ಕಾಶಿಯಾತ್ರೆಗೆ ಸಹಾಯಧನ: ಸಚಿವೆ ಶಶಿಕಲಾ ಜೊಲ್ಲೆ
Team Udayavani, Apr 19, 2022, 10:30 PM IST
ಬೆಂಗಳೂರು: ರಾಜ್ಯದ ಆಸಕ್ತ ಯಾತ್ರಾರ್ಥಿಗಳಿಗೆ ಸರಕಾರದ ಸಹಾಯಧನದೊಂದಿಗೆ ಕಾಶಿಯಾತ್ರೆ ಕೈಗೊಳ್ಳಲು ಅವಕಾಶ ಕಲ್ಪಿಸಲಾಗುತ್ತದೆ. ಈ ಕುರಿತು ಸರಕಾರ ಆದೇಶ ಹೊರಡಿಸಿದೆ ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಪ್ರಧಾನಿ ಮೋದಿಯವರು ಉತ್ತರಪ್ರದೇಶದ ವಾರಾಣಸಿಯ ಪುರಾತನ ಕಾಶಿ ಶ್ರೀ ವಿಶ್ವನಾಥ ಮಂದಿರವನ್ನು ವಿಶಿಷ್ಟ ರೀತಿಯಲ್ಲಿ ಜೀರ್ಣೋದ್ಧಾರ ಮಾಡುವ ಮೂಲಕ “ದಿವ್ಯಕಾಶಿ-ಭವ್ಯಕಾಶಿ’ ಎಂಬ ಅಭಿಧಾನ ದೊರೆಯುವಂತೆ ಮಾಡಿದ್ದಾರೆ.
ರಾಜ್ಯದ ಸಾವಿರಾರು ಯಾತ್ರಾರ್ಥಿಗಳು ಭವ್ಯಕಾಶಿಗೆ ಭೇಟಿ ನೀಡಿ ಶ್ರೀ ವಿಶ್ವನಾಥನ ದರ್ಶನ ಪಡೆಯಲು ಅನುಕೂಲವಾಗುವಂತೆ ಕಾಶಿಯಾತ್ರೆ ಯೋಜನೆ ರೂಪಿಸಲಾಗಿದೆ. ಪ್ರತೀ ವರ್ಷ ರಾಜ್ಯದ 30 ಸಾವಿರ ಯಾತ್ರಿಗಳು ಸರಕಾರದ ಸಹಾಯಧನ ಪಡೆದು ಕಾಶಿಗೆ ತೆರಳಬಹುದಾಗಿದೆ. ಪ್ರತಿಯೊಬ್ಬ ಯಾತ್ರಿಗೆ 5 ಸಾವಿರ ರೂ. ಸಹಾಯಧನ ನೀಡಲಾಗುವುದು ಎಂದಿದ್ದಾರೆ.
ಇದನ್ನೂ ಓದಿ:ಬಂಡೀಪುರ ಸಂರಕ್ಷಿತ ಪ್ರದೇಶದಲ್ಲಿ ಅವಳಿ ಮರಿಗಳಿಗೆ ಜನ್ಮ ನೀಡಿದ ಆನೆ!
ಈ ಬಗ್ಗೆ ಸರಕಾರ ಆದೇಶ ಹೊರಡಿಸಿದ್ದು, ಶೀಘ್ರದಲ್ಲಿಯೇ ಆಸಕ್ತ ಯಾತ್ರಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗುವುದು ಎಂದು ತಿಳಿಸಿದ್ದಾರೆ.
ಪಂಡರಾಪುರದಲ್ಲಿ ಅತಿಥಿ ಗೃಹ ನಿರ್ಮಾಣ:
ನೆರೆಯ ಮಹಾರಾಷ್ಟ್ರದ ಪಂಡರಾಪುರ ಶ್ರೀಕ್ಷೇತ್ರಕ್ಕೆ ರಾಜ್ಯದಿಂದ ಸಾವಿರಾರು ಮಂದಿ ಭಕ್ತಾದಿಗಳು ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಹೆಚ್ಚಿನ ಜನರು ಭೇಟಿ ನೀಡುತ್ತಾರೆ. ಈ ಭಕ್ತಾದಿಗಳ ಅನುಕೂಲಕ್ಕಾಗಿ ಪಂಡರಾಪುರದಲ್ಲಿ ಅತಿಥಿಗೃಹ ನಿರ್ಮಾಣ ಮಾಡಲಾಗುವುದು ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಅ. ಜೊಲ್ಲೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ