ತೀವ್ರ ಸ್ವರೂಪ ಪಡೆದ ಸಾರಿಗೆ ನೌಕರರ ಮುಷ್ಕರ: ಅಧಿಕಾರಿಗಳ ಮನವಿ ಯತ್ನ ವಿಫಲ

ನಿಲ್ದಾಣದಲ್ಲೇ ಆಹಾರ ಸೇವಿಸಿ ಧರಣಿ: ರಸ್ತೆಗಿಳಿಯದ ಬಸ್, ಜನರ ಪರದಾಟ

Team Udayavani, Dec 12, 2020, 7:18 PM IST

bidara-saarige

ಬೀದರ್:  ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ಕರೆ ನೀಡಿರುವ ಸಾರಿಗೆ ಮುಷ್ಕರ ಶನಿವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಗಡಿ ಜಿಲ್ಲೆ ಬೀದರ್ ನಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ರಸ್ತೆಗೆ ಬಸ್‌ಗಳು ಇಳಿಯದ ಹಿನ್ನಲೆ ಪ್ರಯಾಣಿಕರು ಪರದಾಟ ಮುಂದುವರೆದಿದೆ.

ಮುಷ್ಕರದ ಹಿನ್ನೆಲೆಯಲ್ಲಿ ನಗರದ ಸೇರಿದಂತೆ ಜಿಲ್ಲೆಯಾದ್ಯಂತ ಬಸ್ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಶುಕ್ರವಾರ ಅಧಿಕಾರಿಗಳ ನೋಟಿಸ್ ಬೆದರಿಕೆಗೆ ಹೆದರಿದ್ದ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದರಿಂದ ಅರ್ಧಕ್ಕಿಂತ ಹೆಚ್ಚು ಬಸ್‌ಗಳ ಕಾರ್ಯಾಚರಣೆ ನಡೆದಿತ್ತು. ಶನಿವಾರವೂ ಸಹ ಎನ್‌ಈಕೆಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ನೌಕರರ ಮನವೊಲಿಕೆಗೆ ಪ್ರಯತ್ನಿಸಿದರಾದರೂ ಫಲ ಸಿಗಲಿಲ್ಲ. ಬಹುತೇಕ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮುಷ್ಕರ ನಡೆಸಿದ್ದಾರೆ.

ಬಸ್ ಬಂದ್ ಹಿನ್ನಲೆಯಲ್ಲಿ ಬಸ್‌ಗಳು ನಿಲ್ದಾಣಗಳಲ್ಲೇ ಬೀಡು ಬಿಟ್ಟಿದ್ದರೆ, ಪ್ರಯಾಣಿಕರಿಲ್ಲದೇ ಬಿಕೋ ಎನ್ನುತ್ತಿತ್ತು. ಮಾಹಿತಿ ಇಲ್ಲದೇ ನಿಲ್ದಾಣಗಳತ್ತ ಆಗಮಿಸಿದ್ದ ಪ್ರಯಾಣಿಕರು, ಬಸ್‌ಗಳ ಓಡಾಟ ಇಲ್ಲದನ್ನು ಗಮನಿಸಿ ಅನಿವಾರ್ಯವಾಗಿ ವಾಪಸ್ ತೆರಳಬೇಕಾಯಿತು. ಇನ್ನೂ ಮುಷ್ಕರ ನಿರತ ಸಾರಿಗೆ ನೌಕರರು ನಿಲ್ದಾಣದ ಮುಖ್ಯ ಗೇಟ್‌ಗಳನ್ನು ಬಂದ್ ಮಾಡಿ ಪೆಂಡಾಲ್ ಹಾಕಿ ಧರಣಿ ಕುಳಿತಿದ್ದು, ಮಧ್ಯಾಹ್ನದ ವೇಳೆಗೆ ಆವರಣದಲ್ಲೇ ಅಡುಗೆ ಸಿದ್ಧಪಡಿಸಿ ಸೇವನೆ ಮಾಡುವ ಮೂಲಕ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.

ಇದನ್ನೂ ಓದಿ: ನಮ್ಮ ಪ್ರತಿಭಟನೆಯಲ್ಲಿ ಯಾವುದೇ ದೇಶವಿರೋಧಿ ಶಕ್ತಿಗಳು ಸೇರಿಕೊಂಡಿಲ್ಲ: ಕಿಸಾನ್ ಯೂನಿಯನ್

ಸಿಬ್ಬಂದಿಗಳ ಧರಣಿ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಜಿಲ್ಲಾ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಕಾಂತ ಸ್ವಾಮಿ, ಕನ್ನಡಾಂಬೆ ಗೆಳೆಯರ ಬಳಗದ ಅಧ್ಯಕ್ಷ ವಿರೂಪಾಕ್ಷ ಗಾದಗಿ ಮತ್ತು ಸರ್ಕಾರಿ-ಅರೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜಕುಮಾರ ಪಾಟೀಲ ಮತ್ತಿತರರು ಭೇಟಿ ನೀಡಿ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮುಂದುವರಿದ ಪ್ರತಿಭಟನೆ: ಕೃಷಿ ಕಾಯ್ದೆಯಿಂದ ರೈತರಿಗೆ ಹೊಸ ಮಾರುಕಟ್ಟೆ, ತಂತ್ರಜ್ಞಾನ ಲಭ್ಯ

ಸಿಬ್ಬಂದಿ ಒತ್ತಡ ಹಾಕಿಲ್ಲ:

ಬೀದರ್ ಜಿಲ್ಲೆಯಲ್ಲಿ ನಿತ್ಯ 475 ಬಸ್‌ಗಳ ಕಾರ್ಯಾಚರಣೆ ಇದ್ದು, ಶನಿವಾರ ಕೇವಲ 46 ಬಸ್‌ಗಳು ಮಾತ್ರ ಓಡಾಡಿವೆ. ಔರಾದ್ ನಿಂದ ದೇಗಲೂರಿಗೆ ಬಸ್ ಕಾರ್ಯಾಚರಣೆ ನಡೆಸಿದ್ದ ಔರಾದ ಘಟಕದ ಬಸ್ ಚಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚಾಲಕನಿಗೆ ನೌಕರರು ಯಾವುದೇ ರೀತಿಯ ಒತ್ತಡ ಹಾಕಿರಲಿಲ್ಲ. ಕರ್ತವ್ಯಕ್ಕೆ ಹಾಜರಾಗಿದ್ದ ವೇಳೆ ಈ ಘಟನೆ ನಡೆದಿದೆ.

 ಸಿ.ಎಸ್ ಫುಲೇಕರ್

ಎನ್‌ಈಕೆಆರ್‌ಟಿಸಿ ಡಿಸಿ, ಬೀದರ್

25 ಸಾವಿರ ಸಹಾಯ ಧನ

ಮಹಾರಾಷ್ಟ್ರದ ದೇಗಲೂರಿನಲ್ಲಿ ಕರ್ತವ್ಯದಲ್ಲಿ ನಿರತರಾಗಿದ್ದ ವೇಳೆ ಹೃದಯಾಘಾತದಿಂದ ಔರಾದ ಘಟಕದ ಬಸ್ ಚಾಲಕ ಮಕ್ಬೂಲ್ ಚಾಂದ್ ಮೃತಪಟ್ಟಿರುವ ಘಟನೆ ನೋವಿನ ಸಂಗತಿ. ಚಾಲಕನ ಕುಟುಂಬಕ್ಕೆ ವ್ಯೆಯಕ್ತಿಕವಾಗಿ 25 ಸಾವಿರ ರೂ. ಸಹಾಯ ಧನ ನೀಡುತ್ತೇನೆ ಮತ್ತು ಸರ್ಕಾರದಿಂದ 10 ಲಕ್ಷ ರೂ. ಪರಿಹಾರ ಮಂಜೂರಾತಿಗೆ ಪ್ರಯತ್ನಿಸುತ್ತೇನೆ.

ಅರವಿಂದ ಅರಳಿ

ಎಂಎಲ್‌ಸಿ, ಬೀದರ್

ಇದನ್ನೂ ಓದಿ: ಅಧಿಕಾರಿಗಳ ಒತ್ತಡಕ್ಕೆ ಮಣಿದು ಕೆಲಸಕ್ಕೆ ಹಾಜರಾದ ಬಸ್ ಚಾಲಕ ಹೃದಯಾಘಾತದಿಂದ ಸಾವು

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.