ಕಿತ್ತೂಗೆಯಲು ಏನು ಕೊತ್ತಂಬರಿ ಸೊಪ್ಪಾ? ಸಿದ್ದರಾಮಯ್ಯಗೆ ಶ್ರೀರಾಮುಲು ಪ್ರಶ್ನೆ
Team Udayavani, Apr 13, 2022, 7:43 AM IST
ಮಂಗಳೂರು:ಬಿಜೆಪಿ ಸರಕಾರವನ್ನು ಕಿತ್ತೆಸೆಯರಿ ಎಂದು ಕಾಂಗ್ರೆಸ್ ಪಕ್ಷದ ನಾಯಕರಾದ ಸಿದ್ದ ರಾಮಯ್ಯನವರು ಹೇಳುತ್ತಿ ದ್ದಾರೆ. ಹಾಗೆ ಕಿತ್ತೂಸೆಯಲು ಇದೇನು ಕೊತ್ತಂಬರಿ ಸೊಪ್ಪಾ? ಎಂದು ಸಾರಿಗೆ ಸಚಿವ ಹಾಗೂ ಬಿಜೆಪಿ ರಾಜ್ಯ ಕೋರ್ ಕಮಿಟಿ ಸದಸ್ಯ ಶ್ರೀರಾಮುಲು ಅವರು ಸಿದ್ದರಾಮಯ್ಯನವರಿಗೆ ಎದಿರೇಟು ನೀಡಿದ್ದಾರೆ.
ಮಂಗಳೂರಿನಲ್ಲಿ ಮಂಗಳವಾರ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಹಾಗೂ ಜಿಲ್ಲಾ ಪ್ರಮುಖರ ಸಭೆಯ ಸಂದರ್ಭದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಇತ್ತೀಚೆಗೆ ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ.
ಅವರ ಸ್ಥಿತಿ ನೋಡಿದರೆ ಪಾಪ ಕಾಂಗ್ರೆಸ್ನಲ್ಲೇ ಯಾರಿಗೂ ಬೇಡವಾದ ಕೂಸಾಗಿ ದ್ದಾರೆ. ಅದುದರಿಂದ ಈ ರೀತಿಯ ಹೇಳಿಕೆಗಳನ್ನು ನೀಡು ತ್ತಿದ್ದಾರೆ ಎಂದರು.
ಬಿಜೆಪಿ ದೇಶದಲ್ಲಿ, ರಾಜ್ಯದಲ್ಲಿ ಒಂದು ಆಲದ ಮರ ರೀತಿಯಲ್ಲಿ ಬೆಳೆದಿದೆ. ರೈತರಿಗೆ, ಕಾರ್ಮಿಕರಿಗೆ, ಬಡವರು ಸೇರಿದಂತೆ ಎಲ್ಲ ವರ್ಗಕ್ಕೂ ಶಕ್ತಿಯನ್ನು ತುಂಬುವ ಕಾರ್ಯ ಮಾಡಿದೆ. ಜನರ ಆಶೋತ್ತರಗಳಿಗೆ ಸ್ಪಂದಿಸುವ ಮೂಲಕ ಜನರ ಪ್ರೀತಿ, ವಿಶ್ವಾಸವನ್ನು ಗಳಿಸಿದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಸಮರ್ಥ ನಾಯಕರಾಗಿದ್ದಾರೆ. ಇತ್ತೀಚಿನ ಪಂಚರಾಜ್ಯಗಳ ಚುನಾವಣೆ ಯಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ದೇಶದಲ್ಲಿ ಕಾಂಗ್ರೆಸ್ ಯಾರಿಗೂ ಬೇಡವಾದ ಪಕ್ಷವಾಗಿದೆ. ಕಾಂಗ್ರೆಸ್ ಪಕ್ಷವನ್ನು ಜನ ಮರೆಯುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರು ಇಂತಹ ಹೇಳಿಕೆಗಳನ್ನು ನೀಡುತ್ತಿ
ದ್ದಾರೆ ಎಂದರು.
ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ಸರಕಾರ ಸಮರ್ಥವಾಗಿ ಕೆಲಸ ಮಾಡುತ್ತಿದೆ. ಒಳ್ಳೆಯ ಬಜೆಟ್ ನೀಡಿದೆ. 2023ರ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ಸಂಘರ್ಷ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಎಲ್ಲ ಧರ್ಮೀಯರನ್ನು ಗೌರವದಿಂದ ಕಾಣಬೇಕು ಎಂದು ಈಗಾಗಲೇ ಮುಖ್ಯಮಂತ್ರಿಯವರು ಹೇಳಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು