ಸುರೇಶ ಅಂಗಡಿಯನ್ನು ಸಿಎಂ ಮಾಡಲು ದೆಹಲಿಯಲ್ಲಿ ಚರ್ಚೆ ಆಗಿತ್ತು: ಮಾವ ಸಿಡಿಸಿದ ಬಾಂಬ್
Team Udayavani, Sep 29, 2020, 1:22 PM IST
ಬೆಳಗಾವಿ: ‘ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸುರೇಶ ಅಂಗಡಿ ಅವರ ಹೆಸರು ಕಳೆದ ನಾಲ್ಕು ತಿಂಗಳಿಂದ ರಾಷ್ಟ್ರಮಟ್ಟದಲ್ಲಿ ಮುಂಚೂಣಿಯಲ್ಲಿ ಇತ್ತು’ ಎಂದು ಸುರೇಶ್ ಅಂಗಡಿ ಅವರ ಮಾವ ಲಿಂಗರಾಜ್ ಪಾಟೀಲ ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದರು.
ಸದಾಶಿವ ನಗರ ಸಮೀಪದ ಸಂಪಿಗೆ ರಸ್ತೆಯಲ್ಲಿರುವ ಸುರೇಶ್ ಅಂಗಡಿ ಅವರ ನಿವಾಸಕ್ಕೆ ನಳಿನ್ ಕುಮಾರ್ ಕಟೀಲ್ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
‘ಮುಂದಿನ ಮುಖ್ಯಮಂತ್ರಿ ಸುರೇಶ್ ಅಂಗಡಿಯವರನ್ನೇ ಮಾಡಬೇಕೆಂಬ ಚರ್ಚೆ ಬಲವಾಗಿ ಕೇಳಿ ಬರುತ್ತಿತ್ತು. ಈ ಬಗ್ಗೆ ದೆಹಲಿ ಮಟ್ಟದಲ್ಲಿ ಚರ್ಚೆಗಳು, ಸಭೆಗಳು ನಡೆದಿವೆ. ಯಡಿಯೂರಪ್ಪ ನಂತರ ಲಿಂಗಾಯತ ಪ್ರಬಲ ನಾಯಕ ಅಂಗಡಿ ಆಗಿದ್ದರು. ಜೊತೆಗೆ ಶುದ್ಧ ಪ್ರಾಮಾಣಿಕ ಹಸ್ತದ ಅಂಗಡಿಯವರನ್ನು ಮುಖ್ಯಮಂತ್ರಿ ಮಾಡಿದರೆ ಒಳಿತು ಎಂಬ ಮಾತುಗಳು ಚರ್ಚೆಯಲ್ಲಿ ಇದ್ದವು. ಆದರೆ ವಿಧಿ ಕೈ ಹಿಡಿಯಲಿಲ್ಲ’ ಎಂದರು.
‘ಮುಂದಿನ ಲೋಕಸಭಾ ಉಪಚುನಾವಣೆಗೆ ಅಂಗಡಿ ಅವರ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಬೇಕು. ಟಿಕೆಟ್ ನೀಡುವ ವಿಚಾರದಲ್ಲಿ ಪಕ್ಷ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಅಂಗಡಿ ಅವರ ಪತ್ನಿ ಮಂಗಳಾ, ಪುತ್ರಿಯರಾದ ಸ್ಪೂರ್ತಿ ಹಾಗೂ ಶ್ರದ್ಧಾ ಅವರಿಗಾಗಲೀ ಅಥವಾ ಸುರೇಶರ ಸಹೋದರರಿಗಾಗಲೀ ಟಿಕೆಟ್ ನೀಡಬೇಕು. ಈ ಕುರಿತು ಕಟೀಲ್ ಅವರ ಗಮನಕ್ಕೂ ತರಲಾಗಿದೆ’ ಎಂದರು.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
‘ಕುಟುಂಬದವರಿಗೆ ಟಿಕೆಟ್ ನೀಡುವ ಬಗ್ಗೆ ಈಗಾಗಲೇ ರಾಜ್ಯಸಭಾ ಸದಸ್ಯ ಕಡಾಡಿ, ಜಿಲ್ಲೆಯ ಅನೇಕ ಶಾಸಕರು, ಬಿಜೆಪಿ ಜಿಲ್ಲಾಧ್ಯಕ್ಷರು, ಜಿಲ್ಲಾಮಟ್ಟದ ಮುಖಂಡರು ಒಲವು ತೋರಿದ್ದಾರೆ. ವಿಷಯ ಬಂದಾಗ ಜಿಲ್ಲಾ ಉಸ್ತುವಾರಿ ಸಚುವ ರಮೇಶ ಜಾರಕಿಹೊಳಿ ಸೇರಿದಂತೆ ಎಲ್ಲ ನಾಯಕರೊಂದಿಗೆ ಚರ್ಚೆ ನಡೆಯಲಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ