ಎಸ್ಸೆಸ್ಸೆಲ್ಸಿ ಗೈರು: ನಕಲಿ ಗುಮಾನಿ ;25 ಸಾವಿರ ವಿದ್ಯಾರ್ಥಿಗಳೇ ನಕಲಿ ಸೃಷ್ಟಿ?


Team Udayavani, Mar 30, 2019, 6:00 AM IST

pu

ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಯ ಎಲ್ಲ ವಿಷಯಗಳಲ್ಲೂ ರಾಜ್ಯಾದ್ಯಂತ ಕನಿಷ್ಠ 25 ಸಾವಿರ ವಿದ್ಯಾರ್ಥಿಗಳು ಗೈರುಹಾಜರಾಗು ತ್ತಿ ರುವುದು ಬೆಳಕಿಗೆ ಬಂದಿದ್ದು, ಇದರ ಗುಟ್ಟು ಏನು ಎಂಬುದು ಸರಕಾರ ಮತ್ತು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಜಿಜ್ಞಾಸೆಗೆ ಕಾರಣವಾಗಿದೆ.

ಕೆಲವು ವರ್ಷಗಳಿಂದ ನಡೆಯುತ್ತಿರುವ ಇದು ಈ ವರ್ಷವೂ ಪುನರಾ ವರ್ತನೆಯಾಗಿದೆ. ಈವರೆಗೆ ನಡೆ ದಿರುವ ಎಲ್ಲ ಪರೀಕ್ಷೆಗಳಲ್ಲೂ ಸರಿ ಸುಮಾರು 25 ಸಾವಿರ ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಎ.21ರಂದು ನಡೆದ ಪ್ರಥಮ ಭಾಷಾ ಪರೀಕ್ಷೆಗೆ 24,899 ವಿದ್ಯಾರ್ಥಿ ಗಳು ಗೈರಾಗಿದ್ದರು. ಅನಂತರದ ಗಣಿತ, ದ್ವಿತೀಯ ಭಾಷೆ, ಶುಕ್ರವಾರದ ಸಮಾಜ ವಿಜ್ಞಾನ ಪರೀಕ್ಷೆಗೂ 25 ಸಾವಿರದ ಆಸು ಪಾಸು ಸಂಖ್ಯೆಯ ವಿದ್ಯಾರ್ಥಿ ಗಳು ಗೈರಾಗಿದ್ದಾರೆ. ನಿಜಕ್ಕೂ ಇಷ್ಟು ವಿದ್ಯಾರ್ಥಿಗಳು ಗೈರಾಗುತ್ತಿದ್ದಾರೋ ಅಥವಾ ಶಾಲಾ ಮುಖ್ಯಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿ ಕಾರಿಗಳು, ಜಿಲ್ಲಾ ಉಪ ನಿರ್ದೇಶಕರು ತಮ್ಮ ಅಸ್ತಿತ್ವ ಉಳಿಸಿ ಕೊಳ್ಳುವುದಕ್ಕಾಗಿ ನಕಲಿ ವಿದ್ಯಾರ್ಥಿಗಳನ್ನು ಸೃಷ್ಟಿಸುತ್ತಿದ್ದಾರೋ ಎಂಬ ಸಂಶಯ ಮಂಡಳಿ ಯಲ್ಲಿ ದಟ್ಟವಾಗಿದೆ.

ಕರಾವಳಿಯಲ್ಲೇನು?
ದಕ್ಷಿಣಕನ್ನಡ ಮತ್ತು ಉಡುಪಿಯಲ್ಲಿ ಗೈರುಹಾಜರಾತಿ ಆಗಿದ್ದರೂ ಪ್ರಮಾಣ ಕಡಿಮೆ ಇದೆ. ಇದುವರೆಗಿನ ನಾಲ್ಕು ಪರೀಕ್ಷೆಗಳಲ್ಲಿ ಅನುಕ್ರಮವಾಗಿ 623, 713, 563 ಮತ್ತು 570ಯಷ್ಟೇ ಮಂದಿ ಗೈರಾಗಿದ್ದಾರೆ. ಒಟ್ಟು ಪರೀಕ್ಷೆ ಬರೆದವರು 1,72,023 ವಿದ್ಯಾರ್ಥಿಗಳಾದರೆ ಹಾಜರಾಗದವರು 2,469 ಮಂದಿ.

ಶಿಕ್ಷಕ, ಅಧಿಕಾರಿಗಳ ಮೇಲೆ ಗುಮಾನಿ?
ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಸಂಬಂಧಿಸಿ ಶಾಲೆಯ 10ನೇ ತರಗತಿಯಲ್ಲಿ
ತರಗತಿಯಲ್ಲಿ ಕನಿಷ್ಠ 25 ವಿದ್ಯಾರ್ಥಿಗಳು ಇರಬೇಕು ಎಂದು ಕರ್ನಾಟಕ ಶಿಕ್ಷಣ
ಕಾಯ್ದೆ 1983ರ ಸ್ಪಷ್ಟವಾಗಿ ಹೇಳುತ್ತದೆ. ಅನುದಾನಿತ ಶಾಲೆಗಳಲ್ಲಿ ಇರುವ
ಕೆಲವು ಶಿಕ್ಷಕರಿಗೆ ಸರ್ಕಾರದಿಂದಲೇ ವೇತನ ನೀಡಲಾಗುತ್ತದೆ. ಹೀಗಾಗಿ ಮಕ್ಕಳ
ಸಂಖ್ಯೆ ಕಡಿಮೆ ಇದ್ದರೆ ಅಂತಹ ಶಾಲೆಗಳ ಮಾನ್ಯತೆ ರದ್ದತಿಗೆ ನೋಟಿಸ್‌ ನೀಡಬೇಕು. ಜತೆಗೆ ಅಲ್ಲಿರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲೂ ಪರೀಕ್ಷೆ ಬರೆಯಲು ತೊಂದರೆ ಆಗದಂತೆ ಬೇರೇ ಶಾಲೆಗಳ ಮೂಲಕ ನೋಂದಣಿ ಮಾಡಿಸಲು ಕ್ರಮ ವಹಿಸಬೇಕಾಗುತ್ತದೆ. ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ತೋರಿಸಿದರೆ, ಉದ್ಯೋಗಕ್ಕೆ ಕುತ್ತು ಬರುವ ಸಾಧ್ಯತೆ ಇದೆ ಎಂಬ ಉದ್ದೇಶದಿಂದ ಶಾಲಾ ಶಿಕ್ಷಕರು, ಮುಖ್ಯಶಿಕ್ಷಕರು, ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿಕೊಂಡು ನಕಲಿ ವಿದ್ಯಾರ್ಥಿಗಳನ್ನು ಸೃಷ್ಟಿಸುವ ಸಾಧ್ಯತೆಯೂ ಇದೆ ಎಂದು ಮಂಡಳಿಯ ಮೂಲಗಳೇ ತಿಳಿಸಿವೆ.

ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.