ಸಂಪುಟಕ್ಕೆ ಪುತ್ರ: ಬಿಎಸ್ವೈ ಲಾಬಿ?
Team Udayavani, Sep 9, 2021, 7:30 AM IST
ಬೆಂಗಳೂರು: ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿ ಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಲಾಗಿದೆ.
ಈ ಕಾರಣದಿಂದಾಗಿ ಸಿಎಂ ಹೊಸದಿಲ್ಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಬುಧವಾರ ಭೇಟಿಯಾಗಿ ಚರ್ಚಿಸಿದ್ದಾರೆ. ಅದಕ್ಕಾಗಿ ಬೊಮ್ಮಾಯಿ 2 ಬಾರಿ ರಾಷ್ಟ್ರ ರಾಜಧಾನಿಗೆ ಪ್ರವಾಸ ಕೈಗೊಂಡಿದ್ದಾರೆ.
ಸಂಪುಟದಲ್ಲಿ ಖಾಲಿ ಇರುವ 4 ಸ್ಥಾನಗಳನ್ನು ಆದಷ್ಟು ಬೇಗ ಭರ್ತಿ ಮಾಡುವಂತೆ ಸಚಿವಾಕಾಂಕ್ಷಿಗಳು ಒತ್ತಡ ಹೇರುತ್ತಿದ್ದಾರೆ. ವಿಶೇಷವಾಗಿ ಯಡಿಯೂರಪ್ಪ ಪುತ್ರನ ಪರ ಲಾಬಿ ನಡೆಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ನಾಯಕರು ಸದ್ಯಕ್ಕೆ ಸಂಪುಟ ವಿಸ್ತರಣೆಗೆ ಅನುಮತಿ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಅದೇ ಕಾರಣಕ್ಕೆ ಕಳೆದ ಬಾರಿಯ ಸಿಎಂ ದಿಲ್ಲಿ ಭೇಟಿಯ ಸಂದರ್ಭದಲ್ಲಿಯೂ ನಡ್ಡಾ ಭೇಟಿಗೆ ಅವಕಾಶ ನೀಡಿರಲಿಲ್ಲ ಎನ್ನಲಾಗುತ್ತಿದೆ. ಗೃಹ ಸಚಿವ ಅಮಿತ್ ಶಾ ಜತೆಗೆ ವಿಜಯೇಂದ್ರ ಸೇರ್ಪಡೆ ಬಗ್ಗೆ ಬೊಮ್ಮಾಯಿ ಪ್ರಸ್ತಾವಿಸಿದಾಗ, ನಡ್ಡಾ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವಂತೆ ಸೂಚಿಸಿದ್ದರು ಎನ್ನಲಾಗಿದೆ.
ನಾಲ್ಕು ಸ್ಥಾನಕ್ಕೆ ಪೈಪೋಟಿ :
ಸೆ. 13ರಿಂದ ವಿಧಾನಸಭೆಯ ಮುಂಗಾರು ಅಧಿವೇಶನ ಆರಂಭವಾಗಲಿದೆ. ಅದಕ್ಕೂ ಮೊದಲು ಸಚಿವ ಸ್ಥಾನ ಭರ್ತಿ ಮಾಡಬೇಕು ಎನ್ನುವುದು ಆಕಾಂಕ್ಷಿಗಳ ಒತ್ತಡ ಎನ್ನುವುದು ಮೂಲಗಳ ಹೇಳಿಕೆ.
ಬಿ.ವೈ. ವಿಜಯೇಂದ್ರ, ಬಸನಗೌಡ ಪಾಟೀಲ್ ಯತ್ನಾಳ್, ಸಿ.ಪಿ. ಯೋಗೇಶ್ವರ್, ರಾಜುಗೌಡ ಅವರನ್ನು ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ನಡುವೆಯೇ ಮಾಜಿ ಸಚಿವ ರಮೇಶ್ ಜಾರಕಿಹೊಳಿಗಾಗಿ ಒಂದು ಸ್ಥಾನ ಖಾಲಿ ಇಟ್ಟುಕೊಳ್ಳುವ ಉದ್ದೇಶವನ್ನು ಸಿಎಂ ಹೊಂದಿದ್ದಾರೆ ಎನ್ನಲಾಗಿದೆ.
ಸಮಯ ಕೇಳಿದ ಬೊಮ್ಮಾಯಿ : ದಿಲ್ಲಿಗೆ ತೆರಳುವ ಮುನ್ನ ಬಿಎಸ್ವೈ ಅವರನ್ನು ಭೇಟಿ ಮಾಡಿ ಸ್ವಲ್ಪ ಸಮಯ ವಕಾಶ ನೀಡುವಂತೆ ಮನವಿ ಮಾಡಿದ್ದ ಬೊಮ್ಮಾಯಿ ಅವರು ವಿಜಯೇಂದ್ರ ಸೇರ್ಪಡೆ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜತೆಗೆ ಚರ್ಚಿಸಿ ಶೀಘ್ರ ತೀರ್ಮಾನಿಸುವುದಾಗಿ ಹೇಳಿ ದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ