ಇಂದು ಸುಬ್ರಹ್ಮಣ್ಯ(ಸ್ಕಂದ) ಷಷ್ಠಿ ಸಂಭ್ರಮ


Team Udayavani, Dec 20, 2020, 6:40 AM IST

ಇಂದು ಸುಬ್ರಹ್ಮಣ್ಯ(ಸ್ಕಂದ) ಷಷ್ಠಿ ಸಂಭ್ರಮ

ಮಾರ್ಗಶಿರ ಶುದ್ಧ ಷಷ್ಠಿ ದಿನವಾದ ರವಿವಾರ ನಾಡಿನೆಲ್ಲೆಡೆ ಸ್ಕಂದ, ಷಣ್ಮುಖ, ಕಾರ್ತಿಕೇಯ, ಕುಮಾರ…ಎಂಬೆಲ್ಲ ಹೆಸರುಗಳಿಂದ ಕರೆಯಲ್ಪಡುವ ಶ್ರೀ ಸುಬ್ರಹ್ಮಣ್ಯನ ಪರ್ವ ದಿನ. ಸುಬ್ರಹ್ಮಣ್ಯನ ದೇಗುಲಗಳಲ್ಲಿ, ನಾಗಾರಾಧನೆಯ ತಾಣಗಳಲ್ಲೂ ಇಂದು ನಾಗನಿಗೆ ವಿಶೇಷ ಪೂಜೆ, ಸೇವೆಗಳು ನಡೆಯುತ್ತವೆ. ವರ್ಷಂಪ್ರತಿಯಂತೆ ಈ ಬಾರಿಯೂ ಷಷ್ಠಿ ಮಹೋತ್ಸವದ ಆಚರಣೆಗೆ ನಾಡಿನೆಲ್ಲೆಡೆಯ ಅದರಲ್ಲೂ ನಾಗಾರಾಧನೆಯ ಕೇಂದ್ರ ಸ್ಥಾನವಾದ ರಾಜ್ಯದ ಕರಾವಳಿಯ ಸುಬ್ರಹ್ಮಣ್ಯ ದೇಗುಲಗಳು ಮತ್ತು ನಾಗ ಕ್ಷೇತ್ರಗಳು ಸಜ್ಜಾಗಿವೆ. ಕೋವಿಡ್‌ ಹಿನ್ನೆಲೆಯಲ್ಲಿ ಈ ಬಾರಿ ದೇಗುಲಗಳಲ್ಲಿ ಪೂರ್ವಶಿಷ್ಟ ಸಂಪ್ರದಾಯದ ಪ್ರಕಾರ ಷಷ್ಠಿ ಮಹೋತ್ಸವವನ್ನು ಸರಕಾರದ ನಿಯಮಾವಳಿಯಂತೆ ಆಚರಿಸಲು ಸಕಲ ಸಿದ್ಧತೆಗಳು ನಡೆದಿವೆ.

ನಾರಾಯಣನ ಮಗ ಮನ್ಮಥ (ಕಾಮ)ನೇ ಚತುರ್ಮುಖನ ಮಗ ಸನತುRಮಾರನು. ಇವನೇ ಶಿವಪಾರ್ವತಿಯರ ಮಗ ಸುಬ್ರಹ್ಮಣ್ಯ. ಇವನಿಗೆ ಆರು ಮುಖವಿರುವ ಕಾರಣ ಷಣ್ಮುಖನು ಎನಿಸಿದ್ದಾನೆ.

ದೇವತೆಗಳ ಸೇನೆಯ ಒಡೆಯನೀತ ದೇವಸೇನಾಪತಿ. ಯೋಗ್ಯತೆಯಲ್ಲಿ ಇಂದ್ರ ನಿಗೆ ಸಮ. ಅಂದರೆ-ನಾರಾಯಣ ಲಕ್ಷ್ಮೀ ವಿಧಿ, ವಾಯು, ಸರಸ್ವತೀ, ಭಾರತೀ, ಗರುಡ ಶೇಷ ರುದ್ರ, ಷಣ್ಮಹಿಷಿಯರು ಸುಪರ್ಣೀ ವಾರುಣೀ ಪಾರ್ವತಿಯರಿಗಿಂತ ಮಾತ್ರ ಕಿರಿಯನು. ಸೂರ್ಯ, ಚಂದ್ರ, ಯಮ, ವರುಣ, ಅಗ್ನಿ, ಗುರು, ಗಣಪ, ಶನಿ, ವಾಸುಕಿ, ತಕ್ಷಕ ಮುಂತಾದ ಉಳಿದ ದೇವತೆಗಳೆಲ್ಲರೂ ಇವನಿಗಿಂತ ಕಿರಿಯರು.

ಈತನ ವಾಹನ – ಮಯೂರ, ಧ್ವಜ- ಕುಕ್ಕುಟ, ಪ್ರಧಾನ ಶಿಷ್ಯ- ನಾರದ, ಮುಖ್ಯ ಆಯುಧ – ಶಕ್ತಿ, ಅವತಾರ – ಭರತ (ರಾಮನ ತಮ್ಮ), ಪ್ರದ್ಯುಮ್ನ (ಕೃಷ್ಣನ ಮಗ). ಚಕ್ರ, ಶಂಖ ಮೊದಲಾದ ಭಗವಂತನ ಆಯುಧಗಳೆಲ್ಲವೂ ಭಗವಂತನ ರೂಪಗಳೇ ಆಗಿವೆ. ಅವು ಚಿನ್ಮಯಗಳು. ಹಾಗೆಯೇ ಭಗವಂತನ ಆಯುಧಗಳೂ ಆಭರಣಗಳೂ ಎಲ್ಲವೂ ಲಕ್ಷ್ಮೀ ಸ್ವರೂಪಗಳೂ ಆಗಿರುತ್ತವೆ. ಅವೂ ಚಿನ್ಮಯಗಳೇ.

ಸುದರ್ಶನ ಚಕ್ರ ದೇವತೆಯಾಗಿ ದೇವತೆಗಳ ರಕ್ಷಣೆ ಯಲ್ಲಿ ದೇವಸೇನಾ – ಪನಾದ ಸುಬ್ರಹ್ಮಣ್ಯನು ಭಗವಂತನ ಕೈಯಲ್ಲಿ ಮೆರೆ ಯುತ್ತಿರುವನು. ಹೀಗಾಗಿ ಮಾರ್ಗ ಶಿರ ಶುದ್ಧ ಷಷ್ಠಿಯಂದು ಈತನನ್ನು ಆರಾಧನೆಗೈಯಬೇಕು. ಆ ದಿನವನ್ನು ಚಂಪಾಷಷ್ಠಿ ಎಂದೂ ಕರೆಯುತ್ತಾರೆ. ಚಂಪಾಷಷ್ಠಿಯಂದು ಸುಬ್ರಹ್ಮಣ್ಯ, ನಾಗ ದೇವರ ಸನ್ನಿಧಿಗಳಲ್ಲಿ ವಿಶೇಷ ಪೂಜೆ ಪುರಸ್ಕಾರಗಳು ನಡೆಯುತ್ತವೆ. ಈತನಿಗೆ ನಿವೇದಿಸಿದ ಪ್ರಸಾದಗಳನ್ನು ಭಕ್ತಿಯಿಂದ ಸ್ವೀಕರಿಸುತ್ತಾರೆ.

ಪರಿವಾರ ದೇವತೆಗಳು
ವಿರಿಂಚನು ದೇವತೆಗಳ ಸೇನಾಪತ್ಯದಲ್ಲಿ ಸ್ಕಂದನನ್ನು ಅಭಿಷೇಕಗೈದಾಗ ನಾರಾಯ ಣನು ಚಕ್ರ ವಿಕ್ರಮ ಸಂಕ್ರಮರನ್ನು ಪಾರಿಷದರನ್ನಾಗಿ ಸ್ಕಂದನಿಗೆ ನೀಡಿದನು. ಅದರಂತೆ ಉಳಿದ ಬ್ರಹ್ಮ, ವಾಯು, ಶಿವ, ಪಾರ್ವತಿ, ಅಗ್ನಿಯೇ ಮೊದಲಾದ ದೇವತೆ ಗಳೆಲ್ಲರೂ ಸೇವಕರನ್ನು ಕಾಣಿಕೆಯಿತ್ತರು.

ಸುಬ್ರಹ್ಮಣ್ಯನ ಆರಾಧನೆ
ಶಿವನ ತೇಜಸ್ಸನ್ನು ಅಗ್ನಿ ಸಹಿಸಲಾಗದೆ ಗಂಗೆಯಲ್ಲಿ ಚೆಲ್ಲಿದನು. ಗಂಗೆ ಧಾರಣೆ ಮಾಡಲಾಗದೆ ಹಿಮಾಲಯದ ತಪ್ಪಲಲ್ಲಿ ಹುಲ್ಲಿನ ಹಾಸಿನಲ್ಲಿ ಒರೆಸಿದಳು. ಬಿದಿಗೆಯಲ್ಲಿ ಬೆಳಕು ಕಂಡ ತದಿಗೆಯಲ್ಲಿ ಮಗುವಾದ ಚೌತಿಯಲ್ಲಿ ತುಂಬಿನಿಂತ ಮಗುವಿನ ಬಳಿಗೆ ಬಂದು ಆರು ಕೃತ್ತಿಕೆ ಯರು ಹಾಲುಣಿಸಿದರು. ಪಂಚಮಿ ಯಂದು ಎಲ್ಲ ದೇವತೆಯರು ಸ್ತುತಿಸಿದ್ದಾರೆ. ಪಕ್ಕದ ಬೆಟ್ಟಗಳು ಮಗುವಿನ ತೇಜಸ್ಸಿನಿಂದ ಬಂಗಾರವಾದವು. ಅಗ್ನಿ ಪುತ್ರನಾದ ಸ್ಕಂದನ ಈ ದಿವ್ಯಶಕ್ತಿಗಾಗಿ ಸುವರ್ಣದಾನವನ್ನು ವಿಧಿಸಿದ್ದಾರೆ.
ಷಷ್ಠಿಯಂದು ಸರಸ್ವತೀ ತೀರದಲ್ಲಿ ಅಭಿಷಿಕ್ತನಾದ ಸ್ಕಂದನಿಗೆ ವಿಧಿ ಕೃಷ್ಣಾಜಿನ ವನ್ನು ಕೊಟ್ಟನು. ವಿಷ್ಣು ವೈಜಯಂತಿ ಮಾಲೆ ನೀಡಿದ. ರುದ್ರ ಮಹಾಘಂಟೆ, ಪತಾಕೆ, ಮೂವತ್ತು ಸಾವಿರ ಯೋಧರ ಧನಂಜಯ ಸೇನೆ ನೀಡಿದ. ಪಾರ್ವತಿ ಕೆಂಪೆರಡು ಬಟ್ಟೆ ನೀಡಿದಳು. ಗರುಡನು ಮಯೂರನನ್ನು ನೀಡಿದ. ಇಂದ್ರ ಭದ್ರ ಶಾಖಾ ಎಂಬ ಶಕ್ತಿ ಆಯುಧ ನೀಡಿದ. ಅರುಣ ತಾಮ್ರಚೂಡನೆಂಬ ಕೆಂಪುಕೋಳಿಯನ್ನು ನೀಡಿದ. ಹಿಮಾಲಯ ರತ್ನಪೀಠ ನೀಡಿದ. ವಿಶ್ವಾಮಿತ್ರ ಸಂಸ್ಕಾರ ಮಾಡಿದ. ಗುರು ಅಭಿಷೇಕದ ಹೋಮ ಮಾಡಿ ದಂಡ ನೀಡಿದ. ಗಂಗೆ ಕಮಂಡಲು ಕೊಟ್ಟಳು.

ಇಂದ್ರ ನೀಡಿದ ದೇವಸೇನೆ ಯಾದ ಷಷ್ಠಿàದೇವಿಯನ್ನು ಮಡದಿಯನ್ನಾಗಿ ಪಡೆದ ಸ್ಕಂದನು ಎಲ್ಲ ದೇವತೆ ಗಳ ಸಹಾಯದಿಂದ ಬಹು ರೂಪದ ಬಹುಭಾಷೆಯ ತನ್ನ ಅನುಯಾಯಿ ಗಳಿಂದ ಕೂಡಿಕೊಂಡು ಲಕ್ಷದೈತ್ಯರೊಡನೆ ಬಂದ ತಾರಕನನ್ನು, ಅಷ್ಟಪದ್ಮದೈತ್ಯರ ಮಹಿ ಷನನ್ನು, ಕೋಟಿದೈತ್ಯರ ತ್ರಿಪಾದನನ್ನು, ದಶನಿಖರ್ವ ದೈತ್ಯರ ಹ್ರದೋದರನನ್ನೂ ಸಂಹರಿಸಿ ಲೋಕಕ್ಕೆ ಮಂಗಳವನ್ನು ನೀಡಿದ. ಷಷ್ಠಿಯಂದು ಸುಬ್ರಹ್ಮಣ್ಯನನ್ನು ಅವ ನೊಳಗಿನ ಪ್ರದ್ಯುಮ್ನ ನಾರಾಯಣನನ್ನು ಪ್ರಾರ್ಥಿಸಿರಿ.

– ಡಾ| ರಾಮನಾಥ ಆಚಾರ್ಯ

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasas

ಸೌರ ಯುಗಾದಿ; ಜೀವನೋತ್ಸಾಹ, ನವಚೈತನ್ಯ ತುಂಬುವ ಹಬ್ಬ ವಿಷು

PAK: ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಐತಿಹಾಸಿಕ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ ಪಾಕ್!

PAK: ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಐತಿಹಾಸಿಕ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ ಪಾಕ್!

Union Territory: 6 ಕೇಂದ್ರಾಡಳಿತ ಪ್ರದೇಶದಲ್ಲಿ 6 ಸೀಟು ಯಾರಿಗೆ?

Union Territory: 6 ಕೇಂದ್ರಾಡಳಿತ ಪ್ರದೇಶದಲ್ಲಿ 6 ಸೀಟು ಯಾರಿಗೆ?

Lok Sabha Election: ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ

Lok Sabha Election: ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ

1-qwewqew

ಮರಳಿ ಬಂದಿದೆ ಯುಗಾದಿ: ಹೊಸ ಸಂವತ್ಸರದ ಹುರುಪು, ನವ ಬೆಳಕಿನ ಆಶಯ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.