ಲಾಖೀಂಪುರ್ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ
Team Udayavani, Oct 20, 2021, 10:15 PM IST
ನವದೆಹಲಿ : ಇದೇ ತಿಂಗಳ 3ರಂದು ಉತ್ತರ ಪ್ರದೇಶದ ಲಾಖೀಂಪುರದಲ್ಲಿ ಪ್ರತಿಭಟನಾ ನಿರತರ ರೈತರ ಮೇಲೆ ಕಾರು ಚಲಾಯಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ, ಅಂತ್ಯವಿಲ್ಲದ ತನಿಖೆಯಂತಾಗಬಾರದು ಎಂದು ಸುಪ್ರೀಂ ಕೋರ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚ್ಯವಾಗಿ ಹೇಳಿದೆ. ಅಲ್ಲದೆ, ಪ್ರಕರಣದ ತನಿಖೆಯ ಪ್ರಗತಿಯ ವರದಿಯನ್ನು ಅ. 27ರೊಳಗ್ಗೆ ಸಲ್ಲಿಸುವಂತೆ ತಿಳಿಸಿದೆ.
ಬುಧವಾರದಂದು, ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ಅಫಿಡವಿಟ್ ಸಲ್ಲಿಸಿರುವ ಉತ್ತರ ಪ್ರದೇಶ ಸರ್ಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 10 ಜನರನ್ನು ಬಂಧಿಸಿರುವುದಾಗಿ ತಿಳಿಸಿದೆ. ಜೊತೆಗೆ, ಪ್ರತಿಭಟನಾ ನಿರತ ರೈತರು ಮೂವರನ್ನು ಥಳಿಸಿ ಹತ್ಯೆ ಮಾಡಿದ್ದಾರೆಂದೂ ಇದೇ ಅಫಿಡವಿಟ್ನಲ್ಲಿ ಉತ್ತರ ಪ್ರದೇಶ ಸರ್ಕಾರ ಉಲ್ಲೇಖೀಸಿದೆ.
ಅಫಿಡವಿಟ್ ಸ್ವೀಕರಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠ, ಪ್ರಕರಣದಲ್ಲಿ ಲಭ್ಯವಿರುವ ಎಲ್ಲಾ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಯನ್ನು ಪ್ರಕರಣಕ್ಕೆ ಸಂಬಂಧಿಸಿದ ಜಿಲ್ಲಾ ನ್ಯಾಯಾಧೀಶರಿಗೆ ಖುದ್ದಾಗಿ ಸಲ್ಲಿಸಬೇಕೆಂದು ಸೂಚಿಸಿತು.
ಇದನ್ನೂ ಓದಿ :ಕ್ಯಾಶ್ಲೆಸ್ ವ್ಯವಹಾರದತ್ತ ಕೊಂಕಣ ರೈಲ್ವೇ : ಎಸ್ ಬಿಐನೊಂದಿಗೆ ಕೊಂಕಣ ರೈಲ್ವೇ ಒಪ್ಪಂದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!
MUST WATCH
ಹೊಸ ಸೇರ್ಪಡೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
Bhuvanam gaganam Teaser: ಭುವನಂ ಗಗನಂ ಟೀಸರ್ ಬಂತು
Bharjari Gandu: ಟ್ರೇಲರ್ನಲ್ಲಿ ಭರ್ಜರಿ ಗಂಡು
Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್ನಲ್ಲಿ ಶೂಟಿಂಗ್!
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್