ಡಿಎಪಿ ಮತ್ತು ಯೂರಿಯಾ ರಹಿತ ರಸಗೊಬ್ಬರದ ಮೇಲಿನ ಸಬ್ಸಿಡಿ ಏರಿಕೆ
Team Udayavani, Jun 17, 2021, 7:00 AM IST
ಹೊಸದಿಲ್ಲಿ : ದೇಶದಲ್ಲಿ ಬಹಳಷ್ಟು ರೈತರು ಉಪಯೋಗಿಸುವ ಡಿಎಪಿ ಮತ್ತು ಯೂರಿಯಾ ರಹಿತ ರಸಗೊಬ್ಬರದ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರಕಾರ ಏರಿಕೆ ಮಾಡಿದೆ.
ಕಳೆದ ತಿಂಗಳೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಸಮಿತಿ ರಸಗೊಬ್ಬರದ ಮೇಲಿನ ಸಬ್ಸಿಡಿಯನ್ನು ಶೇ. 140ರಷ್ಟು ಏರಿಕೆ ಮಾಡಲು ನಿರ್ಧರಿಸಿತ್ತು. ಅದರಂತೆ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಡಿಎಪಿ ಮತ್ತು ಯೂರಿಯಾ ರಹಿತ ರಸಗೊಬ್ಬರದ ಮೇಲಿನ ಸಬ್ಸಿಡಿ ಹೆಚ್ಚಳ ಮಾಡಲು ನಿರ್ಧಾರ ತೆಗೆದುಕೊಂಡಿತು.
ಈ ನಿರ್ಧಾರದಿಂದಾಗಿ ರೈತರಿಗೆ ಪ್ರತೀ ಬ್ಯಾಗ್ ಡಿಎಪಿ ಹಳೇ ದರ ಅಂದರೆ 1,200 ರೂ.ಗಳಿಗೇ ಸಿಗಲಿದೆ. ಪ್ರತೀ ಚೀಲ 50 ಕೆಜಿ ಇರಲಿದೆ. ಈ ಮೊದಲು ಡಿಎಪಿ ಮೇಲಿನ ಸಬ್ಸಿಡಿ ಪ್ರತಿ ಬ್ಯಾಗ್ಗೆ 500 ರೂ.ಗಳಿತ್ತು. ಆದರೆ ರಸಗೊಬ್ಬರ ಕಂಪೆನಿಗಳು ದರ ಏರಿಕೆ ಮಾಡಿದ್ದರಿಂದ ಡಿಎಪಿ ದರವೂ ಹೆಚ್ಚಾಗಿತ್ತು. ಇದನ್ನು ಮನಗಂಡ ಕೇಂದ್ರ ಸರಕಾರ ಸಬ್ಸಿಡಿಯನ್ನು 500ರಿಂದ 1,200 ರೂ.ಗಳಿಗೆ ಏರಿಸಿದೆ. ಈ ನಿರ್ಧಾರದಿಂದಾಗಿ ಬೊಕ್ಕಸಕ್ಕೆ 14,775 ರೂ. ಹೊರೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ