ಐಟಿ ರೈಡ್ ಬಿಜೆಪಿ ಕೃಪಾಪೋಷಿತ, ಐಟಿ ಮುಖ್ಯಸ್ಥ ಬಿಜೆಪಿ ಅಧ್ಯಕ್ಷರ ಕೈಗೊಂಬೆ- ಪುಟ್ಟರಾಜು
Team Udayavani, Mar 28, 2019, 9:47 AM IST
ಬೆಂಗಳೂರು: ನನ್ನ ಹಾಗು ಇತರ ಜೆಡಿಎಸ್ ಮುಖಂಡರ ಮನೆ ಮೇಲೆ ನಡೆದ ಐಟಿ ದಾಳಿಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯೇ ಕಾರಣ. ಇದರಿಂದ ಚುನಾವಣೆಯಲ್ಲಿ ಗೆಲ್ಲಬಹುದೆಂದು ಎಂದುಕೊಂಡರೇ ಅದು ಅವರ ಭ್ರಮೆ ಎಂದು ಸಚಿವ ಸಿ.ಎಸ್.ಪುಟ್ಟರಾಜು ಹೇಳಿಕೆ ನೀಡಿದ್ದಾರೆ.
ಗುರುವಾರ ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ನೀರಾವರಿ ಸಚಿವ ಸಿ.ಎಸ್ ಪುಟ್ಟರಾಜು, ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಸೇರಿ ಹತ್ತಕ್ಕೂ ಹೆಚ್ಚು ಜೆಡಿಎಸ್ ನಾಯಕರ ಮನೆ ಮೇಲೆ ಐಟಿ ದಾಳಿ ನಡೆಸಿದ್ದಾರೆ.
ದಾಳಿ ನಂತರ ಮಾತನಾಡಿದ ಪುಟ್ಟರಾಜು, ‘ಇದು 100 ಪ್ರತಿಶತ ಬಿಜೆಪಿ ಬೆಂಬಲಿತ ಅಭ್ಯರ್ಥಿಯ ಮೂಲಕ ನಡೆದ ದಾಳಿ. ಐಟಿ ಮುಖ್ಯಸ್ಥರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕೈಗೊಂಬೆ. ಐಟಿ ದಾಳಿಯ ಬಗ್ಗೆ ನಿನ್ನೆಯೇ ಮುಖ್ಯಮಂತ್ರಿಗಳಿಗೆ ಬಿಜೆಪಿ ನಾಯಕರಿಂದ ಮಾಹಿತಿ ಬಂದಿದೆ. ‘ ಎಂದು ಕಿಡಿಕಾರಿದರು.
ಐಟಿ ದಾಳಿ ನಡೆಸಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲ್ಲಬಹುದು ಎಂದು ಕೊಂಡರೆ ಅದು ಅವರ ಭ್ರಮೆ. ಆದರೆ ಜೆಡಿಎಸ್ ಕಾರ್ಯಕರ್ತರು ಇನ್ನೂ ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡುತ್ತಾರೆ . ಹಾಗಾಗಿ ಚುನಾವಣೆ ಗೆಲುವು ನಮ್ಮದೇ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
MUST WATCH
ಹೊಸ ಸೇರ್ಪಡೆ
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ