ಅನರ್ಹ ಶಾಸಕರ ಅರ್ಜಿ ವಿಚಾರಣೆ ಗುರುವಾರಕ್ಕೆ ಮುಂದೂಡಿದ ಸುಪ್ರೀಂಕೋರ್ಟ್
Team Udayavani, Sep 25, 2019, 4:11 PM IST
ನವದೆಹಲಿ:ಕಾಂಗ್ರೆಸ್ ಮತ್ತು ಜೆಡಿಎಸ್ ನ 17 ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಗುರುವಾರಕ್ಕೆ ಮುಂದೂಡಿದೆ.
ಬುಧವಾರ ಅನರ್ಹ ಶಾಸಕರ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರು ಒಂದೂವರೆ ಗಂಟೆಗಳ ಕಾಲ ವಾದ ಮಂಡಿಸಿದ್ದರು. ಮಧ್ಯಾಹ್ನದ ಭೋಜನ ವಿರಾಮದ ಬಳಿಕ ಸ್ಪೀಕರ್ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅನರ್ಹ ಶಾಸಕ ಡಾ.ಸುಧಾಕರ್ ಪರ ಸುಂದರಂ ವಾದ ಮಂಡಿಸಿದ್ದರು.
ವಾದ, ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ನ ನ್ಯಾ.ಎನ್ ವಿ ರಮಣ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.