ಕಾರಿಂಜದ ಸುತ್ತ 2 ಕಿ.ಮೀ. ಗಣಿಗಾರಿಕೆ ನಿಷೇಧ: ಜಿಲ್ಲಾಡಳಿತದಿಂದ ರಾಜ್ಯ ಸರಕಾರಕ್ಕೆ ಪ್ರಸ್ತಾವ


Team Udayavani, Feb 6, 2023, 6:50 AM IST

KARINJA

ಬಂಟ್ವಾಳ: ಇಲ್ಲಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತಲ 2 ಕಿ.ಮೀ. ವ್ಯಾಪ್ತಿಯನ್ನು ಕ್ಷೇತ್ರದ ಪಾವಿತ್ರ್ಯ ಮತ್ತು ಸಂರಕ್ಷಣೆಯ ಜತೆಗೆ ಸ್ಥಳೀಯರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಗಣಿಗಾರಿಕಾ ಚಟುವಟಿಕೆ ನಿಷೇಧಿತ ಪ್ರದೇಶವೆಂದು ಘೋಷಿಸುವ ಕುರಿತು ದ.ಕ. ಜಿಲ್ಲಾಡಳಿತ ರಾಜ್ಯ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.

ಮುಖ್ಯಮಂತ್ರಿಗಳ ನಿರ್ದೇಶನದಂತೆ ಕ್ಷೇತ್ರದ ಸುತ್ತ ಗಣಿಗಾರಿಕೆ ನಿಷೇಧಿಸುವ ನಿಟ್ಟಿನಲ್ಲಿ ಪ್ರಸ್ತಾವ ಸಲ್ಲಿಸಲು ಮಂಗಳೂರು ಸಹಾಯಕ ಕಮಿಷನರ್‌ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರು ಕಳೆದ ಜ. 12ರಂದು ದೇವಸ್ಥಾನದ ಸುತ್ತಮುತ್ತಲು ಜಂಟಿ ಸ್ಥಳ ಪರಿಶೀಲನೆ ನಡೆಸಿದ್ದರು.

ಈ ಪರಿಶೀಲನೆಯ ವರದಿಯ ಆಧಾರದಲ್ಲಿ ಜಿಲ್ಲಾಧಿಕಾರಿ ಡಾ| ರವಿಕುಮಾರ್‌ ಎಂ.ಆರ್‌. ಅವರು ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರಕಾರದ ಕಾರ್ಯದರ್ಶಿ(ಗಣಿ ಮತ್ತು ಎಂಎಸ್‌ಎಂಇ) ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಿಗೆ ಗಣಿಗಾರಿಕೆ ನಿಷೇಧದ ಕುರಿತು ಪ್ರಸ್ತಾವ ಸಲ್ಲಿಸಿದ್ದಾರೆ. ಇದರಂತೆ ಗಣಿಗಾರಿಕೆ ನಿಷೇಧಿಸಬೇಕೇ ಎಂಬುದರ ಕುರಿತು ಸರಕಾರ ನಿರ್ಧಾರ ಕೈಗೊಳ್ಳಲಿದೆ.

ಶಾಶ್ವತ ನಿಷೇಧಕ್ಕೆ ಮನವಿ
ಕಾರಿಂಜ ಪರಿಸರದಲ್ಲಿ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸಲು ಸರಕಾರ ಸೂಕ್ತ ಕ್ರಮಕೈಗೊಳ್ಳುವಂತೆ ಬಂಟ್ವಾಳ ಹಿಂದೂ ಜಾಗರಣ ವೇದಿಕೆಯ ಸಂಚಾಲಕ ತಿರುಲೇಶ್‌ ಬೆಳ್ಳೂರು ಸಹಿತ ಸ್ಥಳೀಯ ನಾಗರಿಕರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರಲ್ಲದೇ ಹೋರಾಟ, ಆಕ್ಷೇಪಣೆ, ದೂರುಗಳನ್ನು ಸಲ್ಲಿಸಿದ್ದರು.

ಕ್ಷೇತ್ರದ ಪಾವಿತ್ರ್ಯ ಮತ್ತು ಸಂರಕ್ಷಣೆಯ ಜತೆಗೆ ಸ್ಥಳೀಯ ಜನರ ಧಾರ್ಮಿಕ ಭಾವನೆಗೆ ಸ್ಪಂದಿಸುವ ನಿಟ್ಟಿನಲ್ಲಿ ಕ್ಷೇತ್ರದ ಸುತ್ತಲೂ ಗಣಿಗಾರಿಕೆ ಚಟುವಟಿಕೆಗಳನ್ನು ನಿಷೇಧಿಸಿ ರಕ್ಷಿತ ವಲಯವೆಂದು ಸರಕಾರ ಘೋಷಿಸಲು ಪ್ರಸ್ತಾವ ಸಲ್ಲಿಸಬಹುದು ಎಂದು ಅಭಿಪ್ರಾಯಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರು ಜಂಟಿ ಪರಿಶೀಲನೆಯ ವರದಿ ಸಿದ್ಧಪಡಿಸಿದ್ದರು. ಇದರ ಆಧಾರದಲ್ಲಿ ಡಿಸಿಯವರು ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.