ರಾಜೀನಾಮೆ ನೀಡುತ್ತೇನೆಂದ ಮಗನನ್ನು ಸಮಾಧಾನಪಡಿಸಿದ ದೊಡ್ಡಗೌಡರು!

ರಾಜ್ಯ ರಾಜಕಾರಣದಲ್ಲಿ ಮುಂದುವರಿದ ಗೊಂದಲದ ವಾತಾವರಣ

Team Udayavani, Jul 14, 2019, 6:36 PM IST

Kumaraswamy-H-D-4-726

ಬೆಂಗಳೂರು: ರಾಜ್ಯ ರಾಜಕಾರಣದ ಪ್ರಸ್ತುತ ಬೆಳವಣಿಗೆಗಳು ದಿನಕ್ಕೊಂದು ತಿರುವನ್ನು ಪಡೆದುಕೊಳ್ಳುತ್ತಿದೆ. ಒಂದೆಡೆ ಕಾಂಗ್ರೆಸ್ ನ ಅತೃಪ್ತ ಶಾಸಕರು ತಮ್ಮ ನಿಲುವಿಗೆ ಅಂಟಿಕೊಂಡಿದ್ದರೆ ಇನ್ನೊಂದೆಡೆ ಕಾಂಗ್ರೆಸ್ ತನ್ನ ಶಾಸಕರ ಮನ ಒಲಿಸಲು ನಿರಂತರ ಪ್ರಯತ್ನಗಳನ್ನು ನಡೆಸುತ್ತಲೇ ಇದೆ. ಮಗದೊಂದು ಕಡೆ ವಿಧಾನಸಭಾಧ್ಯಕ್ಷರು ಶಾಸಕರ ರಾಜೀನಾಮೆ ಅಂಗೀಕಾರವನ್ನು ತಡೆಹಿಡಿದು ಕೂತಿದ್ದಾರೆ. ಇವೆಲ್ಲದರ ನಡುವೆ ‘ಹಮಾರಾ ನಂಬರ್ ಕಬ್ ಆಯೇಗಾ…?’ ಎಂದು ಪ್ರತಿಪಕ್ಷ ಬಿ.ಜೆ.ಪಿ. ಕಾದುಕುಳಿತಿದೆ. ಮೂರು ಪಕ್ಷಗಳ ರಾಜಕೀಯ ಚಟುವಟಿಕೆ ರೆಸಾರ್ಟ್ ಗಳಿಗೆ ಶಿಫ್ಟಾಗಿದೆ.

ಈತನ್ಮಧ್ಯೆ ಈ ಎಲ್ಲಾ ಗೊಂದಲಗಳು ಪ್ರಾರಂಭವಾದಾಗಿನಿಂದಲೂ ತನಗೂ ಅದಕ್ಕೂ ಸಂಬಂಧವಿಲ್ಲವೆಂಬಂತೆ ಕುಳಿತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಮಿತ್ರಪಕ್ಷ ಕಾಂಗ್ರೆಸ್ ಮುಖಂಡರೇ ಈ ಬಿಕ್ಕಟ್ಟನ್ನು ಬಗೆಹರಿಸಲಿ ಎಂದು ಕುಳಿತಿದ್ದಾರೆ.

ಈ ನಡುವೆ ಆದಿತ್ಯವಾರದಂದು ಕಾಂಗ್ರೆಸ್ ಮತ್ತು ಜೆಡಿಎಸ್ ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿದೆ. ತಾಜ್ ವಿವಾಂತದಲ್ಲಿ ಉಳಿದುಕೊಂಡಿದ್ದ ಕಾಂಗ್ರೆಸ್ ಶಾಸಕರನ್ನು ಮಾಜೀಮುಖ್ಯಮಂತ್ರಿ ಸಿದ್ಧರಾಮಯ್ಯನವರು ಭೇಟಿಯಾಗಿ ಮಾತುಕತೆ ನಡೆಸಿದರು. ಇನ್ನು ನಿನ್ನೆ ತಾನೇ ಕಾಂಗ್ರೆಸ್ ಪಾಳಯಕ್ಕೆ ಮರಳುವ ಸೂಚನೆ ನೀಡಿದ್ದ ಅತೃಪ್ತ ಶಾಸಕ ಎಂ.ಟಿ.ಬಿ. ನಾಗರಾಜ್ ಅವರು ಇವತ್ತು ದಿಢೀರ್ ಆಗಿ ಮುಂಬಯಿಗೆ ತೆರಳುವ ಮೂಲಕ ಅಚ್ಚರಿಗೆ ಕಾರಣರಾಗಿದ್ದಾರೆ.

ಇವೆಲ್ಲಕ್ಕಿಂತ ಪ್ರಮುಖ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ನಾಲ್ಕು ಗಂಟೆಗಳಿಗೂ ಅಧಿಕ ಸಮಯ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಪುತ್ರನಿಗೆ ಸಮಾಧಾನ ಹೇಳಿದ ದೊಡ್ಡ ಗೌಡರು, ಸುಪ್ರೀಂಕೋರ್ಟ್ ತೀರ್ಪು ಬರುವವರೆಗೆ ತಾಳ್ಮೆಯಿಂದ ಇರುವಂತೆ ಕಿವಿಮಾತು ಹೇಳಿದರು ಎನ್ನಲಾಗಿದೆ. ಮಾತ್ರವಲ್ಲದೇ ಸ್ಪೀಕರ್ ಅವರು ವಿಶ್ವಾಸಮತಕ್ಕೆ ದಿನನಿಗದಿ ಮಾಡಿದ ಮೇಲೆ ಮುಂದಿನ ಕಾರ್ಯತಂತ್ರಗಳನ್ನು ರೂಪಿಸುವಂತೆಯೂ ದೊಡ್ಡಗೌಡರು ತಮ್ಮ ಪುತ್ರನಿಗೆ ಸಲಹೆ ನೀಡಿದ್ದಾರಂತೆ.

ಒಂದು ಹಂತದಲ್ಲಂತೂ ‘ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟುಬಿಡುತ್ತೇನೆ’ ಎಂಬ ಮಾತನ್ನೂ ಸಹ ಕುಮಾರಸ್ವಾಮಿ ಅವರು ತಮ್ಮ ತಂದೆಯವರ ಎದುರು ಆಡಿದ್ದಾರೆ ಎನ್ನಲಾಗುತ್ತಿದೆ. ಕಾಂಗ್ರೆಸ್ ನಾಯಕರ ವರ್ತನೆ ಹಾಗೂ ಎಂಟಿಬಿ ನಾಗರಾಜ್ ರಾಜೀನಾಮೆ ಪ್ರಹಸನ ಕುಮಾರಸ್ವಾಮಿ ಅವರನ್ನು ಈ ನಿರ್ಧಾರಕ್ಕೆ ಮನಸ್ಸು ಮಾಡಲು ಕಾರಣವೆನ್ನುತ್ತದೆ ಅವರ ಆಪ್ತವಲಯ.

ಆದರೆ ಬುಧವಾರದವರೆಗೆ ಕಾದು ನೋಡಿ ಆ ಬಳಿಕ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುವಂತೆ ದೊಡ್ಡಗೌಡರು ನೀಡಿದ ಸಲಹೆ ಕುಮಾರಸ್ವಾಮಿ ಅವರು ತಮ್ಮ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯಲು ಕಾರಣವಾಗಿದೆ.

ಏನೇ ಆದರೂ ಮುಂದಿನ ಎರಡು ದಿನಗಳಲ್ಲಿ ರಾಜ್ಯ ರಾಜಕಾರಣ ಇನ್ನಷ್ಟು ರಂಗೇರುವುದರಲ್ಲಿ ಯಾವುದೇ ಸಂಶಯವಿಲ್ಲ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.