ಅಡ್ಡಾದಿಡ್ಡಿಗೆ ತಡೆ: ಕೃಷಿ ಭೂಮಿ ಖರೀದಿ, ನೋಂದಣಿಗೆ ಕಡಿವಾಣ

ಕೊಡಗು, ಕರಾವಳಿಯಲ್ಲಿ ಕನಿಷ್ಠ 3 ಗುಂಟೆ ಖರೀದಿ

Team Udayavani, Jan 22, 2020, 6:45 AM IST

chii-34

ಸಾಂದರ್ಭಿಕ ಚಿತ್ರ

ಬೆಂಗಳೂರು: ತುಂಡು ಕೃಷಿ ಭೂಮಿ ಖರೀದಿಸಿ ನೋಂದಣಿ ಮಾಡಿಕೊಂಡು ಮನೆ, ಇತರ ಕಟ್ಟಡ ನಿರ್ಮಿಸಿಕೊಳ್ಳುವ ಮೂಲಕ ಹೆಚ್ಚಾಗುತ್ತಿರುವ ಅಡ್ಡಾದಿಡ್ಡಿ ನಗರೀಕರಣಕ್ಕೆ ತಡೆ ಹಾಕಲು ಮುಂದಾಗಿರುವ ರಾಜ್ಯ ಸರಕಾರವು ಕೃಷಿ ಭೂಮಿ ಖರೀದಿ/ ಮಾರಾಟ ನೋಂದಣಿಗೆ ಕನಿಷ್ಠ ಮಿತಿ ನಿಗದಿಪಡಿಸಲು ಸಿದ್ಧತೆ ನಡೆಸಿದೆ.

ರಾಜ್ಯದ ಎಲ್ಲೆಡೆ ಕನಿಷ್ಠ ಐದು ಗುಂಟೆ ಹಾಗೂ ಕೊಡಗು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಕನಿಷ್ಠ ಮೂರು ಗುಂಟೆ (7.5 ಸೆಂಟ್ಸ್‌) ಭೂಮಿಗಿಂತ ಕಡಿಮೆ ಅಳತೆಯ ಕೃಷಿ ಭೂಮಿ ಮಾರಾಟ- ಖರೀದಿ ಸಂಬಂಧ 11ಇ ನಕ್ಷೆ, ಪೋಡಿ, ಆರ್‌ಟಿಸಿ ನೀಡುವುದನ್ನು ನಿಷೇಧಿಸಲು ಕಂದಾಯ ಇಲಾಖೆ ರಾಜ್ಯ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ. ಸರಕಾರ ಈ ಕನಿಷ್ಠ ಮಿತಿಯನ್ನು ಕ್ರಮವಾಗಿ 10 ಮತ್ತು ಆರು ಗುಂಟೆಗೆ ನಿಗದಿಪಡಿಸಲು ಚಿಂತಿಸಿದ್ದು, ಸದ್ಯದಲ್ಲೇ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ.

ರಾಜ್ಯ ಸರಕಾರ ಪ್ರಸ್ತಾವವನ್ನು ಜಾರಿಗೊಳಿಸಿದರೆ ಮುಂದಿನ ದಿನಗಳಲ್ಲಿ ಕನಿಷ್ಠ ಮಿತಿಗಿಂತ ಕಡಿಮೆ ಅಳತೆಯ ಕೃಷಿ ಭೂಮಿಗೆ 11ಇ ಕಂದಾಯ ನಕ್ಷೆ, ಪೋಡಿ, ಆರ್‌ಟಿಸಿ ಪಡೆದು ಮನೆ ಇಲ್ಲವೇ ಇತರ ಕೃಷಿಯೇತರ ಚಟುವಟಿಕೆಗೆ ಬಳಸಲಾಗದು. ಆದರೆ ಕನಿಷ್ಠ ಮಿತಿಗಿಂತ ಹೆಚ್ಚು ವಿಸ್ತೀರ್ಣದ ಭೂಮಿ ಮತ್ತು ಭೂಪರಿವರ್ತನೆಯಾದ ಭೂಮಿಯನ್ನು ಈಗಿರು ವಂತೆಯೇ ಯಾವುದೇ ಅಳತೆಯಲ್ಲಿ ಮಾರಾಟ, ಖರೀದಿಗೆ ನೋಂದಣಿ ಮಾಡಬಹುದು.

ರಿಯಲ್‌ ಎಸ್ಟೇಟ್‌ ದಂಧೆ
ನಗರೀಕರಣ ಹೆಚ್ಚಾಗುತ್ತಿದ್ದಂತೆ ಕೃಷಿ ಭೂಮಿ ಯನ್ನು ಅಕ್ರಮವಾಗಿ ಕೃಷಿಯೇತರ ಚಟುವಟಿಕೆಗೆ ಬಳಸಲಾಗುತ್ತಿದೆ. ಒಂದೆರಡು ಗುಂಟೆ ಕೃಷಿ ಭೂಮಿ ಖರೀದಿಸಿ ಮನೆಗಳನ್ನು ನಿರ್ಮಿಸಿಕೊಳ್ಳಲಾಗುತ್ತಿದೆ.ಇದು ರಿಯಲ್‌ ಎಸ್ಟೇಟ್‌ ದಂಧೆಗೂ ಕಾರಣವಾಗಿದೆ. ಜತೆಗೆ ಎಲ್ಲೆಂದರಲ್ಲಿ ಮನೆಗಳು, ಗುಂಪು ಮನೆಗಳು ನಿರ್ಮಾಣವಾಗುತ್ತಿರುವುದರಿಂದ ಒಳಚರಂಡಿ ವ್ಯವಸ್ಥೆ, ತ್ಯಾಜ್ಯ ವಿಲೇವಾರಿ ಸಮಸ್ಯೆ ತಲೆದೋರುತ್ತಿದ್ದು, ನೈರ್ಮಲ್ಯ ಕೆಡುವ ಆತಂಕ ಎದುರಾಗಿದೆ.

ಸದ್ಯ ತುಂಡು ಅಳತೆಯ ಕೃಷಿ ಭೂಮಿ ಖರೀದಿಸಿ ಅದಕ್ಕೆ ಪ್ರತ್ಯೇಕ 11ಇ ನಕ್ಷೆ ಪಡೆದು ಬಳಿಕ ಪೋಡಿ ಮಾಡಿಸಿ ಆರ್‌ಟಿಸಿ ಪಡೆಯಲು ಅವಕಾಶವಿದೆ. ಇದರಿಂದ ಕೃಷಿ ಭೂಮಿ ನೆಪದಲ್ಲಿ ಭೂಮಿ ಖರೀದಿಸಿ ರೆವೆನ್ಯೂ ನಿವೇಶನಗಳಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಇದರಿಂದ ಒಂದೆಡೆ ಕೃಷಿ ಭೂಮಿ ಪ್ರಮಾಣಇಳಿಕೆಯಾದರೆ ಇನ್ನೊಂದೆಡೆ ಅವ್ಯವಸ್ಥಿತ ರೀತಿಯಲ್ಲಿ ಬೆಳವಣಿಗೆಯಾಗಿ ಭವಿಷ್ಯದಲ್ಲಿ ಇನ್ನಷ್ಟು ಸಮಸ್ಯೆಗಳು ತಲೆದೋರುವ ಭೀತಿ ಕಾಡುತ್ತಿದೆ.

ನೋಂದಣಿಗೆ ಕನಿಷ್ಠ ಮಿತಿ
ಕೃಷಿ ಭೂಮಿ ಮಾರಾಟ, ಖರೀದಿ ನೋಂದಣಿಗೆ ಕನಿಷ್ಠ ಮಿತಿ ನಿಗದಿಪಡಿಸುವ ಬಗ್ಗೆ ಕಂದಾಯ ಇಲಾಖೆ ಹಿಂದಿನಿಂದಲೂ ಚಿಂತನೆ ನಡೆಸಿತ್ತು. ಅದರಂತೆ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ 3 ಗುಂಟೆ (7.5 ಸೆಂಟ್ಸ್‌) ಹಾಗೂ ಕರಾವಳಿಯೇತರ ಜಿಲ್ಲೆಗಳಲ್ಲಿ 5 ಗುಂಟೆ ಮಿತಿ ನಿಗದಿಪಡಿಸಲು ಕಂದಾಯ ಇಲಾಖೆ ಈಗಾಗಲೇ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.

ಕೃಷಿ ಚಟುವಟಿಕೆ ಅಸಾಧ್ಯ
ಅರ್ಧ ಗುಂಟೆ, ಒಂದೆರಡು ಗುಂಟೆಯಷ್ಟು ಚಿಕ್ಕ ಜಾಗದಲ್ಲಿ ಕೃಷಿ ಚಟುವಟಿಕೆ ನಡೆಸುವುದು ಅಸಾಧ್ಯ ಎಂಬುದು ಎಲ್ಲರಿಗೂ ಗೊತ್ತಿದೆ. ಹಾಗಿದ್ದರೂ ಕಾನೂನಿನಲ್ಲಿ ಅವಕಾಶವಿರುವ ಕಾರಣ ನೋಂದಣಿ ನಡೆಯುತ್ತಿದೆ. ಹಾಗಾಗಿ ಕೃಷಿ ಭೂಮಿ ಪ್ರಮಾಣ ಕಡಿಮೆಯಾಗುತ್ತಿದ್ದು, ನಗರೀಕರಣಕ್ಕೆ ಇನ್ನಷ್ಟು ಉತ್ತೇಜನ ನೀಡಿದಂತಾಗಿದೆ. ಸರಕಾರ ಕನಿಷ್ಠ ಮಿತಿ ನಿಗದಿಪಡಿಸಿ ಕಟ್ಟು ನಿಟ್ಟಾಗಿ ಜಾರಿಗೆ ತಂದರೆ ಇದಕ್ಕೆ ನಿಯಂತ್ರಣ ಹಾಕಲು ನೆರವಾಗಲಿದೆ ಎನ್ನುತ್ತವೆ ಮೂಲಗಳು.

ಮಿತಿ ಹೆಚ್ಚಳಕ್ಕೆ ಚಿಂತನೆ
ಕರಾವಳಿ ಜಿಲ್ಲೆಗಳು ಮತ್ತು ಕರಾವಳಿಯೇತರ ಜಿಲ್ಲೆಗಳಲ್ಲಿ ಕನಿಷ್ಠ ಮಿತಿ ನಿಗದಿಪಡಿಸಿ ಪ್ರಸ್ತಾವ ಸಲ್ಲಿಸಲಾಗಿದೆ. ಆದರೆ ಸರಕಾರ ಪ್ರಸ್ತಾವಿತ ಕನಿಷ್ಠ ಮಿತಿಯನ್ನು ಮಾರ್ಪಡಿಸಲು ಚಿಂತನೆ ನಡೆಸಿದೆ. ಕೊಡಗು ಸೇರಿದಂತೆ ಕರಾವಳಿಯಲ್ಲಿ 3ರ ಬದಲಿಗೆ 6 ಗುಂಟೆ (15 ಸೆಂಟ್ಸ್‌) ಮತ್ತು ಇತರ ಜಿಲ್ಲೆಗಳಲ್ಲಿ 5 ಗುಂಟೆಗೆ ಬದಲಾಗಿ 10 ಗುಂಟೆ ಮಿತಿ ನಿಗದಿಪಡಿಸುವ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳು ಹೇಳಿವೆ.

ಬೇಕಾಬಿಟ್ಟಿ ನಗರೀಕರಣಕ್ಕೆ ತಡೆ
ಕಡಿಮೆ ಅಳತೆಯ ಕೃಷಿ ಭೂಮಿ ಪಡೆದು ಅದನ್ನು ಕೃಷಿಯೇತರ ಚಟುವಟಿಕೆಗೆ ಬಳಸುವುದು ಹೆಚ್ಚಾಗಿದೆ. ಇದರಿಂದ ಅವ್ಯವಸ್ಥಿತ ನಗರೀಕರಣಕ್ಕೆ ಅವಕಾಶ ಕೊಟ್ಟಂತಾಗುತ್ತದೆ. ಆ ಹಿನ್ನೆಲೆಯಲ್ಲಿ ಕನಿಷ್ಠ ಭೂಮಿ ಮಿತಿ ನಿಗದಿಪಡಿಸುವ ಸಂಬಂಧ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಸರಕಾರದ ನಿರ್ಧಾರ ಆಧರಿಸಿ ಕ್ರಮ ಕೈಗೊಳ್ಳಲಾಗುವುದು.
– ಎನ್‌. ಮಂಜುನಾಥ ಪ್ರಸಾದ್‌, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.