ರಾಜ್ಯದ ಮತದಾನ ಪೂರ್ಣ : ಶಿವಮೊಗ್ಗದಲ್ಲೇ ಹೆಚ್ಚು , ರಾಯಚೂರಿನಲ್ಲಿ ಕಡಿಮೆ
Team Udayavani, Apr 24, 2019, 6:00 AM IST
ಬೆಂಗಳೂರು: ರಾಜ್ಯದ ಉತ್ತರ ಭಾಗದಲ್ಲಿನ ಶಾಂತಿಯುತ ಮತದಾನದ ಮೂಲಕ ಕರ್ನಾಟಕದ ಲೋಕಸಭೆ ಚುನಾವಣ ಸಂಭ್ರಮ ಸಂಪನ್ನಗೊಂಡಿತು. ಸರಿಯಾಗಿ ಇನ್ನು ಒಂದು ತಿಂಗಳಿಗೆ ಫಲಿತಾಂಶ ಹೊರಬರಲಿದ್ದು, ಅಲ್ಲಿಯ ತನಕ ಘಟಾನುಘಟಿಗಳ ಭವಿಷ್ಯ ಸ್ಟ್ರಾಂಗ್ ರೂಂಗಳಲ್ಲಿ ಇಡಲಾಗಿರುವ ಮತಯಂತ್ರಗಳಲ್ಲಿ ಭದ್ರವಾಗಿರಲಿದೆ.
ಮೊದಲ ಹಂತದ ದಕ್ಷಿಣಾರ್ಧಕ್ಕೆ ಹೋಲಿಸಿದರೆ ಉತ್ತರಾರ್ಧದಲ್ಲಿ ಮತದಾನದ ಪ್ರಮಾಣ ಕಡಿಮೆ. ಚುನಾವಣೆ ನಡೆದ 14 ಕ್ಷೇತ್ರಗಳಲ್ಲಿ ಶೇ.68.15ರಷ್ಟು ಮತದಾನವಾಗಿದೆ. ಮೊದಲ ಹಂತದಲ್ಲಿ ಶೇ.68ಕ್ಕೂ ಹೆಚ್ಚು ಮತದಾನವಾಗಿತ್ತು. ಉತ್ತರಾರ್ಧದ ಶಿವಮೊಗ್ಗ ಕ್ಷೇತ್ರದಲ್ಲಿ ಅತೀ ಹೆಚ್ಚು ಶೇ.76.43ರಷ್ಟು ಮತದಾನವಾಗಿದ್ದರೆ, ರಾಯಚೂರಿನಲ್ಲಿ ಅತೀ ಕಡಿಮೆ ಶೇ. 57.89ರಷ್ಟು ಮತದಾನವಾಗಿದೆ. ಮಳೆಯ ನಡುವೆಯೂ ಶಿವಮೊಗ್ಗ ಮಂದಿ ಮತಗಟ್ಟೆಗೆ ಬಂದು ಮತ ಹಾಕಿದ್ದಾರೆ.
ಮತಯಂತ್ರ ದೋಷ
ಮತಯಂತ್ರ ದೋಷ ಕಾರಣ ಮತದಾನ ವಿಳಂಬ ಪ್ರಕರಣಗಳು ಎರಡನೇ ಹಂತದಲ್ಲೂ ಮರುಕಳಿಸಿದ್ದು, ಕೆಲವೆಡೆ ಮತದಾರರು ಮತ್ತು ಮತಗಟ್ಟೆ ಅಧಿಕಾರಿಗಳ ನಡುವೆ ಈ ವಿಚಾರದಲ್ಲಿ ಮಾತಿನ ಘರ್ಷಣೆಯೂ ನಡೆದಿದೆ. ಬಾಗಲಕೋಟೆ ನಗರ ಸರಕಾರಿ ಶಾಲೆ ಮತಗಟ್ಟೆಯಲ್ಲಿ ಮತಯಂತ್ರ ದೋಷದಿಂದ 50 ನಿಮಿಷ ಮತದಾನ ವಿಳಂಬವಾಯಿತು. ಕಲಬುರಗಿಯ ಸುರಪುರದಲ್ಲಿ ಮತಯಂತ್ರ ಒಡೆದು ಹೋದ ಕಾರಣ ಹೊಸ ಯಂತ್ರ ಅಳವಡಿಸಲಾಯಿತು.
ಫಲಿತಾಂಶದತ್ತ ಚಿತ್ತ
ರಾಜ್ಯದಲ್ಲಿ ಎರಡು ಹಂತಗಳಲ್ಲಿ 28 ಕ್ಷೇತ್ರಗಳಲ್ಲಿ ಮತದಾನ ಪೂರ್ಣಗೊಂಡಂತಾಗಿದ್ದು, ಮೇ 23ರ ಫಲಿತಾಂಶದತ್ತ ಎಲ್ಲರ ಚಿತ್ತ ಹರಿದಿದೆ. ಎ.18ರಂದು ಮೊದಲ ಹಂತದಲ್ಲಿ 14 ಕ್ಷೇತ್ರ, ಎರಡನೇ ಹಂತದಲ್ಲಿ ಮಂಗಳವಾರ 14 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಮೊದಲ ಹಂತದಲ್ಲಿ 241, ಎರಡನೇ ಹಂತದಲ್ಲಿ 237 ಅಭ್ಯರ್ಥಿಗಳು ಕಣದಲ್ಲಿದ್ದರು. 21 ಕ್ಷೇತ್ರಗಳಲ್ಲಿ ಕಾಂಗ್ರೆಸ್, 7 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ ಮಾಡಿತ್ತು. ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಬೆಂಬಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Prajwal R case: ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೆ SIT ಮನವಿ: ಏನಿದು?
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
MUST WATCH
ಹೊಸ ಸೇರ್ಪಡೆ
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು
Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ