ಶ್ರೀರಾಮ ಭಾರತೀಯ ಸಂಸ್ಕೃತಿಯ ಮೂಲ ಆಧಾರ: ಡಾ| ಕಲ್ಲಡ್ಕ

ಕಲ್ಯಾಣಪುರದಲ್ಲಿ ಶ್ರೀರಾಮಚಂದ್ರನ ದಿಗ್ವಿಜಯ ರಥಯಾತ್ರೆಗೆ ಸ್ವಾಗತ

Team Udayavani, Nov 8, 2022, 6:20 AM IST

ಶ್ರೀರಾಮ ಭಾರತೀಯ ಸಂಸ್ಕೃತಿಯ ಮೂಲ ಆಧಾರ: ಡಾ| ಕಲ್ಲಡ್ಕ

ಮಲ್ಪೆ: ರಾಮ ಅಂದರೆ ನಮ್ಮ ರಾಷ್ಟ್ರ, ನಮ್ಮ ಧರ್ಮ, ನಮ್ಮ ಸಂಸ್ಕೃತಿ, ಜೀವನ ಮೌಲ್ಯಗಳು. ರಾಮನನ್ನು ಬಿಟ್ಟು ಬೇರೆ ಜೀವನ ಮೌಲ್ಯಗಳು ಜಗತ್ತಿನಲ್ಲಿ ಇಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಡಾ| ಪ್ರಭಾಕರ ಭಟ್‌ ಕಲ್ಲಡ್ಕ ಹೇಳಿದರು.

ಅವರು ಸೋಮವಾರ ಕಲ್ಯಾಣಪುರ ಸಂತೆಕಟ್ಟೆಗೆ ಆಗಮಿಸಿದ ರಾಮನ ದಿಗ್ವಿಜಯ ರಥಯಾತ್ರೆಯ ಸಂದರ್ಭದ ಧಾರ್ಮಿಕ ಸಭೆಯಲ್ಲಿ ಉಪನ್ಯಾಸ ನೀಡಿದರು.

ರಾಮಮಂದಿರವನ್ನು ನಿರ್ಮಿಸುವುದಷ್ಟೇ ನಮ್ಮ ಉದ್ದೇಶವಾಗಬಾರದು. ದೇಶವನ್ನು ರಾಮರಾಜ್ಯವಾಗಿಸುವ ನಿಟ್ಟಿನಲ್ಲೂ ಶ್ರಮಿಸಬೇಕು. ಮೊದಲು ನಾವು ರಾಮನಾಗಬೇಕು. ಹಿರಿಯರು ಕಿರಿಯರನ್ನು ಸರಿದಾರಿಯಲ್ಲಿ ನಡೆಸ ಬೇಕು. ನಮ್ಮೆಲ್ಲರ ಹೃದಯದಲ್ಲಿ ರಾಮಮಂದಿರದ ಉದಯವಾಗ ಬೇಕು ಎಂದರು.

ರಾಮ ಧರ್ಮದ ಸಾಕಾರ ಮೂರ್ತಿ
ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚನ ನೀಡಿ, ಶ್ರೀರಾಮ ಧರ್ಮದ ಸಾಕಾರ ಮೂರ್ತಿ. ಯಾರನ್ನು ಶ್ರೀರಾಮ ಬದುಕಿನಲ್ಲಿ ಒಂದು ಬಾರಿಯೂ ನೋಡಿಲ್ಲವೋ ಯಾವ ವ್ಯಕ್ತಿ ಬದುಕಿನಲ್ಲಿ ರಾಮನನ್ನು ಒಂದು ಬಾರಿಯೂ ಕಂಡಿಲ್ಲವೋ ಅವರಿಬ್ಬರೂ ಕೂಡ ಲೋಕದಲ್ಲಿ ನಿಂದಿತರಾಗಿರುತ್ತಾರೆ. ಅವರ ಅಂತರಾತ್ಮವೇ ಅವರನ್ನು ನಿಂದಿಸುತ್ತದೆ. ವ್ಯಕ್ತಿ ಪ್ರಪಂಚದಲ್ಲಿ ತಾನೊಬ್ಬ ಮಾತ್ರ ಬದುಕದೆ ಎಲ್ಲರೂ ಸುಖದಿಂದ ಬದುಕಬೇಕು ಎಂದು ಬಯಸುತ್ತಾನೋ ಅದು ಧರ್ಮ. ರಾಮರಾಜ್ಯದ ಕನಸು ನನಸಾಗಬೇಕಾದರೆ ನಾವೆಲ್ಲರೂ ರಾಮನ ಆದರ್ಶವನ್ನು ಪಾಲಿಸಬೇಕು ಎಂದು ನುಡಿದರು.

ಅಖಿಲ ಭಾರತ ಸಂತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಶಕ್ತಿ ಶಾಂತಾನಂದ ಮೂರ್ತಿ ಮಾತನಾಡಿದರು. ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಈ ಹಿಂದೆ ಅಯೋಧ್ಯೆಯಲ್ಲಿ ಕರಸೇವಕರಾಗಿ ಕೆಲಸ ಮಾಡಿದ ಪ್ರಮುಖರನ್ನು ಗೌರವಿಸಲಾಯಿತು. ಗೌರವಾಧ್ಯಕ್ಷರಾದ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಪುರುಷೋತ್ತಮ ಶೆಟ್ಟಿ, ಹರಿಯಪ್ಪ ಕೋಟ್ಯಾನ್‌, ಮಹಿಳಾ ಪ್ರಮುಖ್‌ ತಾರಾ ಉಮೇಶ್‌ ಆಚಾರ್ಯ ಉಪಸ್ಥಿತರಿದ್ದರು.

ದಿಗ್ವಿಜಯ ರಥಯಾತ್ರ ಸಮಿತಿ ಅಧ್ಯಕ್ಷ ಆನಂದ ಶೆಟ್ಟಿ ಲಕ್ಷ್ಮೀ ನಗರ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ವಿಜಯ ಕೊಡವೂರು ಪ್ರಸ್ತಾವನೆಗೈದರು. ದಾಮೋದರ ಶರ್ಮ ಕಾರ್ಯಕ್ರಮ ನಿರೂಪಿಸಿದರು. ರಾಧಾಕೃಷ್ಣ ಮೆಂಡನ್‌ ವಂದಿಸಿದರು.

ಮೂಡುಬಿದಿರೆಯಲ್ಲಿ ಸ್ವಾಗತ
ರಥಯಾತ್ರೆಯು ಸೋಮವಾರ ಸಂಜೆ ಮೂಡುಬಿದಿರೆಗೆ ಆಗಮಿಸಿದ್ದು ಶ್ರೀ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಸೋಲೂರು ಆರ್ಯ ಈಡಿಗ ಮಠದ ಶ್ರೀ ವಿದ್ಯಾನಂದ ಸ್ವಾಮೀಜಿ ಮತ್ತು ಸ್ಥಳೀಯ ಗಣ್ಯರು ಸ್ವಾಗತಿಸಿದರು.

ವಾಹನ ಜಾಥಾ
ವಾಹನ ಜಾಥಾದಲ್ಲಿ ಸಾವಿರಾರು ಬೈಕ್‌, ಕಾರುಗಳು ಪಾಲ್ಗೊಂಡಿದ್ದು ವಿವಿಧ ವೇಷ ಭೂಷಣಗಳು, ಟ್ಯಾಬ್ಲೋಗಳು ಮೆರವಣಿಗೆಗೆ ಮೆರುಗನ್ನು ನೀಡಿದವು. ರಸ್ತೆಯ ಪಕ್ಕದ ಕೆಲವು ಅಂಗಡಿ, ಮನೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಸುಮಂಗಲಿಯರು ಶ್ರೀರಾಮನ ರಥಕ್ಕೆ ಆರತಿ ಬೆಳಗಿ ಪೂಜೆ ಸಲ್ಲಿಸಿದರು. ರಥಯಾತ್ರೆಯು ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ವರೆಗೆ ಸಾಗಿ ಅಲ್ಲಿ ವಿಶೇಷ ಪೂಜೆ ನಡೆಯಿತು. ಡಾ| ಜಿ. ಶಂಕರ್‌ ನೇತೃತ್ವದಲ್ಲಿ ಸುಮಾರು 4,500 ಮಂದಿಗೆ ಅನ್ನ ಪ್ರಸಾದ ಸೇವೆ ಜರಗಿತು.

ಟಾಪ್ ನ್ಯೂಸ್

josh hazlewood glenn maxwell will not feature opening match of RCB

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

navazuddin

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

4-mangaluru

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚುನಾವಣೆ ಅಕ್ರಮ ತಡೆಗೆ ಹದ್ದಿನ ಕಣ್ಣು: ತಪಾಸಣೆ ಬಿಗಿ 

ಚುನಾವಣೆ ಅಕ್ರಮ ತಡೆಗೆ ಹದ್ದಿನ ಕಣ್ಣು: ತಪಾಸಣೆ ಬಿಗಿ 

ಮದ್ಯಪಾನ ಮಾಡಿ ಮಲಗಿದ್ದ ವ್ಯಕ್ತಿಯನ್ನು ಎಬ್ಬಿಸಿ ಉಪಚರಿಸಿ ಮಾನವೀಯತೆ ಮೆರೆದ ಡಿಸಿ, ಎಸ್‌ಪಿ

ಮದ್ಯಪಾನ ಮಾಡಿ ಮಲಗಿದ್ದ ವ್ಯಕ್ತಿಯನ್ನು ಎಬ್ಬಿಸಿ ಉಪಚರಿಸಿ ಮಾನವೀಯತೆ ಮೆರೆದ ಡಿಸಿ, ಎಸ್‌ಪಿ

ಜಿಲ್ಲಾದ್ಯಂತ ಚುನಾವಣೆಗೆ ಸಕಲ ಸಿದ್ಧತೆ: ಉಡುಪಿ ಡಿ.ಸಿ.

ಜಿಲ್ಲಾದ್ಯಂತ ಚುನಾವಣೆಗೆ ಸಕಲ ಸಿದ್ಧತೆ: ಉಡುಪಿ ಡಿ.ಸಿ.

ಕುಡಿಯುವ ನೀರು ಪೂರೈಕೆಗೆ ಕ್ರಮ: ಉಡುಪಿ ಡಿ.ಸಿ

ಕುಡಿಯುವ ನೀರು ಪೂರೈಕೆಗೆ ಕ್ರಮ: ಉಡುಪಿ ಡಿ.ಸಿ

ಸಾಲದ ಬಾಕಿ ಅರ್ಜಿ ತ್ವರಿತ ವಿಲೇವಾರಿಗೆ ಸೂಚನೆ

ಸಾಲದ ಬಾಕಿ ಅರ್ಜಿ ತ್ವರಿತ ವಿಲೇವಾರಿಗೆ ಸೂಚನೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

josh hazlewood glenn maxwell will not feature opening match of RCB

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

crime (2)

ಬಳ್ಳಾರಿ: ತವರು ಮನೆ ಸೇರಿದ್ದ ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ

navazuddin

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್