ಎಸೆಸೆಲ್ಸಿ, ಪಿಯುಸಿ ಪರೀಕ್ಷೆ: ದಸರಾ ರಜೆ ಬಳಿಕವೇ ನಿರ್ಧಾರ


Team Udayavani, Oct 15, 2020, 6:15 AM IST

ಎಸೆಸೆಲ್ಸಿ, ಪಿಯುಸಿ ಪರೀಕ್ಷೆ: ದಸರಾ ರಜೆ ಬಳಿಕವೇ ನಿರ್ಧಾರ

ಸಾಂದರ್ಭಿಕ ಚಿತ್ರ

ಬೆಂಗಳೂರು: ಶಾಲಾ- ಕಾಲೇಜುಗಳು ಇನ್ನೂ ಆರಂಭವಾಗದ ಹಿನ್ನೆಲೆಯಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಕುರಿತಂತೆ ದಸರಾ ರಜೆಯ ಬಳಿಕವೇ ನಿರ್ಧಾರವಾಗಬೇಕಿದೆ.

ಈಗಾಗಲೇ 6 ತಿಂಗಳಾಗುತ್ತಿದ್ದು, ಉಳಿದ ನಾಲ್ಕು ತಿಂಗಳಲ್ಲಿ ಪಠ್ಯಕ್ರಮ ಪೂರ್ಣಗೊಳಿಸಬೇಕಿದೆ. ಹಾಗಾಗಿ ಪರೀಕ್ಷೆ ನಡೆಸುವುದು ತುಸು ಕಷ್ಟ. ಇದನ್ನು ಪುಷ್ಟೀಕರಿಸುವಂತೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯೂ ಎಸೆಸೆಲ್ಸಿ ಪರೀಕ್ಷೆ ಕುರಿತು ದಸರಾ ರಜೆಯ ಬಳಿಕವೇ ತೀರ್ಮಾನ ಕೈಗೊಳ್ಳಲು ನಿರ್ಧರಿಸಿದೆ.

ಪ್ರಸ್ತುತ ಅಕ್ಟೋಬರ್‌ 30ರ ವರೆಗೆ ರಾಜ್ಯ ಸರಕಾರ ಶಾಲೆಗಳಿಗೆ ದಸರಾ ರಜೆ ಇದೆ. ಪಿಯುಸಿ ವಿದ್ಯಾರ್ಥಿಗಳಿಗೆ ಯೂ-ಟ್ಯೂಬ್‌ ಮೂಲಕ ಪೂರ್ವ ಮುದ್ರಿತ ತರಗತಿಗಳನ್ನು ನಡೆಸಲಾಗುತ್ತಿದೆ. ಆದರೆ, ಗ್ರಾಮೀಣ ವಿದ್ಯಾರ್ಥಿಗಳಿಗೆ ಇದು ತಲುಪುತ್ತಿಲ್ಲ.

ಪಠ್ಯಕಡಿತ ನಿರ್ಧಾರವೂ ಅತಂತ್ರ
ರಾಜ್ಯ ಸರಕಾರವು ಶೈಕ್ಷಣಿಕ ದಿನಗಳ ಆಧಾರದಲ್ಲಿ ಶೇ.30ರಷ್ಟು ಪಠ್ಯ ಕಡಿತ ಮಾಡಿತ್ತು. ವಿವಾದಕ್ಕೆ ಒಳಗಾದ ಹಿನ್ನೆಲೆ ಯಲ್ಲಿ ಅದನ್ನು ವಾಪಸ್‌ ಪಡೆಯಲಾಗಿತ್ತು. ಈಗ ಶೇ.50ರಷ್ಟು ಪಠ್ಯ ಮಾತ್ರ ಇರಬೇಕು ಎಂಬ ಆಗ್ರಹ ಶಿಕ್ಷಕರಿಂದ ಕೇಳಿ ಬರುತ್ತಿದೆ.

ವಿದ್ಯಾಗಮವೂ ಸ್ಥಗಿತ
ಈಗ ವಿದ್ಯಾಗಮವೂ ಈಗ ತಾತ್ಕಾಲಿಕ ವಾಗಿ ಸ್ಥಗಿತಗೊಂಡಿದೆ. ಹೀಗಾಗಿ ಎಸೆಸೆಲ್ಸಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವುದು ಶಿಕ್ಷಕರು ಸವಾಲಾಗಿದೆ ಎಂದು ಪ್ರೌಢಶಾಲಾ ಮುಖ್ಯ ಶಿಕ್ಷಕರೊಬ್ಬರು ಹೇಳಿದ್ದಾರೆ. ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಲ್ಯಾಬ್‌ ಇಲ್ಲದೇ ಕಲಿಕೆ ಪರಿಪೂರ್ಣವಾಗು ವುದಿಲ್ಲ. ಇದು ತೀವ್ರ ಸಮಸ್ಯೆ ತಂದೊಡ್ಡಿದೆ. ಕೆಲವು ಖಾಸಗಿ ಪಿಯು ಕಾಲೇಜಿನಲ್ಲಿ ಲ್ಯಾಬ್‌ಗಳು ತೆರೆದಿವೆ. ಆದರೆ ಸರಕಾರಿ ಕಾಲೇಜಿನ ಲ್ಯಾಬ್‌ಗ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿನಿಯೋರ್ವರು ಹೇಳಿದ್ದಾರೆ.

ಎಸೆಸೆಲ್ಸಿ ಪರೀಕ್ಷೆ ಸಿದ್ಧತೆಗೆ ಸಂಬಂಧಿಸಿ ಯಾವುದೇ ಚರ್ಚೆ ಆಗಿಲ್ಲ. ದಸರಾ ರಜೆ ಮುಗಿದ ಬಳಿಕ ಈ ಬಗ್ಗೆ ಚರ್ಚಿಸಿ, ರೂಪುರೇಷೆಗಳನ್ನು ಸಿದ್ಧಪಡಿಸಿ ಅನುಷ್ಠಾನ ಮಾಡಲಿದ್ದೇವೆ. ಪಠ್ಯಕಡಿತ ಅನಿವಾರ್ಯವಾಗಿದೆ. ತರಗತಿ ಆರಂಭದ ಬಳಿಕ ಸಿಗಬಹುದಾದ ಕಲಿಕಾ ದಿನಗಳ ಆಧಾರದಲ್ಲಿ ಕಾರ್ಯ ರೂಪಿಸುತ್ತೇವೆ.
– ವಿ.ಸುಮಂಗಳಾ, ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ, ನಿರ್ದೇಶಕಿ

ವಾಟ್ಸಾಪ್‌ ಮತ್ತು ಆನ್‌ಲೈನ್‌ನಲ್ಲಿ ಬೋಧನೆ ಮಾಡುತ್ತಿದ್ದೇವೆ. ವಿದ್ಯಾಗಮಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೆವು. ಆದರೆ, ಹಿಂದಿನ ವರ್ಷಗಳಲ್ಲಿ ನೀಡುತ್ತಿದ್ದಷ್ಟು ಪರಿ ಣಾಮಕಾರಿ ಬೋಧನೆ ಈ ಬಾರಿ ಆಗಿಲ್ಲ.
– ಮಂಜುನಾಥ್‌, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ

ಪಿಯುಸಿ ತರಗತಿಗಳನ್ನು ನ.1ರಿಂದ ಆರಂಭಿಸಿದರೂ ಬೋಧನೆಗೆ ಸಿದ್ಧರಿದ್ದೇವೆ. ಆದರೆ, ನಮ್ಮನ್ನು ಕೊರೊನಾ ವಾರಿಯರ್ ಎಂದು ಪರಿಗಣಿಸಬೇಕು. ಕೊರೊನಾ ದಿಂದ ಏನೇ ಅವಘಡ ಸಂಭವಿಸಿದರೂ ಸರಕಾರದಿಂದ ಪರಿಹಾರ ಸಿಗು ವಂತಾಗಬೇಕು. ಇಲ್ಲವಾದರೆ, ಆನ್‌ಲೈನ್‌ ಮೂಲಕವೇ ಬೋಧನೆ ಮುಂದು ವರಿಯುತ್ತದೆ.
– ಎ.ಎಚ್‌.ನಿಂಗೇಗೌಡ, ಅಧ್ಯಕ್ಷ, ಪಿಯು ಉಪನ್ಯಾಸಕರ ಸಂಘ

 ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.