ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ “ಕಲಿಕಾ ಆಸರೆ”

ಕಲಿಕಾ ಹಿಂದುಳಿಯುವಿಕೆ ಹೋಗಲಾಡಿಸುವ ಪ್ರಯತ್ನ:| ವಿನೂತನ ಪ್ರಯೋಗಕ್ಕೆ ಮುಂದಾದ ಕಲಬುರಗಿ ವಿಭಾಗ

Team Udayavani, Feb 22, 2023, 12:13 PM IST

kalikaasare

ಕೊಪ್ಪಳ: ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಲ್ಲಿ ಕಲಿಕಾ ಹಿಂದುಳಿಯುವಿಕೆ ಹೋಗಲಾಡಿಸಲು ಶಿಕ್ಷಣ ಇಲಾಖೆ 10ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಪ್ರಸಕ್ತ ವರ್ಷದಲ್ಲಿ ಕಲಿಕಾ ಆಸರೆ ಎನ್ನುವಂತಹ ಹೊತ್ತಿಗೆಯನ್ನು ಹೊರ ತಂದಿದ್ದು, ಮಕ್ಕಳ ಕಲಿಕೆಗೆ ಉತ್ತೇಜನ ನೀಡುವ ಜತೆಗೆ ಕಲಿಕೆ ಸುಧಾರಣೆಗೆ ಮುಂದಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ 6 ಸಾವಿರ ಪುಸ್ತಕಗಳನ್ನು ಈಗಾಗಲೇ ಮಕ್ಕಳಿಗೆ ಪೂರೈಸಿದೆ. ಹೌದು, ಮುಂದುವರಿದ ಜಿಲ್ಲೆಗಳಿಗೆ ಹೋಲಿಸಿದರೆ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಶಿಕ್ಷಣದ ಮಟ್ಟ ಸ್ವಲ್ಪ ಕಡಿಮೆ ಇದೆ. ವಿದ್ಯಾರ್ಥಿಗಳಲ್ಲಿನ ಕಲಿಕಾ ದೋಷ, ಶಿಕ್ಷಕರಲ್ಲಿನ ಬೋಧನಾ ವಿಧಾನ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಶಿಕ್ಷಕರ ಕೊರತೆ ಸೇರಿದಂತೆ ನಾನಾ ಕಾರಣಗಳೂ ಇವೆ.

ಇದರಿಂದಾಗಿ 10ನೇ ತರಗತಿ ವಿದ್ಯಾರ್ಥಿಗಳು ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಂದಂಕಿ ಸ್ಥಾನದೊಳಗೆ ಬರಲು ಸಾಧ್ಯವೇ ಆಗುತ್ತಿಲ್ಲ. ಹಾಗಾಗಿ ಇದನ್ನು ಹೋಗಲಾಡಿಸಿ ಶಿಕ್ಷಣದಲ್ಲಿ ಮುಂದುವರಿದ ಜಿಲ್ಲೆಗಳೊಂದಿಗೆ ಕಲ್ಯಾಣ ಭಾಗದ ಮಕ್ಕಳಿಗೂ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಕಲಬುರಗಿ ಶಿಕ್ಷಣ ಇಲಾಖೆ ಈ ಬಾರಿ 10ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆ ತರಲು ಕಲಿಕಾ ಆಸರೆ ಎನ್ನುವಂತಹ ವಿನೂತನ ಪುಸ್ತಕ ಹೊರ ತಂದಿದೆ.

ಈ ಪುಸ್ತಕ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಮಾತ್ರ ಆದ್ಯತೆ ನೀಡುವಂತಹದ್ದಾಗಿದೆ. ಪ್ರತಿ ವರ್ಷವೂ ಶಿಕ್ಷಣ ಇಲಾಖೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಲ್ಲಿ ಮೂರು ರೀತಿಯ ಪಟ್ಟಿ ಮಾಡಿ ಉತ್ತಮ, ಮಧ್ಯಮ ಹಾಗೂ ಸಾಧಾರಣ ಎಂಬ ವಿದ್ಯಾರ್ಥಿಗಳನ್ನು ಆಂತರಿಕವಾಗಿ ಗುರುತಿಸಿ ಇವುಗಳಲ್ಲಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಮೇಲೆ ಹೆಚ್ಚು ಒತ್ತು ನೀಡಿ ಅವರಿಗೆ ಪರಿಹಾರ ಬೋಧನೆ ಸೇರಿದಂತೆ ಬೇರೆ ಬೇರೆ ಕಾರ್ಯಕ್ರಮ ಹಮ್ಮಿಕೊಂಡು ಅವರಲ್ಲಿ ಸುಧಾರಣೆ ತರುವುದು, ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಿ ಉತ್ತಮ ಅಂಕ ಗಳಿಸುವಂತಹ ಪ್ರಯೋಗಗಳನ್ನು ನಡೆಸಲಾಗುತ್ತಿದೆ.ಆ ನಿಟ್ಟಿನಲ್ಲಿ ಈ ಬಾರಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗಾಗಿಯೇ ಕಲಿಕಾ ಆಸರೆ ಪುಸ್ತಕ ಸಿದ್ಧಪಡಿಸಿ ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳಿಗೆ ಪೂರೈಸಿದೆ.

ಕಲಿಕಾ ಆಸರೆ ಪುಸ್ತಕದಲ್ಲೇನಿದೆ?: ಕಲಿಕಾ ಆಸರೆ ಪುಸ್ತಕ ಆರು ವಿಷಯಗಳನ್ನು ಒಳಗೊಂಡಿದೆ. ಪ್ರತಿ ಪುಸ್ತಕದಲ್ಲೂ ಒಂದೊಂದು ಅಧ್ಯಾಯದ ವಿಷಯದ ಪ್ರಶ್ನೆಗಳು ಇರುತ್ತವೆ. ಆ ಪ್ರಶ್ನೆಗಳಿಗೆ ಉತ್ತರ ಬರೆಯಲು ಕೆಳಗೆ ಸ್ಥಳವಕಾಶ ಮಾಡಲಾಗಿದೆ. ವಿದ್ಯಾರ್ಥಿ ಮೇಲಿನ ಪ್ರಶ್ನೆ ಗಮನಿಸಿ ಕೆಳಗೆ ಉತ್ತರ ಬರೆಯಬೇಕು. ಜತೆಗೆ ಗಣಿತ ವಿಷಯ ಕುರಿತಂತೆಯೂ ಕೆಳಗೆ ಲೆಕ್ಕಗಳನ್ನು ಬಿಡಿಸಲು ಅವಕಾಶ ಕಲ್ಪಿಸಿದೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ನಿರ್ದಿಷ್ಟ ಪ್ರಶ್ನೆಗಳಿಗೆ ನಿಖರವಾದ, ಸೀಮಿತ ಸ್ಥಳದಲ್ಲಿ ಉತ್ತರ ಬರೆಯಲು ಅವಕಾಶವಿದೆ. ಇದರಿಂದ ವಿದ್ಯಾರ್ಥಿಗಳಲ್ಲೂ ಸಹಿತ ಯಾವ ಪ್ರಶ್ನೆಗಳಿಗೆ ಹೇಗೆ ಉತ್ತರಿಸಬೇಕು ಎನ್ನುವ ವಿಧಾನವೂ ಮಕ್ಕಳಲ್ಲಿ ಗೊತ್ತಾಗಲಿದೆ.

10ನೇ ತರಗತಿ ವಿದ್ಯಾರ್ಥಿಗಳ ಕಲಿಕೆಗಾಗಿ ಕಲಬುರಗಿ ವಿಭಾಗದಿಂದ ಪೂರೈಸಿದ ಕಲಿಕಾ ಆಸರೆ ಎಂಬ ಪುಸ್ತಕವನ್ನು ಈಗಾಗಲೇ ಪೂರೈಸಿದ್ದೇವೆ. ಆ ಪುಸ್ತಕದಲ್ಲಿ ವಿದ್ಯಾರ್ಥಿಗಳು ಅಭ್ಯಾಸದ ಅಧ್ಯಾಯದ ಪ್ರಶ್ನೆಗಳಿಗೆ ಉತ್ತರ ಬರೆಯಲು ಅವಕಾಶವಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಸುಧಾರಣೆ ತರುವುದು ಸೇರಿದಂತೆ ಪರೀಕ್ಷೆಗೆ ಆತನನ್ನು ಸಿದ್ಧಗೊಳಿಸುವ ಯೋಜನೆಯಾಗಿದೆ. ಕಲಿಕಾ ಆಸರೆ ಪುಸ್ತಕ ಜತೆಗೆ ಚಿಗುರು ಎಂಬ ಪುಸ್ತಕವನ್ನು ನಾವು ಮಕ್ಕಳಿಗೆ ಪೂರೈಸಿದ್ದೇವೆ.
ಮುತ್ತುರಡ್ಡಿ ರಡ್ಡೇರ್‌, ಡಿಡಿಪಿಐ, ಕೊಪ್ಪಳ.

ಚಿಗುರು ಪುಸ್ತಕವೂ ವಿತರಣೆ: ಕಲಿಕಾ ಆಸರೆ ಪುಸ್ತಕದ ಜತೆಗೆ ಕೊಪ್ಪಳ ಜಿಲ್ಲೆಯಲ್ಲಿ ಹಿಂದೆ ಜಿಪಂ ಸಿಇಒ ಆಗಿದ್ದ ಫೌಜಿಯಾ ತರನ್ನುಮ್‌ ಅವರು ಚಿಗುರು ಎಂಬ ಪುಸ್ತಕ ಸಿದ್ಧಪಡಿಸಿ ಮಕ್ಕಳಿಗೆ ಪೂರೈಸಿದ್ದು, 12 ಸಾವಿರ ಮಕ್ಕಳಿಗೆ ಆ ಪುಸ್ತಕವನ್ನು ವಿತರಿಸಲಾಗಿದೆ. ಚಿಗುರು ಪುಸ್ತಕವೂ ಇದೇ ಮಾದರಿಯನ್ನೊಳಗೊಂಡಿದೆ. ಮಕ್ಕಳ ಕಲಿಕೆಗೆ ಪ್ರೇರೇಪಿಸಲು ಇದು ತುಂಬಾ ಸಹಕಾರಿಯಾಗಿದೆ. ಒಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಕಲಿಕಾಮಟ್ಟ ಸುಧಾರಿಸಲು, ಮಕ್ಕಳಲ್ಲಿ ಪ್ರೇರೇಪಣೆ ಮೂಡಿಸಲು ಕಲಬುರಗಿ ವಿಭಾಗ ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಫಲಿತಾಂಶ ಸುಧಾರಿಸಲಿ ಎಂದೆನ್ನುತ್ತಿದೆ ಪ್ರಜ್ಞಾವಂತ ವಲಯ.

~ದತ್ತು ಕಮ್ಮಾರ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.