ನಿಗೂಢವಾಗಿ ಉಳಿದ ಸಂಪುಟ ರಚನೆ

ಹಿರಿಯರಿಗೆ ಆದ್ಯತೆ,ಕಿರಿಯರಿಗೆ ಅವಕಾಶ?

Team Udayavani, Aug 19, 2019, 5:50 AM IST

vidhana-soudha-750

ಬೆಂಗಳೂರು: ಬಿಜೆಪಿ ಸರಕಾರ ನೂತನ ಸಚಿವ ಸಂಪುಟ ರಚನೆಯ ಕಸರತ್ತು ರವಿವಾರವೂ ಅಪೂರ್ಣ ಗೊಂಡಿದ್ದು, ಕೇಂದ್ರದ ಒಪ್ಪಿತ ಪಟ್ಟಿಗಾಗಿ ರಾಜ್ಯ ನಾಯಕರು ಕಾದುಕುಳಿತಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ, ತಾವು ಸಿದ್ಧಪಡಿಸಿದ್ದ ಪಟ್ಟಿಯನ್ನು ನೀಡಿದ್ದಾರೆ. ಹಾಗೆಯೇ ಕೇಂದ್ರದ ನಾಯಕರು ಇನ್ನೊಂದು ಪಟ್ಟಿಯನ್ನು ಸಿದ್ಧ ಪಡಿಸಿ ಕೊಂಡಿದ್ದರು. ಈ ಎರಡೂ ಪಟ್ಟಿಗಳನ್ನು ತುಲನಾತ್ಮಕವಾಗಿ ಪರಿಶೀಲಿಸಿ, ಕೆಲವು ಹಿರಿಯರಿಗೆ ಸಚಿವ ಸ್ಥಾನದಿಂದ ಕೊಕ್‌ ನೀಡಿ, ಪಕ್ಷ ಸಂಘಟನೆ ಅಥವಾ ಸರಕಾರದಲ್ಲಿ ಬೇರೆ ಜವಾಬ್ದಾರಿ ನೀಡುವ ಬಗ್ಗೆಯೂ ಕೇಂದ್ರದ ನಾಯಕರು ಚಿಂತನೆ ನಡೆಸಿದ್ದಾರೆ. ಹೀಗಾಗಿ ರವಿವಾರ ಸಂಜೆಯೊಳಗೆ ಬರಬೇಕಿದ್ದ ಪಟ್ಟಿ ವಿಳಂಬವಾಗಿ ಬರುತ್ತಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ ಬಿಜೆಪಿ-ಜೆಡಿಎಸ್‌ ಸಮ್ಮಿಶ್ರ ಸರಕಾರ ಮತ್ತು ಪೂರ್ಣಪ್ರಮಾಣದ ಬಿಜೆಪಿ ಸರಕಾರದ ಎರಡೂ ಸಂದರ್ಭಗಳಲ್ಲಿ ಸಚಿವರಾಗಿ ಅಥವಾ ಸರಕಾರದ ಉನ್ನತ ಅಧಿಕಾರ ಅನುಭವಿಸಿರುವ ಹಲವು ಹಿರಿಯರು ಈ ಬಾರಿ ಹುದ್ದೆ ವಂಚಿತರಾಗುವ ಸೂಚನೆಗಳಿವೆ. ಬಿಜೆಪಿ ಅವಧಿಯಲ್ಲಿ ಮುಖ್ಯ ಮಂತ್ರಿಯೂ ಆಗಿದ್ದ ಜಗದೀಶ ಶೆಟ್ಟರ್‌, ಡಿಸಿಎಂಗಳಾಗಿದ್ದ ಕೆ.ಎಸ್‌. ಈಶ್ವರಪ್ಪ, ಆರ್‌. ಅಶೋಕ್‌ ಸಹಿತ ಕೆಲವರಿಗೆ ಮತ್ತೆ ಸಚಿವ ಸ್ಥಾನ ನೀಡುವ ಬಗ್ಗೆ ಅನುಮಾನ ವ್ಯಕ್ತವಾಗಿವೆ. ಆದರೆ ಹೈಕಮಾಂಡ್‌ ನಿರ್ಧಾರವೇ ಅಂತಿಮವಾಗಲಿದೆ ಎಂದು ಮೂಲಗಳು ಹೇಳಿವೆ. ಒಟ್ಟಾರೆಯಾಗಿ ಅನರ್ಹ ಶಾಸಕರನ್ನು ಗಮನದಲಿಟ್ಟು ಕೊಂಡೇ ಸಂಪುಟ ರಚನೆಯಾಗಲಿದೆ ಎನ್ನಲಾಗಿದೆ.

ಸಂಭಾವ್ಯ ಸಚಿವರು
ಜೆ.ಸಿ. ಮಾಧುಸ್ವಾಮಿ, ಶಶಿಕಲಾ ಜೊಲ್ಲೆ, ಡಾ| ಸಿ.ಎನ್‌.ಅಶ್ವತ್ಥನಾರಾಯಣ, ಎ.ಎಸ್‌. ರಾಮದಾಸ್‌, ಅರವಿಂದ ಲಿಂಬಾವಳಿ, ಗೋವಿಂದ ಕಾರಜೋಳ, ಶ್ರೀರಾಮುಲು, ಬಾಲಚಂದ್ರ ಜಾರಕಿಹೊಳಿ, ಕೊಡಗು ಸಹಿತವಾಗಿ ಕರಾವಳಿ ಭಾಗದಲ್ಲಿ ಎಸ್‌. ಅಂಗಾರ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಸುನಿಲ್‌ ಕುಮಾರ್‌, ವೇದವ್ಯಾಸ ಕಾಮತ್‌, ಅಪ್ಪಚ್ಚು ರಂಜನ್‌ ಅಥವಾ ಬೋಪಯ್ಯ ಮೊದಲಾದವರ ಹೆಸರುಗಳು ಮೇಲ್ನೋಟಕ್ಕೆ ಕೇಳಿ ಬರುತ್ತಿವೆ. ಇದರ ಜತೆಗೆ ಯುವ ಶಾಸಕರಲ್ಲಿ ಒಬ್ಬರು ಅಥವಾ ಇಬ್ಬರಿಗೆ ಅವಕಾಶ ಹೆಚ್ಚಿದೆ ಎಂದು ಹೇಳಾಗುತ್ತಿದೆ.ವಿಧಾನ ಪರಿಷತ್‌ನಿಂದ ಎನ್‌.ರವಿಕುಮಾರ್‌ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರ ಹೆಸರು ಕೇಳಿ ಬಂದಿದೆ. ಯಾರಿಗೆ ಸಚಿವ ಸ್ಥಾನ ಪಕ್ಕ ಎಂಬುದು ಇನ್ನು ಕೂಡ ಗುಪ್ತವಾಗಿಯೇ ಉಳಿದಿದೆ.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.