ಸಂಸತ್ನಲ್ಲಿ ಅರ್ಥಪೂರ್ಣ ಚರ್ಚೆಗಳಿಲ್ಲ :ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಮಣ ವಿಷಾದ
Team Udayavani, Aug 16, 2021, 6:50 AM IST
ಹೊಸದಿಲ್ಲಿ: ಸಂಸತ್ನಲ್ಲಿ ವಿಧೇಯಕಗಳ ಬಗ್ಗೆ ಉಪಯುಕ್ತ ಚರ್ಚೆಯಾಗುತ್ತಿಲ್ಲ. ಇದು ನಿಜಕ್ಕೂ ವಿಷಾದನೀಯ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ರವಿವಾರ ವಿಷಾದಿಸಿದ್ದಾರೆ. ವಿಧೇಯಕಗಳ ಬಗ್ಗೆ ಸೂಕ್ತ ರೀತಿಯಲ್ಲಿ ಚರ್ಚೆ ನಡೆದು, ಅದರಲ್ಲಿದ್ದ ಲೋಪಗಳನ್ನು ತಿದ್ದದೇ ಹೋದರೆ ಅಸ್ಪಷ್ಟ ಕಾನೂನುಗಳಾಗುತ್ತವೆ. ಇದರಿಂದಾಗಿ ನ್ಯಾಯಾಲಯಗಳ ಮೇಲೆ ಹೊರೆ ಹೆಚ್ಚಾಗುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಸುಪ್ರೀಂ ಕೋರ್ಟ್ ಬಾರ್ ಎಸೋಸಿಯೇಷನ್ ಆಯೋಜಿಸಿದ್ದ 75ನೇ ಸ್ವಾತಂತ್ರ್ಯ ದಿನ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಮಾತನಾಡಿದರು.
“ಸಂಸತ್ನಲ್ಲಿ ನಿಗದಿತ ವಿಚಾರಗಳ ಬಗ್ಗೆ ಮಂಡಿಸಲಾಗುವ ವಿಧೇಯಕದ ಬಗ್ಗೆ ಸಮಗ್ರ ವಾಗಿ ಚರ್ಚೆಯಾಗಬೇಕು. ವಿಚಾರ ಮಂಡನೆ ಯಾದಾಗ ಅದರಲ್ಲಿನ ನ್ಯೂನತೆಗಳ ಬಗ್ಗೆ ಚರ್ಚೆಯಾಗಿ, ಪರಿಹಾರ ಸೂತ್ರ ಲಭಿಸುತ್ತದೆ. ಆದರೆ, ಸದ್ಯ ಸಂಸತ್ನಲ್ಲಿ ವಿಧೇಯಕಗಳ ಬಗ್ಗೆ ಅಪೂರ್ಣ ಚರ್ಚೆಗಳು ಉಂಟಾ ಗುತ್ತವೆ. ಅದಕ್ಕೆ ಸ್ಪಷ್ಟೀಕರಣ ಕೋರಿ ನ್ಯಾಯಾಲಯದ ಬಾಗಿಲು ತಟ್ಟು ತ್ತಾರೆ. ಇದು ವಿನಾಕಾರಣವಾಗಿ ನ್ಯಾಯಾಂಗದ ಮೇಲೆ ಹೊರೆ ಹೆಚ್ಚು ಮಾಡಿ ದಂತಾಗುತ್ತದೆ’ ಎಂದು ಸಿಜೆಐ ಅಭಿಪ್ರಾಯಪಟ್ಟಿದ್ದಾರೆ.
ಸ್ವಾತಂತ್ರ್ಯ ನಂತರ ನ್ಯಾಯವಾದಿಗಳು ಸಂಸತ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರು ಚರ್ಚೆಯಲ್ಲಿ ಭಾಗವಹಿಸುವುದರ ಮೂಲಕ ತಿಳಿವಳಿಕೆ ಪೂರ್ಣ ಚರ್ಚೆಗೆ ಕಾರಣರಾಗಬೇಕು ಎಂದರು. ನ್ಯಾಯವಾದಿಗಳು ಮತ್ತೂಮ್ಮೆ ತಮ್ಮನ್ನು ವಿಧೇಯಕಗಳ ಬಗ್ಗೆ ಸಮಗ್ರವಾಗಿ ಚರ್ಚಿಸುವು ದರ ಮೂಲಕ ಸಾರ್ವಜನಿಕರಿಗೆ ಅನುಕೂಲವಾ ಗುವಂತೆ ವಿಧೇಯಕಗಳು ಮತ್ತು ಕಾಯ್ದೆಗಳ ಬಗ್ಗೆ ಹೆಚ್ಚು ಬೆಳಕು ಚೆಲ್ಲಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ