ಬಿಎಸ್‌ವೈ, ಸಿದ್ದು ತವರು ಭಾಗದ ಸಕ್ಕರೆ ಕಾರ್ಖಾನೆ ಉಳಿಸಿ

ಹೀಗೆ ಪಾಳು ಬಿಟ್ಟರೆ ಕಾರ್ಖಾನೆ ಇತಿಹಾಸ ಪುಟ ಸೇರಲಿದೆ..

Team Udayavani, Mar 5, 2021, 6:46 PM IST

Sugar Factory

ಕೆ.ಆರ್‌.ನಗರ: ಜಿಲ್ಲೆಯ ರೈತರ ಜೀವನಾಡಿ, ಲಕ್ಷಾಂತರ ಕಬ್ಬು ಬೆಳೆಗಾರರಿಗೆ ನೆರವಾಗಿದ್ದ ಪ್ರಸಿದ್ಧ ಚುಂಚನಕಟ್ಟೆ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ಕಳೆದ 9 ವರ್ಷಗಳಿಂದ ಸಂಪೂರ್ಣವಾಗಿ ಸ್ಥಗಿತವಾಗಿದೆ.

ಹಲವರ ಪರಿಶ್ರಮದಿಂದ ಸ್ಥಾಪಿತವಾಗಿದ್ದ ಕಾರ್ಖಾನೆ ಪುನಾರಂಭಕ್ಕೆ ಜನಪ್ರತಿನಿಧಿಗಳೂ ಇಚ್ಛಾಶಕ್ತಿ ತೋರುತ್ತಿಲ್ಲ. ಈಭಾಗದ ಜನರು ಕೂಡ ಧ್ವನಿ ಎತ್ತುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರಿದರೆ ಶ್ರೀರಾಮ ಸಕ್ಕರೆ ಕಾರ್ಖಾನೆ ಇತಿಹಾಸ ಪುಟಕ್ಕೆ ಸೇರಲಿದೆ.

1974ರಲ್ಲಿ 12 ಕೋಟಿ ರೂ. ಮೂಲ ಬಂಡವಾಳದೊಂದಿಗೆ ಮಾಜಿ ಶಾಸಕ ಕೆಂಚೇಗೌಡರ ನೇತೃತ್ವದಲ್ಲಿ ಆರಂಭವಾದ ಈ ಸಕ್ಕರೆ ಕಾರ್ಖಾನೆ ಲಾಭದಾಯಕವಾಗಿ ಮುನ್ನಡೆಯುತ್ತಿತ್ತು.ಆದರೆ, ಆಡಳಿತ ಮಂಡಳಿಗಳ ನಿರ್ವಹಣೆಯ ವೈಫ‌ಲ್ಯದಿಂದ ವರ್ಷದಿಂದ ವರ್ಷಕ್ಕೆ ಅವನತಿಯತ್ತ ಸಾಗಿತು. ಪ್ರಸಕ್ತ ಕಾರ್ಖಾನೆಯಲ್ಲಿ ಒಟ್ಟು 16 ಸಾವಿರ ಷೇರುದಾರ ಸದಸ್ಯರಿದ್ದು, ಕಾರ್ಖಾನೆ ಕೇವಲ ಕೆ.ಆರ್‌.ನಗರ ತಾಲೂಕು ಮಾತ್ರವಲ್ಲದೆ ಹುಣಸೂರು, ಪಿರಿಯಾಪಟ್ಟಣ, ಕೆ.ಆರ್‌.ಪೇಟೆಮತ್ತು ಎಚ್‌.ಡಿ.ಕೋಟೆ ತಾಲೂಕುಗಳ ಸಹಸ್ರಾರು ಕಬ್ಬು ಬೆಳೆಗಾರರು ಈ ಕಾರ್ಖಾನೆಯನ್ನೇ ಆಶ್ರಯಿಸಿದ್ದರು.

ಕಾರ್ಖಾನೆ ಕಾರ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ ತಾಲೂಕಿನಲ್ಲಿ 5 ಸಾವಿರ ರೈತರು 6-7ಸಾವಿರ ಹೆಕ್ಟೇರ್‌ ಭೂ ಪ್ರದೇಶದಲ್ಲಿ ಕಬ್ಬುಬೆಳೆಯುತ್ತಿದ್ದರು. ಅದು ಸ್ಥಗಿತಗೊಂಡ ನಂತರ ಕೇವಲ 3 ರಿಂದ 4 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ಅಲ್ಲದೆ ತಾವು ಬೆಳೆದ ಕಬ್ಬನ್ನು ಪಾಂಡವಪುರ, ಶ್ರೀನಿವಾಸಪುರ ಮತ್ತಿತರ ನೂರಾರು ಕಿಲೋ ಮೀಟರ್‌ ದೂರದಲ್ಲಿರುವ ಕಾರ್ಖಾನೆಗಳಿಗೆ ಸಾಗಿಸಲಾಗುತ್ತದೆ. ಇದರಿಂದ ರೈತರು ಹೆಚ್ಚು ಸಾಗಣೆ ವೆಚ್ಚ ಭರಿಸಬೇಕಾಗಿದೆ.

ಸಕ್ಕರೆ ಕಾರ್ಖಾನೆ ಹಿಂದಿನಿಂದಲೂ ರಾಜಕೀಯ ಮುಖಂಡರಿಗೆ ರಾಜಕಾರಣ ಮಾಡಲು ಅಸ್ತ್ರವಾಗಿ ಬಳಕೆಯಾಗುತ್ತಿದೆಯೇ ಹೊರತು ಶಾಶ್ವತ ಪರಿಹಾರ ಕಂಡು ಹಿಡಿಯುವ ದಿಸೆಯಲ್ಲಿ ಯಾವುದೇ ರಾಜಕಾರಣಿಗಳು ಗಂಭೀರ ಚಿಂತನೆ ನಡೆಸಿಲ್ಲ.ಪರಿಣಾಮ ಪ್ರಸ್ತುತ ಹೀನಾಯ ಸ್ಥಿತಿಗೆ ತಲುಪಿ ರೈತರಪಾಲಿಗೆ ಸಿಹಿಯಾಗಬೇಕಿದ್ದ ಕಾರ್ಖಾನೆ ಕಹಿಯಾಗಿ ಪರಿಣಮಿಸಿದೆ.

2006ರಲ್ಲಿ ಕಾರ್ಖಾನೆಯಲ್ಲಿ ಅಧಿಕಾರ ನಡೆಸುತ್ತಿದ್ದ ಆಡಳಿತ ಮಂಡಳಿ ರಾಜಕೀಯ ಕಾರಣಗಳಿಂದ ರಾಜೀನಾಮೆ ನೀಡಿ ನಿರ್ಗಮಿಸಿತು. ಅಂದಿನ ಮುಖ್ಯಮಂತ್ರಿಗಳಾಗಿದ್ದ ಎಚ್‌.ಡಿ.ಕುಮಾರಸ್ವಾಮಿ ಅವರ ಮೇಲೆ ಶಾಸಕ ಸಾ.ರಾ.ಮಹೇಶ್‌ ಖಾಸಗಿಯವರಿಗೆ ವಹಿಸಲು ಒತ್ತಡ ತಂದಿದ್ದರಿಂದ ಚೆನ್ನೈ ಮೂಲದ ಅಂಬಿಕಾ ಶುಗರ್ಸ್ ಕಂಪನಿ 22 ವರ್ಷಗಳ ಅವಧಿಗೆ 169 ಕೋಟಿ ರೂ.ಗಳಿಗೆ ಗುತ್ತಿಗೆ ಪಡೆಯಿತು.ಆದರೆ, ಗುತ್ತಿಗೆ ನೀಡಿಕೆಯಲ್ಲಿ ಎಡವಿದ ಸರ್ಕಾರ ಅಂಬಿಕಾ ಶುಗರ್ಸ್ಗೆ ಕಾರ್ಖಾನೆಯನ್ನು ನೋಂದಣಿ ಮಾಡಿಸದೆ ನಿರ್ಲಕ್ಷ್ಯ ವಹಿಸಿದ್ದರಿಂದ ಕಂಪನಿಯವರು ಸರ್ಕಾರಕ್ಕೆ ತೆರಿಗೆ ವಂಚಿಸಿ 5ವರ್ಷಗಳ ನಂತರ ರೈತರು ಮತ್ತು ಕಾರ್ಮಿಕರಿಗೆ ಕೈಕೊಟ್ಟು ಕಾರ್ಖಾನೆಯಿಂದ ಕಾಲ್ಕಿತ್ತಿತು. ಇದರಿಂದ ತಾಲೂಕಿನ ಸಾವಿರಾರು ರೈತರು, 400ಕ್ಕೂ ಅಧಿಕ ಕಾರ್ಮಿಕರು ಹಾಗೂ ಕೂಲಿ ಕಾರ್ಮಿಕರು ಅತಂತ್ರರಾಗಿದ್ದಾರೆ.

ಸರ್ಕಾರವಾಗಲಿ, ಜಿಲ್ಲಾಡಳಿತವಾಗಲಿ ಕಾರ್ಖಾನೆಯ ಪುನರಾರಂಭದ ಬಗ್ಗೆ ಮನಸ್ಸು ಮಾಡಿಲ್ಲ.ಇತ್ತೀಚೆಗೆ ಕಾರ್ಖಾನೆಯನ್ನು ಖಾಸಗಿಯವರಿಗೆ ಗುತ್ತಿಗೆಗೆ ನೀಡಲು ಹಲವಾರು ಬಾರಿ ಟೆಂಡರ್‌ ಕರೆಯಲಾಗಿತ್ತಾದರೂ ಯಾರೂ ಟೆಂಡರ್‌ಪ್ರಕ್ರಿಯೆಯಲ್ಲಿ ಭಾಗವಹಿಸದಿದ್ದರಿಂದ ಮತ್ತೆ ನನೆಗುದಿಗೆ ಬಿದ್ದಿದೆ. ಸಕ್ಕರೆ ಕಾರ್ಖಾನೆಯನ್ನುಸರ್ಕಾರವೇ ವಹಿಸಿಕೊಂಡು ಕೂಡಲೇ ಕಬ್ಬು ಅರೆಯುವ ಕಾರ್ಯ ಆರಂಭಿಸದಿದ್ದರೆ ಯಂತ್ರೋಪಕರಣಗಳು ತುಕ್ಕು ಹಿಡಿದು ಹಾಳಾಗುವುದು ನಿಶ್ಚಿತ. ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗದವರು ಕಾರ್ಖಾನೆಯ ಸಮಸ್ಯೆಯ ಬಗ್ಗೆ ಮಾತನಾಡುತ್ತಿದ್ದು, ಪರಿಹಾರ ಮತ್ತು ಪರ್ಯಾಯ ಕ್ರಮಗಳ ಬಗ್ಗೆ ಚಿಂತಿಸುತ್ತಿಲ್ಲ. ಸರ್ಕಾರ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಉಳಿಸಿಕೊಳ್ಳದಿದ್ದರೆ ರೈತರ ಪರಿಶ್ರಮದಿಂದಲೇ ಜನ್ಮ ತಾಳಿದ ಕಾರ್ಖಾನೆ ಬಾಗಿಲು ಹಾಕಿಕೊಳ್ಳುವ ದಿನಗಳು ದೂರವಿಲ್ಲ.

ಕಾಂಗ್ರೆಸ್‌ ಸರ್ಕಾರದಲ್ಲಿ ನಮ್ಮ ಜಿಲ್ಲೆಯವರೇ ಆದ ಸಿದ್ದರಾಮಯ್ಯ ಮುಖ್ಯಮಂತ್ರಿ ಗಳಾಗಿದ್ದಾಗ ಶೀಘ್ರದಲ್ಲೇ ಕಾರ್ಖಾನೆ ಆರಂಭವಾಗುತ್ತದೆ ಎಂದು ರೈತರು ನಿರೀಕ್ಷೆಯ ಮೂಟೆಯನ್ನೇ ಹೊತ್ತಿದ್ದರು. ಆದರೆ, ಒಮ್ಮೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆಯಲ್ಲಿ ಸ್ಥಗಿತಗೊಂಡಿರುವ ಸಕ್ಕರೆ ಕಾರ್ಖಾನೆಯ ಬಗ್ಗೆ ತುಟಿ ಬಿಚ್ಚಲಿಲ್ಲ. ಜತೆಗೆ ಕಾರ್ಖಾನೆ ವ್ಯಾಪ್ತಿಯ ಆಡಳಿತ ಪಕ್ಷದ ಶಾಸಕರೂ ಅವರ ಗಮನಕ್ಕೆ ತರಲಿಲ್ಲ.
ಪ್ರಸಕ್ತ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು,ರೈತಪರ ಹೋರಾಟಗಾರ  ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿರುವುದರಿಂದ ಈಗಲಾದರೂ ಮುಖ್ಯಮಂತ್ರಿಗಳು 9 ವರ್ಷಗಳಿಂದ ಕಬ್ಬು ಅರೆಯುವ ಕಾರ್ಯ ಸ್ಥಗಿತಗೊಳಿಸಿರುವ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ಪುನರಾರಂಭದ ಬಗ್ಗೆಗಮನ ಹರಿಸಬೇಕು ಎಂಬುದು ತಾಲೂಕಿನ ರೈತರಒಕ್ಕೊರಲ ಒತ್ತಾಯವಾಗಿದೆ.

  • ಗೇರದಡ ನಾಗಣ್ಣ

 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.