ಶ್ರೀಲಂಕಾ ಅರಾಜಕತೆ : ಪ್ರತಿಭಟನೆ ಹತ್ತಿಕ್ಕಲು ಅರ್ಬನ್‌ ಪಾಕ್‌ಗೆ ಬೀಗ


Team Udayavani, Apr 10, 2022, 8:30 AM IST

ಶ್ರೀಲಂಕಾ ಅರಾಜಕತೆ : ಪ್ರತಿಭಟನೆ ಹತ್ತಿಕ್ಕಲು ಅರ್ಬನ್‌ ಪಾಕ್‌ಗೆ ಬೀಗ

ಕೊಲಂಬೊ: ಶ್ರೀಲಂಕಾದ ಆರ್ಥಿಕ ಅಧಃಪತನ, ಅರಾಜಕತೆಯ ವಿರುದ್ಧ ಎದ್ದಿರುವ ಆಂತರಿಕ ದಂಗೆಯನ್ನು ಹತ್ತಿಕ್ಕಲು ಶ್ರೀಲಂಕಾ ಸರಕಾರ ತನ್ನ ಕೈಲಾದ ಎಲ್ಲ ಪ್ರಯತ್ನಗಳನ್ನು ಮುಂದುವರಿಸಿದೆ.

ರಾಜಧಾನಿ ಕೊಲಂಬೋದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಗೆ ಹೆಚ್ಚೆಚ್ಚು ಜನರು ಸೇರ್ಪಡೆ ಗೊಳ್ಳುತ್ತಿರುವುದನ್ನು ಗಮನಿಸಿರುವ ಸರಕಾರ ಪ್ರತಿಭಟನ ಸ್ಥಳಕ್ಕೆ ಹತ್ತಿರವಿರುವ ಗಲ್ಲೆ ಫೇಸ್‌ ಗ್ರೀನ್‌ ಅರ್ಬನ್‌ ಪಾರ್ಕ್‌ ಎಂಬ ಬೃಹತ್‌ ಮೈದಾನವನ್ನು ಮುಚ್ಚಿದೆ. ಈ ಪಾರ್ಕ್‌ನ ಸಮೀಪವೇ ಶ್ರೀಲಂಕಾ ಅಧ್ಯಕ್ಷರ ಅಧಿಕೃತ ಕಚೇರಿ ಹಾಗೂ ವಿವಿಧ ಸಚಿವರ ಸಚಿವಾಲಯಗಳು ಇವೆ. ಇತ್ತೀಚಿನ ದಿನಗಳಲ್ಲಿ ಪ್ರತಿಭಟನಾಕಾರರು ಮೈದಾನದ ಆಚೆಗೆ ನಿಂತು ಪ್ರತಿಭಟನೆ ಮಾಡುತ್ತಿದ್ದುದನ್ನು ಗಮನಿಸಿದ ಸರಕಾರ ಈ ಕಚೇರಿಗಳನ್ನು ಮುಚ್ಚಿತ್ತು. ಈಗ, ಮೈದಾನಕ್ಕೆ ಪ್ರತಿಭಟನಾಕಾರರು ಕಾಲಿಡವುದನ್ನು ಹತ್ತಿಕ್ಕುವ ಸಲುವಾಗಿ ಪಾರ್ಕ್‌ ಅನ್ನು ಮುಚ್ಚುವ ನಿರ್ಧಾರ ಕೈಗೊಂಡಿದೆ.

ಈ ನಡುವೆ, ಗಾಲೆ ಫೇಸ್‌ ಪಾರ್ಕ್‌ ಸಮೀಪ ನಡೆಯುತ್ತಿರುವ ಪ್ರತಿಭಟನೆಯ ಕಾವು ಮತ್ತಷ್ಟು ಹೆಚ್ಚಾಗಿದೆ. ಶನಿವಾರ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು.
ಮತ್ತೂಂದೆಡೆ, ಶ್ರೀಲಂಕಾದ ಪ್ರಮುಖ ವಿಪಕ್ಷವಾದ ಸಮಗಿ ಜನ ಬಲವೆಗಯ (ಎಸ್‌ಜೆಬಿ), ಗೊಟಬಯಾ ರಾಜಪಕ್ಸೆ ಸರಕಾರದ ವಿರುದ್ಧ ಸದನದಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸುವುದಾಗಿ ಹೇಳಿದೆ. ಜನರ ದಂಗೆ ಕಾರಣವಾಗಿರುವ ಸಮಸ್ಯೆಗಳನ್ನು ಬೇಗನೇ ನಿವಾರಿಸದಿದ್ದಲ್ಲಿ ರಾಜಪಕ್ಸ ಅವರ ಮಹಾಭಿಯೋಗದ ಕುರಿತಾಗಿ ಮತ್ತೂಂದು ಗೊತ್ತುವಳಿ ಮಂಡಿಸುವುದಾಗಿ ಎಸ್‌ಜೆಬಿ ತಿಳಿಸಿದೆ.

ಐಎಂಎಫ್ ಗೆ ನಿಯೋಗ ಕಳುಹಿಸಲು ಚಿಂತನೆ: ಹದಗೆಟ್ಟಿರುವ ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ದೇಶದ ಖ್ಯಾತ ಆರ್ಥಿಕ ತಜ್ಞರನ್ನೆಲ್ಲ ಒಟ್ಟುಗೂಡಿಸಿ ಅಧ್ಯಕ್ಷರ ಸಲಹ ಸಮಿತಿಯೊಂದನ್ನು ರಚಿಸಿದ್ದಾರೆ. ಈ ಸಮಿತಿಯು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯ ಸಹಾಯದಿಂದ ಹಾಗೂ ಇನ್ನಿತರ ದೇಶಗಳಿಂದ ಸಾಲ ತರುವ ಮೂಲಕ 65 ಸಾವಿರ ಕೋಟಿ ರೂ.ಗಳ ಸಾಲವನ್ನು ತೀರಿಸುವ ಕುರಿತಂತೆ ರೂಪುರೇಷೆ ಸಿದ್ಧಪಡಿಸಲಿದೆ. ಇದಕ್ಕಾಗಿ ಸದ್ಯದಲ್ಲೇ ಈ ನಿಯೋಗ ಐಎಂಎಫ್ಗೆ ಭೇಟಿ ನೀಡಲಿದೆ.

ಮತ್ತಷ್ಟು ಸಾಲಕ್ಕೆ ನಿರ್ಧಾರ; ಬಡ್ಡಿದರ ಏರಿಕೆ
ಆರ್ಥಿಕ ಅಧೋಗತಿಯ ಜತೆಗೆ ಬ್ಯಾಂಕ್‌ಗಳ ಬಡ್ಡಿದರವನ್ನು ಏರಿಸುವ ನಿರ್ಧಾರವನ್ನು ಶ್ರೀಲಂಕಾ ಸರಕಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಬ್ಯಾಂಕ್‌ಗಳ ಬಡ್ಡಿದರವನ್ನು 700 ಬೇಸಿಸ್‌ ಪಾಯಿಂಟ್‌ಗಳಷ್ಟು ದಾಖಲೆಯ ಮಟ್ಟಕ್ಕೆ ಏರಿಸಲಾಗಿದೆ. ಇದರ ಪರಿಣಾಮವಾಗಿ, ಜನರು ಬ್ಯಾಂಕ್‌ಗಳಿಂದ ತೆಗೆದುಕೊಂಡಿರುವ ಸಾಲದ ಮೇಲಿನ ಬಡ್ಡಿದರ ಶೇ.14.5ಕ್ಕೆ ಏರಿದೆ.

ಬ್ಯಾಂಕ್‌ಗಳಲ್ಲಿರುವ ಜನರ ಠೇವಣಿಗಳ ಮೇಲಿನ ಬಡ್ಡಿಯನ್ನೂ ಶೇ.13.5ಕ್ಕೆ ಹೆಚ್ಚಿಸಲಾಗಿದೆ. ಸಾಲದ ಮೇಲೆ ಬಡ್ಡಿ ಹೆಚ್ಚಾಗುವುದರಿಂದ ಮತ್ತಷ್ಟು ರೊಚ್ಚಿಗೇಳುವ ಜನರನ್ನು ಸಮಾಧಾನ ಪಡಿಸಲು ಉಳಿತಾಯ ಠೇವಣಿಗಳ ಮೇಲಿನ ಬಡ್ಡಿದರ ಏರಿಸಲಾಗಿದೆಯಷ್ಟೇ ಎಂದು ವಿಪಕ್ಷಗಳು ಸರಕಾರದ ಕ್ರಮವನ್ನು ಟೀಕಿಸಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.