ಇದ್ದ ಕಡೆಯಲ್ಲೇ ಇರುವಂತೆ ಸೂಚನೆ; ಅಮೆರಿಕದಲ್ಲಿನ ಭಾರತೀಯ ವಿದ್ಯಾರ್ಥಿಗಳಿಗೆ ರಾಯಭಾರಿ ಸಲಹೆ


Team Udayavani, Apr 13, 2020, 6:30 AM IST

ಇದ್ದ ಕಡೆಯಲ್ಲೇ ಇರುವಂತೆ ಸೂಚನೆ; ಅಮೆರಿಕದಲ್ಲಿನ ಭಾರತೀಯ ವಿದ್ಯಾರ್ಥಿಗಳಿಗೆ ರಾಯಭಾರಿ ಸಲಹೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ವಾಷಿಂಗ್ಟನ್: ಸುದೀರ್ಘ‌ ಅವಧಿಯ ಲಾಕ್‌ ಡೌನ್‌ನಿಂದಾಗಿ ಅಮೆರಿಕದ ಹಲವಾರು ವಿಶ್ವವಿದ್ಯಾಲಯಗಳು ಮುಚ್ಚಿರುವ ಕಾರಣ ಅಲ್ಲಿರುವ ಅನೇಕ ಭಾರತೀಯ ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ ಅವರಿಗೆ ಸಂದೇಶವೊಂದನ್ನು ರವಾನಿಸಿರುವ ಅಮೆರಿಕದಲ್ಲಿರುವ ಭಾರತೀಯ ರಾಯಭಾರಿ ತರಣ್‌ ಜಿತ್‌ ಸಿಂಗ್‌ ಸಂಧು, ‘ನೀವು ಸದ್ಯಕ್ಕೆ ಎಲ್ಲಿದ್ದೀರೋ, ಅಲ್ಲೇ ಇರಿ. ಹಾಗಿದ್ದರಷ್ಟೇ ನೀವು ಸುರಕ್ಷಿತವಾಗಿರುತ್ತೀರಿ. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ನಿಮಗೆ ಏನು ಸಹಾಯ ಬೇಕೋ ಅದನ್ನು ನಾವು ಮಾಡುತ್ತೇವೆ’ ಎಂದು ಭರವಸೆ ನೀಡಿದ್ದಾರೆ.

ಭಾರತೀಯ ರಾಯಭಾರಿ ಕಚೇರಿಯು ಭಾನುವಾರ ಆಯೋಜಿಸಿದ್ದ ಇನ್‌ಸ್ಟಾಗ್ರಾಂ ನೇರ ಪ್ರಸಾರದಲ್ಲಿ ಸುಮಾರು 500 ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಈ ವೇಳೆ ಸಂದೇಶ ರವಾನಿಸಲಾಗಿದೆ. ಪರಿಸ್ಥಿತಿ ಸ್ವಲ್ಪಮಟ್ಟಿಗೆ ಸುಧಾರಿಸಿದರೆ ಸಾಕು, ನಾವು ನಿಮ್ಮನ್ನು ಭಾರತಕ್ಕೆ ಕರೆದೊಯ್ಯಲು ವ್ಯವಸ್ಥೆ ಮಾಡುತ್ತೇವೆ ಎಂಬ ಭರವಸೆಯನ್ನೂ ನೀಡಲಾಗಿದೆ. ಅಮೆರಿಕದಲ್ಲಿ ಸುಮಾರು 2.50 ಲಕ್ಷ ಭಾರತೀಯ ವಿದ್ಯಾರ್ಥಿಗಳಿದ್ದಾರೆ.

20,637ಕ್ಕೇರಿದ ಸಾವಿನ ಸಂಖ್ಯೆ: ಕೋವಿಡ್ ವೈರಸ್ ಸಾವಿನ ಸಂಖ್ಯೆಯಲ್ಲಿ ಇಟಲಿಯನ್ನೇ ಮೀರಿಸಿರುವ ಅಮೆರಿಕ ಈಗ ಜಗತ್ತಿನಲ್ಲೇ ಅತಿ ಹೆಚ್ಚು ಸಾವು ಕಂಡ ರಾಷ್ಟ್ರ ಎಂಬ ಅಪಖ್ಯಾತಿಗೆ ಗುರಿಯಾಗಿದೆ. ಇಲ್ಲಿ ಭಾನುವಾರ ಸಾವಿನ ಸಂಖ್ಯೆ 20,637ಕ್ಕೇರಿದೆ. ಇಟಲಿಯಲ್ಲಿ ಈವರೆಗೆ ಒಟ್ಟು 19,468 ಮಂದಿ ಈ ವೈರಸ್ ಗೆ ಬಲಿಯಾಗಿದ್ದಾರೆ. 5.3 ಲಕ್ಷಕ್ಕೂ ಅಧಿಕ ಅಮೆರಿಕನ್ನರು ಸೋಂಕಿನಿಂದ ಬಳಲುತ್ತಿದ್ದಾರೆ.

ಅಮೆರಿಕ ತಲುಪಿದ ಔಷಧ: ಮಲೇರಿಯಾ ನಿಗ್ರಹ ಔಷಧದ ಮೇಲೆ ಭಾರತ ಹೇರಿದ್ದ ರಫ್ತು ನಿರ್ಬಂಧ ವಾಪಸ್‌ ಪಡೆದ ಬೆನ್ನಲ್ಲೇ ಭಾನುವಾರ ಹೈಡ್ರಾಕ್ಸಿಕ್ಲೋರೋಕ್ವಿನ್‌ ಔಷಧವುಳ್ಳ ಸಂಗ್ರಹವು ಅಮೆರಿಕಕ್ಕೆ ತಲುಪಿದೆ. ಮಾನವೀಯ ನೆಲೆಯಲ್ಲಿ ಭಾರತವೇ ಈ ಔಷಧವನ್ನು ಅಮೆರಿಕ ಸೇರಿದಂತೆ ಹಲವು ದೇಶಗಳಿಗೆ ರಫ್ತು ಮಾಡಿದೆ.

ಕಳೆದ ವಾರದ ಆರಂಭದಲ್ಲೇ ಅಮೆರಿಕ ಅಧ್ಯಕ್ಷ ಟ್ರಂಪ್‌ ಅವರು 35.82 ಲಕ್ಷ ಹೈಡ್ರಾಕ್ಸಿಕ್ಲೋರೋಕ್ವಿನ್‌ ಮಾತ್ರೆಗಳು ಹಾಗೂ 9 ಮೆಟ್ರಿಲ್‌ ಟನ್‌ ಫಾರ್ಮಾಸ್ಯುಟಿಕಲ್‌ ಸಾಮಗ್ರಿಗಳನ್ನು ಕಳುಹಿಸಿಕೊಡುವಂತೆ ಭಾರತಕ್ಕೆ ಮನವಿ ಮಾಡಿದ್ದರು. ಅದರಂತೆ, ಔಷಧ ಹೊತ್ತ ವಿಮಾನವು ನೆವಾರ್ಕ್‌ ವಿಮಾನ ನಿಲ್ದಾಣ ತಲುಪಿದೆ.

ಟ್ರಂಪ್‌ ವಿರುದ್ಧ ಕಿಡಿ
ಸಾವಿನ ಸಂಖ್ಯೆ 20 ಸಾವಿರ ದಾಟುತ್ತಲೇ ಅಧ್ಯಕ್ಷ ಟ್ರಂಪ್‌ ವಿರುದ್ಧ ಅಸಮಾಧಾನ ಆರಂಭವಾಗಿದೆ. ಈ ವೈರಸ್‌ ನ ಗಂಭೀರತೆ ಕುರಿತು ಆರಂಭದಲ್ಲೇ ಪದೇ ಪದೆ ಎಚ್ಚರಿಕೆ ನೀಡಿದರೂ ಟ್ರಂಪ್‌ ಕಿವಿ ಗೊಡಲೇ ಇಲ್ಲ. ಸೋಂಕು ವ್ಯಾಪಿಸುವಿಕೆಗೆ ಕಡಿವಾಣ ಹಾಕುವ ಬದಲು ಅಂಥ ಸಂದೇಶಗಳನ್ನು ನಿಯಂತ್ರಿಸುವ, ಹಿರಿಯ ಅಧಿಕಾರಿಗಳು ನೀಡಿರುವ ಎಚ್ಚರಿಕೆಗೆ ಟಾಂಗ್‌ ನೀಡುವ, ಆರ್ಥಿಕತೆಯ ಲಾಭ ಪಡೆಯುವುದರಲ್ಲೇ ಟ್ರಂಪ್‌ ನಿರತರಾದರು. ಅವರ ನಿರ್ಲಕ್ಷ್ಯ ಧೋರಣೆಯೇ ಅಮೆರಿಕನ್ನರ ಈ ಪ್ರಮಾಣದ ಸಾವಿಗೆ ಕಾರಣ ಎಂಬ ದೀರ್ಘ‌ ತನಿಖಾ ವರದಿಯನ್ನು ದೇಶದ ಪ್ರಮುಖ ಪತ್ರಿಕೆಗಳಲ್ಲೊಂದಾದ ನ್ಯೂಯಾರ್ಕ್‌ ಟೈಮ್ಸ್ ಪ್ರಕಟಿಸಿದೆ.

ಅದರಲ್ಲಿ ಸಂಭಾವ್ಯ ವೈರಸ್‌ನ ಅಪಾಯದ ಕುರಿತು ಆರೋಗ್ಯ ಅಧಿಕಾರಿಗಳು, ರಾಷ್ಟ್ರೀಯ ಭದ್ರತಾ ಅಧಿಕಾರಿಗಳು, ತಜ್ಞರು, ಗುಪ್ತಚರ ಸಂಸ್ಥೆಗಳು ನೀಡಿದ ಎಚ್ಚರಿಕೆಯ ಸಂದೇಶಗಳನ್ನೂ ಪ್ರಕಟಿಸಲಾಗಿದೆ. ‘ಆಂತರಿಕ ಭಿನ್ನಮತ, ಸಮರ್ಪಕ ಯೋಜನೆಯ ಕೊರತೆ, ತಾನು ಹೇಳಿದ್ದೇ ನಡೆಯಬೇಕೆಂಬ ಟ್ರಂಪ್‌ ಧೋರಣೆಯೇ ದೇಶ ಇಂದು ಶೋಚನೀಯ ಸ್ಥಿತಿಗೆ ತಲುಪಲು ಕಾರಣ’ ಎಂದೂ ಬರೆಯಲಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.