ಮಂಡ್ಯ ಮಾಜಿ ಶಾಸಕರ ಜತೆ ಸುಮಲತಾ ಸಭೆ
Team Udayavani, May 2, 2019, 3:10 AM IST
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಷ್ ಅವರು ಮಂಗಳವಾರ ರಾತ್ರಿ ಕಾಂಗ್ರೆಸ್ನ ಮಾಜಿ ಶಾಸಕರ ಜತೆ ಸಭೆ ನಡೆಸಿದ್ದು, ಕುತೂಹಲ ಮೂಡಿಸಿದೆ.
ಸುಮಲತಾ ಅವರು ಪಾಲ್ಗೊಂಡಿದ್ದ ಸಭೆಯಲ್ಲಿ ಮಾಜಿ ಸಚಿವ ಚೆಲುವರಾಯಸ್ವಾಮಿ, ಮಾಜಿ ಶಾಸಕರಾದ ಎಚ್.ಸಿ.ಬಾಲಕೃಷ್ಣ, ರಮೇಶ್ ಬಂಡಿಸಿದ್ದೇಗೌಡ, ನರೇಂದ್ರಸ್ವಾಮಿ, ರವಿ ಗಣಿಗ, ಕೆ.ಚಂದ್ರಶೇಖರ್, ಬೆಂಗಳೂರು ನಗರ ಯುವ ಕಾಂಗ್ರೆಸ್ ಅಧ್ಯಕ್ಷ ರಘುವೀರ್ಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಮಳವಳ್ಳಿ ಶಿವಣ್ಣ ಅವರು ಭಾಗಿಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಲೋಕಸಭೆ ಚುನಾವಣೆ ಫಲಿತಾಂಶ, ಯಾವ್ಯಾವ ಕ್ಷೇತ್ರದಲ್ಲಿ ಎಷ್ಟು ಪ್ರಮಾಣದ ಮತದಾನ ಆಗಿದೆ. ಎಷ್ಟು ಮತ ನಿಖೀಲ್ಗೆ ಸಿಗಬಹುದು, ಸುಮಲತಾ ಪರ ಎಷ್ಟು ಮತ ಬಂದಿದೆ, ಯಾವ ಕ್ಷೇತ್ರದಲ್ಲಿ ಲೀಡ್ ಸಿಗಬಹುದು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು ಎಂದು ಹೇಳಲಾಗಿದೆ.
ರಾಕ್ಲೈನ್ ವೆಂಕಟೇಶ್ ಆಯೋಜಿಸಿದ್ದ ಔತಣಕೂಟದಲ್ಲಿ ಇವರೆಲ್ಲಾ ಪಾಲ್ಗೊಂಡಿದ್ದರು ಎಂದು ಹೇಳಲಾಗುತ್ತಿದೆಯಾದರೂ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ಮಾಜಿ ಶಾಸಕರು ಮೈತ್ರಿ ಅಭ್ಯರ್ಥಿ ಪರ ಕೆಲಸ ಮಾಡದೆ ಸುಮಲತಾ ಪರ ಕೆಲಸ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿರುವುದಕ್ಕೂ ಈ ಸಭೆ ನಡೆದಿರುವುದಕ್ಕೂ ಸಂಬಂಧ ಇದೆ ಎಂದು ಜೆಡಿಎಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ನವರು ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖೀಲ್ ಪರ ಕೆಲಸ ಮಾಡಲೇ ಇಲ್ಲ. ಮೇಲ್ನೋಟಕ್ಕೆ ಮೌನ ಎಂದು ಹೇಳಿದರೂ ಆಂತರಿಕವಾಗಿ ಸುಮಲತಾ ಪರ ಕೆಲಸ ಮಾಡಿದ್ದಾರೆ. ಅವರ ವಿರುದ್ಧ ಕಾಂಗ್ರೆಸ್ ಯಾವುದೇ ಕ್ರಮ ಕೈಗೊಂಡಿಲ್ಲ. ಇದಕ್ಕೆ ಪಕ್ಷದ ಕೆಲವು ನಾಯಕರ ಕುಮ್ಮಕ್ಕು ಇತ್ತು ಎಂಬ ಆರೋಪಕ್ಕೆ ಮಂಗಳವಾರ ರಾತ್ರಿಯ ಸಭೆಯೇ ಸಾಕ್ಷಿ ಎಂದು ಹೇಳಿದ್ದಾರೆ.
ಅತ್ತ ಮೈಸೂರಿನಲ್ಲಿ ಜಿ.ಟಿ.ದೇವೇಗೌಡರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಿ ಹೊಂದಲಿಲ್ಲ. ತಳಮಟ್ಟದ ಕಾರ್ಯಕರ್ತರು ಜಿದ್ದಾಜಿದ್ದಿ ಮರೆತಿಲ್ಲ. ನಮ್ಮಲ್ಲಿ ಜೆಡಿಎಸ್ ಕಾರ್ಯಕರ್ತರೇ ಬಿಜೆಪಿಗೆ ಮತ ಹಾಕಿಸಿದ್ದಾರೆ ಎಂದು ಹೇಳಿದ ಬೆನ್ನಲ್ಲೇ ಸುಮಲತಾ ಅವರು ಮಂಡ್ಯದ ಕಾಂಗ್ರೆಸ್ನ ನಾಯಕರು ಹಾಗೂ ಮಾಜಿ ಶಾಸಕರ ಜತೆ ಸಭೆ ಮಾಡಿರುವ ವಿಡಿಯೋ ದೃಶ್ಯಾವಳಿ ಬಹಿರಂಗಗೊಂಡಿದೆ. ಸಭೆಯಲ್ಲಿ ಸಿದ್ದರಾಮಯ್ಯ ಅವರ ಆಪ್ತ ಮಳವಳ್ಳಿ ಶಿವಣ್ಣ ಪಾಲ್ಗೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಮೈಸೂರು-ಮಂಡ್ಯದಲ್ಲಿ ಮೈತ್ರಿ ಧರ್ಮ ಪಾಲನೆಯಾಗಿಲ್ಲ ಎಂದು ಕಾಂಗ್ರೆಸ್ನವರ ಮೇಲೆ ಜೆಡಿಎಸ್, ಜೆಡಿಎಸ್ನವರ ಮೇಲೆ ಕಾಂಗ್ರೆಸ್ನವರು ಆರೋಪ ಮಾಡುತ್ತಿದ್ದಾರೆ. ಒಟ್ಟಾರೆ, ಫಲಿತಾಂಶದ ನಂತರ ಯಾರ್ಯಾರು, ಎಲ್ಲೆಲ್ಲಿ ಕೈ ಕೊಟ್ಟಿದ್ದಾರೆ ಎಂಬುದು ತಿಳಿಯಲಿದೆ.
ಸಿದ್ದು ಸಭೆ ಕುತೂಹಲ: ಈ ಮಧ್ಯೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ರಾತ್ರಿ ತಮ್ಮ ಆಪ್ತರ ಜತೆ ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ. ಸಚಿವರಾದ ಜಮೀರ್ ಅಹಮದ್, ಸತೀಶ್ ಜಾರಕಿಹೊಳಿ, ಮಾಜಿ ಸಚಿವ ಚೆಲವರಾಯಸ್ವಾಮಿ, ಮಾಜಿ ಶಾಸಕ ಬಾಲಕೃಷ್ಣ ಅವರ ಜತೆ ಚರ್ಚಿಸಿ, ಮೈಸೂರು, ಮಂಡ್ಯ, ತುಮಕೂರು, ಹಾಸನ ಸೇರಿದಂತೆ ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಮಾಹಿತಿ ಪಡೆದರು. ಲೋಕಸಭೆ ಚುನಾವಣೆ ಫಲಿತಾಂಶದ ನಂತರದ ಬೆಳವಣಿಗೆಗಳ ಬಗ್ಗೆಯೂ ಚರ್ಚಿಸಿದರು ಎಂದು ತಿಳಿದು ಬಂದಿದೆ.
ಮಂಗಳವಾರ ರಾತ್ರಿಯ ಸಭೆಯಲ್ಲಿದ್ದವರೆಲ್ಲಾ 25 ಸಾವಿರ ಮತಗಳ ಅಂತರದಿಂದ ಸೋತವರು. ಡೆಡ್ ಹಾರ್ಸ್ಗಳು, ಸತ್ತ ಕುದುರೆಗಳಿಗೆ ಯಾವ ಖದರ್ ಇರುತ್ತದೆ? ಯಾರು ಸೋಲುತ್ತಾರೆ, ಗೆಲ್ಲುತ್ತಾರೆ ಎಂದು ಹೇಳಲು ಹೇಗೆ ಸಾಧ್ಯ? ಮೇ 23ಕ್ಕೆ ಎಲ್ಲವೂ ಗೊತ್ತಾಗಲಿದೆ.
-ಎಚ್.ಸಿ.ಬಾಲಕೃಷ್ಣ, ಮಾಜಿ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್