ಲಂಕಾ ಸರಕಾರಕ್ಕೆ ಕುತ್ತು; ಅಲ್ಪಮತಕ್ಕೆ ಕುಸಿದ ಬೆಂಬಲ ;41 ಸಂಸದರು ಸಂಸತ್‌ಗೆ ಗೈರು


Team Udayavani, Apr 6, 2022, 8:25 AM IST

ಲಂಕಾ ಸರಕಾರಕ್ಕೆ ಕುತ್ತು; ಅಲ್ಪಮತಕ್ಕೆ ಕುಸಿದ ಬೆಂಬಲ ;41 ಸಂಸದರು ಸಂಸತ್‌ಗೆ ಗೈರು

ಕೊಲೊಂಬೊ: ಲಂಕಾ ದ್ವೀಪವನ್ನು ಇನ್ನಿಲ್ಲದಂತೆ ಸುಡುತ್ತಿರುವ ಆರ್ಥಿಕ ಬಿಕ್ಕಟ್ಟಿನ ಬೆಂಕಿ ಈಗ ಮೈತ್ರಿಕೂಟ ಸರಕಾರದ ಬುಡಕ್ಕೇ ಬಿದ್ದಿದೆ. ಮಂಗಳವಾರ ಜರುಗಿದ ಸಂಸತ್‌ ಅಧಿವೇಶನದಲ್ಲಿ ಮೈತ್ರಿಕೂಟ ಸರಕಾರ ಅಲ್ಪಮತಕ್ಕೆ ಕುಸಿದಿರುವುದು ಅತ್ಯಂತ ಸ್ಪಷ್ಟವಾಗಿದ್ದು, ಅಧ್ಯಕ್ಷ ಗೋಟಬಯ ರಾಜಪಕ್ಸ ಸರಕಾರ ಯಾವುದೇ ಕ್ಷಣದಲ್ಲೂ ಪತನವಾಗುವ ಅಪಾಯ ಎದುರಿಸುತ್ತಿದೆ. ತುರ್ತು ಪರಿಸ್ಥಿತಿ ಘೋಷಿಸಿದ ಬಳಿಕ ಇದೇ ಮೊದಲ ಬಾರಿಗೆ ಸಂಸತ್‌ ಅಧಿವೇಶನ ನಡೆದಿದ್ದು, ಮೈತ್ರಿಕೂಟದಲ್ಲಿನ ಕೆಲವು ಪಕ್ಷಗಳು ತಟಸ್ಥ ಧೋರಣೆ ಅನುಸರಿಸಲು ನಿರ್ಧರಿಸಿವೆ. ಬಹುತೇಕ ಸಂಸದರು ಅಧಿವೇಶನಕ್ಕೆ ಗೈರಾಗಿ, ದೂರವೇ ಉಳಿದಿದ್ದರು.

ಬಹುಮತದ ಕೊರತೆ: 2020ರಲ್ಲಿ 150 ಸಂಸದ ಬಲದಿಂದ ಶ್ರೀಲಂಕಾ ಪೊದುಜನ ಪೆರಮುನಾ (ಎಸ್‌ಎಲ್‌ಪಿಪಿ) ಮೈತ್ರಿಕೂಟ ಸರಕಾರ ಅಧಿಕಾರ ಹಿಡಿದಿತ್ತು. ಪ್ರಸ್ತುತ 41 ಸಂಸದರು ಅಧಿವೇಶನ ದಿಂದ ದೂರ ಉಳಿದಿದ್ದರಿಂದಾಗಿ, ಮೈತ್ರಿಕೂಟ ಸರಕಾರದ ಸಂಖ್ಯಾಬಲ 109ಕ್ಕೆ ಕುಸಿತ ಕಂಡಿದೆ. ಸರಳ ಬಹುಮತಕ್ಕೆ 113 ಸ್ಥಾನಗಳ ಬೆಂಬಲ ಆವ ಶ್ಯಕತೆ ಇದ್ದು, 4 ಸ್ಥಾನಗಳ ಕೊರತೆಯನ್ನು ರಾಜಪಕ್ಸ ಸರಕಾರ ಅನುಭವಿಸುತ್ತಿದೆ. ಶ್ರೀಲಂಕಾದ ಸಂಸತ್‌ ಒಟ್ಟು 225 ಸ್ಥಾನಗಳನ್ನು ಹೊಂದಿದೆ.

14 ಸಂಸದರೊಂದಿಗೆ ಸರಕಾರದ ಜತೆ ಕೈಜೋಡಿಸಿದ್ದ ಶ್ರೀಲಂಕಾ ಫ್ರೀಡಂ ಪಾರ್ಟಿ (ಎಸ್‌ಎಲ್‌ಎಫ್ಪಿ) ಬೆಂಬಲ ಹಿಂತೆಗೆದುಕೊಂಡಿದ್ದು, ರಾಜ ಪಕ್ಸ ಸರಕಾರಕ್ಕೆ ಬಹುದೊಡ್ಡ ಹಿನ್ನಡೆ ಉಂಟಾಗಿದೆ. 41 ಸಂಸದರ ಗೈರಾಗಿದ್ದಾಗ್ಯೂ, ಎಸ್‌ಎಲ್‌ಪಿಪಿ ಸರಕಾರದ ಸಂಸದ ರೋಹಿತಾ ಅಬೇ ಗುಣವರ್ಧನ, “ಸರಕಾರಕ್ಕೆ ಸಂಪೂರ್ಣ ಬಹು ಮತವಿದೆ. ಕನಿಷ್ಠ 138 ಸಂಸದರು ಸರಕಾರ‌ ಜತೆಗಿದ್ದಾರೆ. ಯಾವುದೇ ಅಪಾಯವಿಲ್ಲ’ ಎಂದೇ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾರ್ವೆ, ಇರಾಕ್‌ನ ರಾಯಭಾರಿ ಕಚೇರಿ ಬಂದ್‌
ಆರ್ಥಿಕ ದಿವಾಳಿತನದ ಬೆನ್ನಲ್ಲೇ ಶ್ರೀಲಂಕಾ ಸರ್ಕಾರ ನಾರ್ವೆ, ಇರಾಕ್‌ನಲ್ಲಿನ ತನ್ನ ರಾಯಭಾರಿ ಕಚೇರಿಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಮುಂದಾಗಿದೆ. ಆಸ್ಟ್ರೇಲಿಯಾದಲ್ಲಿನ ಕಾನ್ಸುಲೇಟ್‌ ಜನರಲ್‌ ಹುದ್ದೆಯ ರದ್ದತಿಗೂ ಆದೇಶಿಸಿದೆ. “ಎಪ್ರಿಲ್‌ 30ರಿಂದ ಈ ಆದೇಶ ಜಾರಿಗೆ ಬರಲಿದ್ದು, ಪ್ರಸ್ತುತ ಸನ್ನಿವೇಶದಲ್ಲಿ ಸಾಗರೋತ್ತರ ರಾಜತಾಂತ್ರಿಕ ಪುನರ್ರಚನೆಯ ಆವಶ್ಯಕತೆ ಮನಗಂಡು ಈ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಸರಕಾರ ಸ್ಪಷ್ಟಪಡಿಸಿದೆ.

ಲಂಕಾಕ್ಕೆ ಬೀಸಿದ್ದು ಅರಬ್‌ ಹೋರಾಟದ ಗಾಳಿ?
ಭ್ರಷ್ಟಾಚಾರ, ಹಣದುಬ್ಬರ ವಿರೋಧಿಸಿ, 2010ರಲ್ಲಿ ಅರಬ್‌ ರಾಷ್ಟ್ರಗಳಲ್ಲಿ ಭಾರೀ ಪ್ರತಿಭಟನೆ ವ್ಯಕ್ತವಾಗಿತ್ತು. “ಅರಬ್‌ ರಾಷ್ಟ್ರಗಳ ಮಾದರಿಯಲ್ಲೇ ಈಗ ಲಂಕೆಯಲ್ಲಿ ಹೋರಾಟ ಶುರುವಾಗಿದೆ’ ಎನ್ನುತ್ತಾರೆ, ಲಂಕಾ ಆರ್ಥಿಕ ತಜ್ಞ ಶಶಿ ದಾನತುಂಗೆ.

“ಅರಬ್‌ ಮಾದರಿಯ ಈ ಹೋರಾಟ ಇಡೀ ವ್ಯವಸ್ಥೆಯನ್ನೇ ಬುಡಮೇಲು ಮಾಡಿ, ಯುವಕರ ನ್ನೊಳಗೊಂಡ ನೂತನ ಆಡಳಿತ ರಚಿಸುವ ಸಾಧ್ಯತೆ ಇದೆ. ವಿದ್ಯಾವಂತ ಯುವಕರೇ ಅಧಿಕ ಸಂಖ್ಯೆಯಲ್ಲಿ ಪ್ರತಿಭಟನೆಯ ನೇತೃತ್ವ ವಹಿಸುತ್ತಿದ್ದಾರೆ. ಅವರೆಲ್ಲರೂ ಹಳೇ ಊಳಿಗಮಾನ್ಯ ಮತ್ತು ಭ್ರಷ್ಟಾಚಾರ ವ್ಯವಸ್ಥೆ ಕಿತ್ತೂ ಗೆಯಲು ಕಾತರರಾಗಿದ್ದಾರೆ’ ಎಂದು ವಿಶ್ಲೇಷಿಸಿದ್ದಾರೆ.

ಏತನ್ಮಧ್ಯೆ, ಮಂಗಳವಾರ ಜೋರು ಮಳೆಯನ್ನೂ ಲೆಕ್ಕಿಸದೆ ಸಹಸ್ರಾರು ವಿದ್ಯಾರ್ಥಿಗಳು ಬೀದಿಗಿಳಿದು, ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದ ದೃಶ್ಯ ಕಂಡುಬಂತು.

ಟಾಪ್ ನ್ಯೂಸ್

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.