ಯಾರು ಪ್ರಯಾಣ?: ಹತ್ತು ಅತೃಪ್ತ ಶಾಸಕರು ಬೆಂಗಳೂರು ಮುಂಬೈ ನಡುವೆ ವಿಶೇಷ ವಿಮಾನದಲ್ಲಿ ಮೂರು ಬಾರಿ ಪ್ರಯಾಣ ಮಾಡಿದ್ದರೆ, ರಾಜಕೀಯ ಅತಂತ್ರದ ಸುದ್ದಿ ತಿಳಿದು ವಿದೇಶದಲ್ಲಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ದೆಹಲಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದ್ದಾರೆ. ಅತೃಪ್ತರ ರಾಜೀನಾಮೆಯಿಂದ ಉಂಟಾದ ಪರಿಸ್ಥಿತಿ ನಿಭಾಯಿಸಲು ಕಾಂಗ್ರೆಸ್‌ ಹಿರಿಯ ನಾಯಕ ಗುಲಾಂನಬಿ ಆಜಾದ್‌ ಒಮ್ಮೆ ಬಂದು ಹೋಗಿದ್ದಾರೆ. ಅತೃಪ್ತರನ್ನು ಕರೆತರಲು ಸಚಿವರಾದ ಡಿ.ಕೆ. ಶಿವಕುಮಾರ್‌, ಜಿ.ಟಿ. ದೇವೇಗೌಡ, ಶಾಸಕರಾದ ಶಿವಲಿಂಗೇಗೌಡ ಮತ್ತು ಬಾಲಕೃಷ್ಣ ಮುಂಬೈಗೆ ಹೋಗಿಬಂದಿದ್ದಾರೆ. ಅತೃಪ್ತರ ಗುಂಪು ಸೇರಲು ಶಾಸಕ ಎಂಟಿಬಿ ನಾಗರಾಜ್‌ ಮತ್ತು ಅಶೋಕ್‌ ಮುಂಬೈಗೆ ಹಾರಿದ್ದಾರೆ. ಗುರುವಾರ ಬೆಳಿಗ್ಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾಲ್ವರು ಶಾಸಕರೊಂದಿಗೆ ಶ್ರೀಮಂತ ಪಾಟೀಲ ಕೂಡ ಇದೇ ವಿಶೇಷ ವಿಮಾನದಲ್ಲಿ ಮುಂಬೈಗೆ ತೆರಳಿದ್ದಾರೆ.

ಗಂಟೆಗೆ 2.25 ರಿಂದ 2.50 ಲಕ್ಷ ರೂ: ಒಂದು ಚಾರ್ಟರ್ಡ್‌ ವಿಮಾನ (ಐದು ಆಸನಗಳದ್ದು)ದ ಬಾಡಿಗೆ ಪ್ರತಿ ಗಂಟೆಗೆ 2.25ರಿಂದ 2.50 ಲಕ್ಷ ರೂ. ಬೆಂಗಳೂರು ಮುಂಬೈ ನಡುವಿನ ಹಾದಿ 1.20 ಗಂಟೆಯದ್ದಾಗಿದೆ. ಅಂದರೆ 4.50ರಿಂದ 5 ಲಕ್ಷ ರೂ. ಆಗುತ್ತದೆ. ಈ ಮಾದರಿಯ ವೈಮಾನಿಕ ಸೇವಾ ಕಂಪೆನಿಗಳು ದೇಶದಲ್ಲಿ ನಾಲ್ಕರಿಂದ ಐದು ಇವೆ. ಇವುಗಳನ್ನು ಹೊರತುಪಡಿಸಿ, ದೊಡ್ಡ ಉದ್ಯಮಿಗಳು ಕೂಡ ಸ್ವಂತ ವಿಮಾನಗಳನ್ನು ಹೊಂದಿದ್ದು, ಅವರಿಂ ದಲೂ ವಿಮಾನ ಸೇವೆ ಬಾಡಿಗೆಗೆ ದೊರೆಯುತ್ತವೆ ಎಂದು ಬಿಐಎಎಲ್ ಮೂಲಗಳು ತಿಳಿಸಿವೆ.

6 ತಾಸು ಮೊದಲೇ ಬುಕಿಂಗ್‌
ವಿಶೇಷ ವಿಮಾನಗಳನ್ನು ಕನಿಷ್ಠ ಆರು ತಾಸು ಮುಂಚಿತವಾಗಿಯೇ ಬುಕಿಂಗ್‌ ಮಾಡಬೇಕಾಗುತ್ತದೆ. ಸಾಮಾನ್ಯವಾಗಿ ಬೆಂಗಳೂರಿನಂತಹ ಮಹಾನಗರಗಳಲ್ಲಿ ಇವು ಲಭ್ಯ ಇರುತ್ತವೆ. ಅಂದಹಾಗೆ ಇಲ್ಲಿಂದ ಮಾಸಿಕ ಸರಾಸರಿ 150 ನಿಗದಿತವಲ್ಲದ ವಿಮಾನ (ಆಗಮನ ನಿರ್ಗಮನ ಸೇರಿ)ಗಳು ಹಾರಾಟ ನಡೆಸುತ್ತವೆ.

– ವಿಜಯ್ ಕುಮಾರ್ ಚಂದರಗಿ

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.