ಒಮ್ಮೆ ಗೆದ್ದ 156 ಕ್ಷೇತ್ರಗಳೇ ಬಿಜೆಪಿ ಟಾರ್ಗೆಟ್‌.! – ಗುಜರಾತ್‌ ಚುನಾವಣೆ ಬೆನ್ನಲ್ಲೇ ಪಕ್ಷದಿಂದ ವಾರ್‌ ರೂಂ ರಚನೆ


Team Udayavani, Nov 22, 2022, 7:05 AM IST

tdy-18

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಿ ಕೆಲಸ ಆರಂಭಿಸಲು ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದು, ಡಿಸೆಂಬರ್‌ನಲ್ಲಿ ಗುಜರಾತ್‌ ಚುನಾವಣೆ ಫ‌ಲಿತಾಂಶದ ಅನಂತರ “ವಾರ್‌ ರೂಂ’ ಪ್ರಾರಂಭವಾಗಲಿದೆ.

ರಾಜ್ಯದ 224 ಕ್ಷೇತ್ರಗಳ ಪೈಕಿ 156 ಕ್ಷೇತ್ರಗಳಲ್ಲಿ ಬಿಜೆಪಿ ಒಂದಲ್ಲ ಒಂದು ಬಾರಿ ಗೆಲುವು ಸಾಧಿಸಿದ್ದು, ಆ ಕ್ಷೇತ್ರಗಳನ್ನೇ ಪ್ರಮುಖ ಗುರಿ ಆಗಿ ಪರಿಗಣಿಸಲಾಗಿದೆ. ಜತೆಗೆ ಇದುವರೆಗೆ ಗೆಲುವು ಸಾಧಿಸದ ಕ್ಷೇತ್ರಗಳಲ್ಲಿ ಇತರ ಪಕ್ಷಗಳ ಪ್ರಭಾವಿಗಳನ್ನು ಸೆಳೆಯುವ ಕಾರ್ಯತಂತ್ರವನ್ನೂ ರೂಪಿಸಲಾಗಿದೆ. ಈಗಾಗಲೇ ಇಂಥ 20 ಕ್ಷೇತ್ರಗಳನ್ನು ಗುರುತಿಸಿ, ಅಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಪ್ರಭಾವಿಗಳನ್ನು ಸೇರ್ಪಡೆ ಮಾಡಿಕೊಳ್ಳುವ ಸಂಬಂಧ ಎರಡು ಸುತ್ತಿನ ಮಾತುಕತೆ ನಡೆಸಿದ್ದು, ಜನವರಿಯಲ್ಲಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ಹೊಸದಾಗಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವವರ ಬಗ್ಗೆ ಜಿಲ್ಲಾ ಮತ್ತು ತಾಲೂಕು ಘಟಕಗಳಿಗೂ ಮಾಹಿತಿ ನೀಡಿದ್ದು, ಸ್ಥಳೀಯವಾಗಿ ಎದುರಾಗಬಹುದಾದ ಸಮಸ್ಯೆ, ಅದಕ್ಕೆ ಪರಿಹಾರ ಏನು ಎಂಬುದರ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಮೂರನೇ ಸಮೀಕ್ಷೆ:

ಮತ್ತೂಂದೆಡೆ ವಿಧಾನಸಭೆ ಚುನಾವಣೆಗೆ ಮತದಾರರ ನಾಡಿಮಿಡಿತ ಹಾಗೂ ಹಾಲಿ ಶಾಸಕರು, ಮಾಜಿ ಶಾಸಕರ ವರ್ಚಸ್ಸು ತಿಳಿಯುವ ನಿಟ್ಟಿನಲ್ಲಿ ಬಿಜೆಪಿ ಮೂರನೇ ಬಾರಿಗೆ ಸಮೀಕ್ಷೆ ಆರಂಭಿಸಿದೆ.

ಕಳೆದ ಬಾರಿ ನಡೆಸಿದ್ದ ಸಮೀಕ್ಷೆಯಲ್ಲಿ ಗೆಲ್ಲಲು ಇರುವ ಸಮಸ್ಯೆಗಳ ಬಗ್ಗೆ ಪಟ್ಟಿ ಮಾಡಿ ಸರಿಪಡಿಸಿಕೊಳ್ಳುವಂತೆ ಹಾಲಿ ಮತ್ತು ಮಾಜಿ ಶಾಸಕರಿಗೆ ಸೂಚನೆ ನೀಡಲಾಗಿತ್ತು. ಈ ಬಾರಿ ಸಮೀಕ್ಷೆಯಲ್ಲಿ ಹಿಂದಿನ ಮಾರ್ಗದರ್ಶನ ಪಾಲಿಸದ ಹಾಗೂ ಇನ್ನೂ ಸುಧಾರಿಸದ ಕಡೆ ನೇರವಾಗಿಯೇ “ಟಿಕೆಟ್‌ ನೀಡಲಾಗದು’ ಎಂಬ ಸಂದೇಶ ರವಾನೆ ಮಾಡಿ ಹೊಸ ಮುಖಗಳಿಗೆ ಅವಕಾಶ ಕೊಡುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

ಸರಣಿ ಸಮಾವೇಶಗಳು:

ಜನಸ್ಪಂದನ ಯಾತ್ರೆಯ ಜತೆಗೆ ಸಮುದಾಯಗಳ ಸಮಾವೇಶಕ್ಕೂ ಚಾಲನೆ ನೀಡುವ ನಿರ್ಧಾರದಂತೆ ಈಗಾಗಲೇ ಎಸ್‌ಟಿ ಮೋರ್ಚಾ ಸಮಾವೇಶ ಮುಗಿಸಿರುವ ಬಿಜೆಪಿ, ಶಿವಮೊಗ್ಗದಲ್ಲಿ ಯುವ ಮೋರ್ಚಾ, ರಾಯಚೂರಿನಲ್ಲಿ ಎಸ್‌ಸಿ ಮೋರ್ಚಾ, ಹುಬ್ಬಳ್ಳಿಯಲ್ಲಿ ರೈತ ಮೋರ್ಚಾ, ಬೆಂಗಳೂರಿನಲ್ಲಿ ಮಹಿಳಾ ಮೋರ್ಚಾ ಸಮಾವೇಶ ನಡೆಸಲಿದೆ. ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗುವ ಸಾಧ್ಯತೆಯಿದೆ.

ಗುಜರಾತ್‌ ಫ‌ಲಿತಾಂಶದ ನಂತರ ರಾಷ್ಟ್ರ ನಾಯಕರು ಕರ್ನಾಟಕದತ್ತ ಚಿತ್ತ ಹರಿಸಲಿದ್ದು, ಒಂದಷ್ಟು ಬದಲಾವಣೆಗಳೊಂದಿಗೆ ಚುನಾವಣಾ ಹೋರಾಟ ಪ್ರಾರಂಭವಾಗಲಿದೆ. ಈಗಾಗಲೇ ಕೇಂದ್ರ ನಾಯಕರ ಸೂಚನೆಯಂತೆ ನಾವು ನಮ್ಮ ಕೆಲಸ ಆರಂಭಿಸಿದ್ದೇವೆ ಎಂದು ಸಚಿವರೊಬ್ಬರು ತಿಳಿಸಿದ್ದಾರೆ.

ಎಪ್ಪತ್ತು ವರ್ಷ ದಾಟಿದವರಿಗೆ ಟಿಕೆಟ್‌ ನಿರಾಕರಣೆ, ಸಾಧ್ಯವಿರುವ ಕಡೆ ಕುಟುಂಬ ರಾಜಕಾರಣಕ್ಕೆ ಅವಕಾಶ ನೀಡಿರುವುದು, ಹಿಂದುತ್ವ ಪ್ರತಿಪಾದನೆ ಹಾಗೂ ವೈಚಾರಿಕ ಬದ್ಧತೆ ಹೊಂದಿರುವವರಿಗೆ ಅವಕಾಶ ನೀಡುವ ಬಗ್ಗೆ ನಿರಂತರವಾಗಿ ಪಕ್ಷದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಪ್ರಯೋಗವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಸಿ.ಟಿ.ರವಿ, ವಿಜಯೇಂದ್ರ ಒಳಗೊಂಡ ಉಸ್ತುವಾರಿ ಸಮಿತಿ? ;

ಗುಜರಾತ್‌ ವಿಧಾನಸಭೆ ಚುನಾವಣೆ ಫ‌ಲಿತಾಂಶದ ನಂತರ ಕೇಂದ್ರ ಸಚಿವರ ತಂಡವನ್ನು ಒಳಗೊಂಡ ವಾರ್‌ ರೂಂ’ ಪ್ರಾರಂಭಿಸಲು ನಿರ್ಧರಿಸಲಾಗಿದೆ. ಯಾವ್ಯಾವ ಸಚಿವರಿಗೆ ಯಾವ್ಯಾವ ಹೊಣೆಗಾರಿಕೆ ಎಂಬುದು ಈಗಾಗಲೇ ತೀರ್ಮಾನವಾಗಿದೆ. ಇದರ ಜತೆಗೆ ಸಿ.ಟಿ.ರವಿ, ವಿಜಯೇಂದ್ರ ಸೇರಿದಂತೆ ಪ್ರಮುಖ ಚುನಾವಣಾ ಉಸ್ತುವಾರಿ ಸಮಿತಿ ಸಹ ರಚನೆಯಾಗಲಿದೆ. ವಾರ್‌ ರೂಂ ಹಾಗೂ ಉಸ್ತುವಾರಿ ಸಮಿತಿಯ ತಂಡ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಹೇಳಲಾಗಿದೆ.

-ಎಸ್‌. ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

The reservoirs of South India including Karnataka are empty

Water Crisis; ಕರ್ನಾಟಕ ಸೇರಿ ದಕ್ಷಿಣ ಭಾರತದ ಜಲಾಶಯಗಳು ಖಾಲಿ.. ಖಾಲಿ!

yuva movie review

Yuva Review: ಮಾಸ್‌ ಅಡ್ಡದಲ್ಲಿ ಯುವ ರೈಡ್‌

ಭಾರತ ಈ ದೇಶಗಳಿಂದ ಪಾಠ ಕಲಿಯಬೇಕಿಲ್ಲ…: ಜಗದೀಪ್ ಧನ್ಕರ್ ತಿರುಗೇಟು

Kejriwal Arrest Case; ಭಾರತ ಈ ದೇಶಗಳಿಂದ ಪಾಠ ಕಲಿಯಬೇಕಿಲ್ಲ…: ಜಗದೀಪ್ ಧನ್ಕರ್ ತಿರುಗೇಟು

Indian Navy rescues 23 Pakistani nationals attacked by pirates

Indian Navy; ಕಡಲ್ಗಳ್ಳರಿಂದ ದಾಳಿಗೊಳಗಾದ 23 ಪಾಕ್ ಪ್ರಜೆಗಳನ್ನು ರಕ್ಷಿಸಿದ ನೌಕಾಪಡೆ

IPL 2024: ಹೀಗೆ ಆದರೆ ಆರ್ ಸಿಬಿ ಐಪಿಎಲ್ ಗೆಲ್ಲಲು ಸಾಧ್ಯವಿಲ್ಲ…: ಮೈಕಲ್ ವಾನ್

IPL 2024: ಹೀಗೆ ಆದರೆ ಆರ್ ಸಿಬಿ ಐಪಿಎಲ್ ಗೆಲ್ಲಲು ಸಾಧ್ಯವಿಲ್ಲ…: ಮೈಕಲ್ ವಾನ್

Actor daniel balaji passes away

Daniel Balaji; ಕಿರಾತಕ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದ ಡ್ಯಾನಿಯಲ್ ಬಾಲಾಜಿ ಇನ್ನಿಲ್ಲ

ಸೋತು ಸೋತು ಸಾಕಾಗಿದೆ, ನನ್ನ ಗೆಲ್ಲಿಸಿ ಮುಖ್ಯಮಂತ್ರಿಯ ಕೊರಗು ನಿವಾರಿಸಿ: ಎಂ.ಲಕ್ಷ್ಮಣ್‌

ಸೋತು ಸೋತು ಸಾಕಾಗಿದೆ, ನನ್ನ ಗೆಲ್ಲಿಸಿ ಮುಖ್ಯಮಂತ್ರಿಯ ಕೊರಗು ನಿವಾರಿಸಿ: ಎಂ.ಲಕ್ಷ್ಮಣ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೋತು ಸೋತು ಸಾಕಾಗಿದೆ, ನನ್ನ ಗೆಲ್ಲಿಸಿ ಮುಖ್ಯಮಂತ್ರಿಯ ಕೊರಗು ನಿವಾರಿಸಿ: ಎಂ.ಲಕ್ಷ್ಮಣ್‌

ಸೋತು ಸೋತು ಸಾಕಾಗಿದೆ, ನನ್ನ ಗೆಲ್ಲಿಸಿ ಮುಖ್ಯಮಂತ್ರಿಯ ಕೊರಗು ನಿವಾರಿಸಿ: ಎಂ.ಲಕ್ಷ್ಮಣ್‌

Mysore: ಮುಖ್ಯಮಂತ್ರಿ, ಕಾಂಗ್ರೆಸ್‌ ಬಗ್ಗೆ ಮಾತನಾಡಲಾರೆ: ಯದುವೀರ್‌

Mysore: ಮುಖ್ಯಮಂತ್ರಿ, ಕಾಂಗ್ರೆಸ್‌ ಬಗ್ಗೆ ಮಾತನಾಡಲಾರೆ: ಯದುವೀರ್‌

ಒಗ್ಗಟ್ಟಿನ ಸಮನ್ವಯ ಸಾರಿದ BJP-JDS… ರಾಜ್ಯ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದ HDD, BSY

ಒಗ್ಗಟ್ಟಿನ ಸಮನ್ವಯ ಸಾರಿದ BJP-JDS… ರಾಜ್ಯ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದ HDD, BSY

PUC Result: ಇಂದು ಪ್ರಥಮ ಪಿಯು ಫ‌ಲಿತಾಂಶ

PUC Result: ಇಂದು ಪ್ರಥಮ ಪಿಯು ಫ‌ಲಿತಾಂಶ

ರಾಮೇಶ್ವರಂ ಕೆಫೆ ಪ್ರಕರಣ: ಬೆಂಗಳೂರು ಬಳಿಯೇ ಬಾಂಬ್‌ ತಯಾರು!

ರಾಮೇಶ್ವರಂ ಕೆಫೆ ಪ್ರಕರಣ: ಬೆಂಗಳೂರು ಬಳಿಯೇ ಬಾಂಬ್‌ ತಯಾರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

How to Locate an Excellent Essay Service

4-checkpost

SulyaPadavu: ಚೆಕ್‌ಪೋಸ್ಟ್‌ ತಪ್ಪಿಸಿ ವಾಹನ ಸಂಚಾರ

3-kundapura

Kundapura: ಚುನಾವಣ ಅಕ್ರಮ ತಡೆಗೆ ಕಡಲಿನಲ್ಲೂ ಕಣ್ಗಾವಲು

The reservoirs of South India including Karnataka are empty

Water Crisis; ಕರ್ನಾಟಕ ಸೇರಿ ದಕ್ಷಿಣ ಭಾರತದ ಜಲಾಶಯಗಳು ಖಾಲಿ.. ಖಾಲಿ!

yuva movie review

Yuva Review: ಮಾಸ್‌ ಅಡ್ಡದಲ್ಲಿ ಯುವ ರೈಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.