ಶಿಶುಪಾಲನೆಗಾಗಿ “ವಿಧುರ’ ಪುರುಷನಿಗೆ ರಜೆ?
Team Udayavani, Dec 30, 2022, 7:50 AM IST
ಸುವರ್ಣ ವಿಧಾನಸೌಧ: ಶಿಶುಪಾಲನಾ ರಜೆಯನ್ನು ಸರ್ಕಾರಿ ಮಹಿಳಾ ಅಧಿಕಾರಿಗೆ ನೀಡುವಂತೆ ಪತ್ನಿ ಮೃತಪಟ್ಟ ಪುರುಷರಿಗೂ ಪರಿಗಣಿಸಲಾಗುವುದು ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.
ವಿಧಾನ ಪರಿಷತ್ತಿನಲ್ಲಿ ಗುರುವಾರ ಪ್ರಶ್ನೋತ್ತರ ವೇಳೆ ಸದಸ್ಯ ನಸೀರ್ ಅಹಮದ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮಹಿಳಾ ಸರ್ಕಾರಿ ನೌಕರರಿಗೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮದನ್ವಯ ಪ್ರಸೂತಿಗೆ ರಜೆಯ ಆರಂಭದ ದಿನದಿಂದ 180 ದಿನಗಳವರೆಗೆ ಮಂಜೂರು ಮಾಡಲು ಅವಕಾಶ ನೀಡಲಾಗಿದೆ. ಇದೇ ನಿಯಮವನ್ನು “ವಿದುರ’ ಅಂದರೆ ಪತ್ನಿ ಮೃತಪಟ್ಟ ಪುರುಷ ಸರ್ಕಾರಿ ನೌಕರರಿಗೂ ಅವಕಾಶ ಕಲ್ಪಿಸಬೇಕು. ಈ ಮೂಲಕ ಶಿಶು ಪಾಲನೆಗೆ ಅನುಕೂಲ ಮಾಡಿಕೊಡಬೇಕೆಂದು ಹೇಳಿದರು.
ಪತ್ನಿಯ ಹೆರಿಗೆ ಕಾಲದಲ್ಲಿ ಎರಡು ಮಕ್ಕಳ ಪ್ರಸೂತಿಗೆ ಪ್ರತಿ ಬಾರಿಗೆ 15 ದಿನಗಳ ಪಿತೃತ್ವ ರಜೆಯನ್ನು ನೀಡಲಾಗುವುದು. ಇನ್ನು ಹೆರಿಗೆ ಸಮಯದಲ್ಲಿ ಪತ್ನಿ ಮೃತವಾದರೂ, ಪತಿಗೂ ರಜೆ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ರಾಜ್ಯ ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಚಾಲ್ತಿಯಲ್ಲಿರುವ ಪ್ರಸೂತಿ ರಜೆಯೊಂದಿಗೆ ಒಟ್ಟು ಸೇವಾವಧಿಯಲ್ಲಿ ಆರು ತಿಂಗಳ ಕಾಲ ಮಕ್ಕಳ ಆರೈಕೆ ರಜೆ ನೀಡಲಾಗಿದೆ. ಶಿಶುಪಾಲನಾ ರಜೆಯನ್ನು ಮಹಿಳಾ ನೌಕರರಿಗೆ ಗರಿಷ್ಠ ಆರು ತಿಂಗಳವರೆಗೆ ಅವರ ಮಕ್ಕಳ ಸಂಖ್ಯೆಯನ್ನು ಪರಿಗಣಿಸಿದೆ. ಮಗುವು 18 ವರ್ಷ ತಲುಪುವವರೆಗಿನ ಅವಧಿಗೆ ಮಾತ್ರ ಮಂಜೂರು ಮಾಡಬಹುದಾಗಿದೆ. ಮಹಿಳೆಯರು ಹೆಚ್ಚಾಗಿ ಮಕ್ಕಳ ಪರೀûಾ ಸಮಯದಲ್ಲೇ ರಜೆ ಪಡೆಯುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ