ಕೊಲ್ಲೂರು ಮೂಕಾಂಬಿಕೆ ಸಾನ್ನಿಧ್ಯದಲ್ಲಿ ಭಕ್ತ ಸಾಗರ!
ಕೇರಳ, ತಮಿಳುನಾಡು ರಾಜ್ಯದ ಗಡಿಗಳಲ್ಲಿ ನಿರ್ಬಂಧ ತೆರವು
Team Udayavani, Mar 7, 2022, 6:20 AM IST
ಕೊಲ್ಲೂರು: ವಾರಾಂತ್ಯ ರಜೆ ಹಾಗೂ ರಾಜ್ಯದ ಗಡಿಗಳಲ್ಲಿ ಕೊರೊನಾ ನಿರ್ಬಂಧಗಳು ತೆರವಾಗಿರುವ ಹಿನ್ನೆಲೆಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ರವಿವಾರ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕಂಡುಬಂದರು.
ಮಾ. 5 ಮತ್ತು 6ರಂದು ಕರ್ನಾಟಕ ಸಹಿತ ವಿವಿಧ ರಾಜ್ಯಗಳಿಂದ ಯಾತ್ರಾರ್ಥಿಗಳು ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಮುಂಜಾನೆಯಿಂದ ರಾತ್ರಿ ತನಕ ನೆರೆದ ಭಕ್ತರಿಗೆ ಅನಾಯಾಸ ದರ್ಶನಕ್ಕೆ ವ್ಯವಸ್ಥೆಗೊಳಿಸಲಾಗಿತ್ತು. ಭಕ್ತರ ಸರದಿ ಸಾಲು ಮುಖ್ಯ ರಸ್ತೆಯನ್ನು ದಾಟಿ ಮುಂದುವರಿದಿದ್ದು, ಹಲವಾರು ತಿಂಗಳ ಅನಂತರದ ಕ್ಷೇತ್ರದಲ್ಲಿ ಇಷ್ಟು ಸಂಖ್ಯೆಯಲ್ಲಿ ಭಕ್ತರ ಆಗಮನವಾಗಿದೆ.
ವಸತಿ ಗೃಹಗಳು ಭರ್ತಿ
ಕೊರೊನಾ ಸೋಂಕು ಕಡಿಮೆಯಾದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳ ಗಡಿಪ್ರದೇಶಗಳಲ್ಲಿ ನಿರ್ಬಂಧಗಳು ತೆರವಾಗಿ ವಾಹನಗಳಮುಕ್ತ ಸಂಚಾರಕ್ಕೆ ಅನುವು ಮಾಡಿಕೊಟ್ಟಿ ರುವ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷ ದಿಂದೀಚೆಗೆ ಕ್ಷೇತ್ರ ದರ್ಶನಕ್ಕೆ ತೆರಳಲಾಗದೇ ಚಡಪಡಿಸುತ್ತಿದ್ದ ಹೊರರಾಜ್ಯಗಳ ಭಕ್ತರು ಇಲ್ಲಿಗೆ ಆಗಮಿಸಿದ್ದರು. ದೇಗುಲದ ಹಾಗೂ ಖಾಸಗಿ ವಸತಿ ಗೃಹಗಳು ಭರ್ತಿಯಾಗಿದ್ದವು. ಅಂಗಡಿಗಳಲ್ಲಿ ಖರೀದಿಗಾಗಿ ಭಕ್ತರು ಮುಗಿಬೀಳುತ್ತಿರುವುದು ಕಂಡುಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್