ಮರಳಿ ಕಾಂಗ್ರೆಸ್ ಗೂಡಿಗೆ ಹಾರುವುದೇ ಹಳ್ಳಿಹಕ್ಕಿ?
Team Udayavani, Dec 6, 2022, 10:19 AM IST
ಬೆಂಗಳೂರು: ಮಾಜಿ ಸಚಿವ ಎಚ್. ವಿಶ್ವನಾಥ್ ಮರಳಿ ಕಾಂಗ್ರೆಸ್ ಸೇರ್ಪಡೆ ವಿಚಾರ ಈಗ ಮತ್ತೆ ಚರ್ಚೆಗೆ ಬಂದಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ವಿಶ್ವನಾಥ್ ಮಾತುಕತೆ ನಡೆಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಜತೆಗಿನ ಭಿನ್ನಮತದ ಹಿನ್ನೆಲೆ ವಿಶ್ವನಾಥ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಆ ಬಳಿಕ ಆಪರೇಷನ್ “ಕಮಲ”ಕ್ಕೆ ಬಲಿಯಾಗಿ ಬಿಜೆಪಿಗೆ ಹಾರಿದ್ದರು. ಆದರೆ ಭಾರತೀಯ ಜನತಾ ಪಕ್ಷದಲ್ಲಿ ಉಸಿರುಗಟ್ಟಿಸುವ ವಾತಾವರಣ ಇದೆ ಎಂದು ವಿಶ್ವನಾಥ್ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ.
ಕೆಲದಿನಗಳ ಹಿಂದೆ ನಡೆದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವನಾಥ ಜತೆಗಿನ ತಮ್ಮ ಒಡನಾಟವನ್ನು ಮೆಲುಕು ಹಾಕಿದ್ದಾರೆ. ಸಮುದಾಯದ ಮುಖಂಡರನ್ನು ಇಬ್ಬರನ್ನೂ ಒಟ್ಟಿಗೆ ಸೇರಿಸಲು ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ. ಇದರ ಬೆನ್ನಲ್ಲೇ ವಿಶ್ವನಾಥ್ ಮಲ್ಲಿಕಾರ್ಜುನ ಖರ್ಗೆಯವನರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ಮೂಲಗಳ ಪ್ರಕಾರ, ವಿಶ್ವನಾಥ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡಾ ಮೃಧು ಧೋರಣೆ ಹೊಂದಿದ್ದಾರೆ. ಹೀಗಾಗಿ ಪಕ್ಷಕ್ಕೆ ಮರಳಿ ಬರುವುದಕ್ಕೆ ಇಚ್ಚಿಸಿದರೆ ಯಾರಿಂದಲೂ ಹೇಳಿಕೊಳ್ಳುವಂಥ ವಿರೋಧ ವ್ಯಕ್ತವಾಗಲಾರದು ಎನ್ನಲಾಗಿದೆ. ಆದರೆ ಪಕ್ಷ ತೊರೆದು ಹೋದವರನ್ನು ಪ್ರಳಯವಾದರೂ ಮತ್ತೆ ಸೇರಿಸಿಕೊಳ್ಳುವುದಿಲ್ಲ ಎಂದು ವಿಧಾನಸಭೆಯಲ್ಲಿ ಮಾಡಿರುವ ಘೋಷಣೆ ಇದಕ್ಕೆ ಅಡ್ಡಿಯಾಗಬಹುದು ಎಂದು ಹೇಳಲಾಗುತ್ತಿದೆ.
ವಿಶ್ವನಾಥ್ ಮರಳಿ ಪಕ್ಷಕ್ಕೆ ಬಂದರೂ ಅವರಿಗೆ ಚುನಾವಣಾ ರಾಜಕಾರಣದಲ್ಲಿ ಅವಕಾಶ ಸಿಗುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಹನೂರು ಕ್ಷೇತ್ರದಲ್ಲಿ ಸಿದ್ದರಾಮಯ್ಯ ಆಪ್ತ ಮಂಜುನಾಥ್ ಶಾಸಕರಾಗಿರುವುದರಿಂದ ಅವರಿಗೆ ಟಿಕೆಟ್ ತಪ್ಪಿಸುವ ಯಾವುದೇ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ